LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೂರನೇ ವ್ಯಕ್ತಿಯ ದೂರು ಆಧರಿಸಿ ಜಾತಿ ಪ್ರಮಾಣಪತ್ರ ರದ್ದುಪಡಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

Advertisement
Advertisement

ಮೂರನೇ ವ್ಯಕ್ತಿಯ ದೂರು ಆಧರಿಸಿ ಜಾತಿ ಪ್ರಮಾಣಪತ್ರ ರದ್ದುಪಡಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು
ಚಂದ್ರವಳ್ಳಿ ನ್ಯೂಸ್, ಚನ್ನಪಟ್ಟಣ:
ಅಪರಿಚಿತ ಅಥವಾ ಮೂರನೇ ವ್ಯಕ್ತಿಯು ನೀಡುವ ದೂರಿನ ಆಧಾರದ ಮೇಲೆ ಯಾವುದೇ ವ್ಯಕ್ತಿಯ ಜಾತಿ ಪ್ರಮಾಣಪತ್ರವನ್ನು ನೇರವಾಗಿ ರದ್ದುಪಡಿಸುವ ಕಾನೂನಾತ್ಮಕ ಅಧಿಕಾರ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗೆ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಪ್ರಮುಖ ಆದೇಶ ನೀಡಿದೆ.

ಮೂರನೇ ವ್ಯಕ್ತಿಯ ದೂರಿನನ್ವಯ ತಮ್ಮ ಜಾತಿ ಪ್ರಮಾಣಪತ್ರ ರದ್ದುಗೊಳಿಸಿದ್ದ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯ ಕ್ರಮವನ್ನು ಪ್ರಶ್ನಿಸಿ, ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಚಿಕ್ಕೇನಹಳ್ಳಿ ಗ್ರಾಮದ ಬೈರಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಾಲ್ ಅವರಿದ್ದ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ.
ಹೈಕೋರ್ಟ್ ನೀಡಿದ ಪ್ರಮುಖ ಆದೇಶ: ನಿಯಮಾನುಸಾರ ಮೇಲ್ಮನವಿ ಕಡ್ಡಾಯ: ತಹಶೀಲ್ದಾರರು ನೀಡಿದ ಜಾತಿ ಪ್ರಮಾಣಪತ್ರದ ವಿರುದ್ಧ ಆಕ್ಷೇಪಗಳಿದ್ದರೆ, 1990ರ ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಕಾಯ್ದೆಯ ಸೆಕ್ಷನ್ 4(ಬಿ) ಅಡಿಯಲ್ಲಿ ಮೇಲ್ಮನವಿ ಸಲ್ಲಿಸಬೇಕು.

ಜಿಲ್ಲಾಧಿಕಾರಿಗಳಿಗೆ ಮಾತ್ರ ಸ್ವಯಂಪ್ರೇರಿತ ಅಧಿಕಾರ: ಕಾಯ್ದೆಯ ಸೆಕ್ಷನ್ 4ಎಫ್ ಅಡಿಯಲ್ಲಿ ಜಿಲ್ಲಾಧಿಕಾರಿಗಳು (DC) ಮಾತ್ರವೇ ಸ್ವಯಂಪ್ರೇರಿತವಾಗಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬಹುದು.
ಸಮಿತಿಗೆ ಅಧಿಕಾರವಿಲ್ಲ: ಮೂರನೇ ವ್ಯಕ್ತಿಯಿಂದ ನೇರವಾಗಿ ದೂರು ಸ್ವೀಕರಿಸಿ ಪ್ರಮಾಣಪತ್ರ ರದ್ದುಗೊಳಿಸುವ ಕಾನೂನಾತ್ಮಕ ಅಧಿಕಾರ ಅಥವಾ ವ್ಯಾಪ್ತಿ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗೆ ಇಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ:
ಚಿಕ್ಕೇನಹಳ್ಳಿ ಗ್ರಾಮದ ಬೈರಯ್ಯ ಅವರಿಗೆ 1977ರಲ್ಲಿ ತಹಶೀಲ್ದಾರರು 'ಕಾಡು ಕುರುಬ' (ಪರಿಶಿಷ್ಟ ಪಂಗಡ) ಜಾತಿ ಪ್ರಮಾಣಪತ್ರ ನೀಡಿದ್ದರು. ಆದರೆ, ಈ ಪ್ರಮಾಣಪತ್ರ ವಿತರಣೆಯಲ್ಲಿ ಅಕ್ರಮ ನಡೆದಿದೆ ಎಂದು ಪತ್ರಿಕೆಯೊಂದರ ಪ್ರಧಾನ ಸಂಪಾದಕರು ಸಿಆರ್‌ಇ ಸೆಲ್‌ಗೆ (CRE Cell) ದೂರು ನೀಡಿದ್ದರು. ತನಿಖಾ ವರದಿ ಆಧಾರಿಸಿ ರಾಮನಗರ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯು 2021ರ ಜುಲೈ 15ರಂದು ಬೈರಯ್ಯ ಅವರ ಜಾತಿ ಪ್ರಮಾಣಪತ್ರವನ್ನು ರದ್ದುಗೊಳಿಸಿ ಆದೇಶಿಸಿತ್ತು.
ಇದೀಗ ಹೈಕೋರ್ಟ್ ಸಮಿತಿಯ ಆ ಆದೇಶವನ್ನು ರದ್ದುಗೊಳಿಸಿದ್ದು, ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಕಾನೂನುಬದ್ಧ ಸ್ವಾತಂತ್ರ್ಯ ನೀಡಿ ಅರ್ಜಿಯನ್ನು ವಿಲೇವಾರಿ ಮಾಡಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ ಆಧುನಿಕ ಜಗತ್ತಿನ ಕಣ್ಣಿಗೆ ಕಾಣದ ಶತ್ರು: ‘ಫ್ಯಾಟಿ ಲಿವರ್’ ತುಂಗಭದ್ರಾ ನದಿಯಲ್ಲಿ ಮುಳುಗಿ ತಾಯಿ-ಮಗಳು ಸಾವುಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಜೊತೆ ಸೋಶಿಯಲ್ ಮೀಡಿಯಾ ನಂಟು: ದೊಡ್ಡಬಳ್ಳಾಪುರದಲ್ಲಿ ಯುವಕನ ಬಂಧನ"ಭದ್ರಾ ನೀರು ಬಿಡದಿದ್ದರೆ ಬಂದ್": ರಾಷ್ಟ್ರೀಯ ಹೆದ್ದಾರಿ ತಡೆದು ಅಚ್ಚುಕಟ್ಟು ರೈತರ ಬೃಹತ್ ಆಕ್ರೋಶಮಹದಾಯಿ ರೈತರ ಮೇಲಿನ ಸುಳ್ಳು ಕೇಸ್ ಹಿಂಪಡೆಯಿರಿ: ವೀರೇಶ ಸೊಬರದಮಠ ಒತ್ತಾಯಮೂರನೇ ವ್ಯಕ್ತಿಯ ದೂರು ಆಧರಿಸಿ ಜಾತಿ ಪ್ರಮಾಣಪತ್ರ ರದ್ದುಪಡಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು"ನಿಮ್ಮ ಸೀರೆ ಚಕ್ರಕ್ಕೆ ಸಿಲುಕಲಿದೆ": ಬೈಕ್ ಸವಾರರನ್ನು ವಂಚಿಸಿ ಸರಗಳ್ಳತನ ಮಾಡುತ್ತಿದ್ದ ಮೂವರ ಬಂಧನಐಟಿ ಕಂಪನಿಗಳಿಗೆ ಬ್ಯಾಕ್ ಬಿಲ್ ವಸೂಲಿ ಇಲ್ಲ: ಬೆಸ್ಕಾಂ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್