Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ- ನ್ಯಾ.ರೋಣ ವಾಸುದೇವ್ ಕರೆ

Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೇವಲ ಸಂವಿಧಾನದ ಪೀಠಿಕೆಗೆ ಮಾತ್ರ ಸೀಮಿತವಾಗಿಲ್ಲ, ಅವರು ಇಡೀ ಸಂವಿಧಾನಕ್ಕೆ ಸೀಮಿತವಾಗಿದ್ದಾರೆ. ಕೇವಲ ಪೀಠಿಕೆಯನ್ನು ವಾಚಿಸಿ ಅದನ್ನು ಜೀವನದಲ್ಲಿ ಆಚರಣೆಗೆ ತರದಿದ್ದರೆ ಅಂತಹ ವಾಚನಕ್ಕೆ ಅರ್ಥವೇ ಇಲ್ಲಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ್ ಹೇಳಿದರು.

ನಗರದ ವಕೀಲರ ಭವನದಲ್ಲಿ ಶುಕ್ರವಾರ ಚಿತ್ರದುರ್ಗ ವಕೀಲರ ಸಂಘದ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಸಂವಿಧಾನದ ಪೀಠಿಕೆಯ ಬಗ್ಗೆ ಮಕ್ಕಳಿಗೆ ತಿಳಿಸಿಕೊಡಲಾಗುತ್ತಿದೆ ಮತ್ತು ಅದನ್ನು ವಾಚಿಸಲಾಗುತ್ತಿದೆ. ಆದರೆ ಬರಿ ಪೀಠಿಕೆ ಓದಿದರೆ ಸಾಲದು, ಸಂವಿಧಾನದಲ್ಲಿ ಅಡಕವಾಗಿರುವ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ನಾವು ಯಾವಾಗಲೂ ನಮ್ಮ ಹಕ್ಕುಗಳ ಬಗ್ಗೆ ಮಾತನಾಡುತ್ತೇವೆಯೇ ಹೊರತು, ಸಂವಿಧಾನದ ಭಾಗ 4ಎ ನಲ್ಲಿ ಉಲ್ಲೇಖಿಸಲಾದ ಮೂಲಭೂತ ಕರ್ತವ್ಯಗಳ ಬಗ್ಗೆ ಗಮನ ಹರಿಸುವುದಿಲ್ಲ. ಪ್ರತಿಯೊಬ್ಬರೂ ಆತ್ಮವಿಮರ್ಶೆ ಮಾಡಿಕೊಂಡು ದೇಶಕ್ಕೆ ನಿಷ್ಠೆಯಿಂದ, ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದೇವೆಯೇ ಮತ್ತು ಭ್ರಾತೃತ್ವವನ್ನು ಬೆಳೆಸುತ್ತಿದ್ದೇವೆಯೇ ಎಂದು ಪ್ರಶ್ನಿಸಿಕೊಳ್ಳಬೇಕು ಎಂದು ಹೇಳಿದರು.

ಅಂಬೇಡ್ಕರ್ ಅವರು ನೀಡಿದ ಸಂದೇಶಗಳನ್ನು ದೈನಂದಿನ ಜೀವನದಲ್ಲಿ ಪಾಲಿಸಿದಾಗ ಮಾತ್ರ ಆ ಹಿರಿಯ ಚೇತನಕ್ಕೆ ನಾವು ಸಲ್ಲಿಸುವ ನಿಜವಾದ ಗೌರವವಾಗುತ್ತದೆ. ಕೇವಲ ವರ್ಷಕ್ಕೊಮ್ಮೆ ಕಾರ್ಯಕ್ರಮಗಳನ್ನು ನಡೆಸಿ ಅವರನ್ನು ನೆನೆಯುವುದಕ್ಕಿಂತ, ಅವರ ಆದರ್ಶಗಳನ್ನು ಅನುಸರಿಸುವುದು ಮುಖ್ಯ ಎಂದು ಕರೆ ನೀಡಿದರು.

ಚಿತ್ರದುರ್ಗ ವಕೀಲರ ಸಂಘದ ಅಧ್ಯಕ್ಷ ಹೆಚ್.ಎಸ್.ಮಹೇಶ್ವರಪ್ಪ ಮಾತನಾಡಿ, ನಾಗರಿಕರು ಕೇವಲ ಹಕ್ಕುಗಳಿಗಾಗಿ ಹೋರಾಡದೆ, ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ಪಾಲಿಸಿದರೆ ಮಾತ್ರ ಭಾರತ ವಿಶ್ವಮಟ್ಟದಲ್ಲಿ ಮೊದಲ ಸ್ಥಾನಕ್ಕೇರಲು ಸಾಧ್ಯ ಎಂದು ಅಭಿಪ್ರಾಯವ್ಯಕ್ತಪಡಿಸಿದರು.

ಅಂಬೇಡ್ಕರ್ ಅವರು ಕೇವಲ ಸಂವಿಧಾನ ಶಿಲ್ಪಿಯಲ್ಲ, ಅವರು ಶ್ರೇಷ್ಠ ಆರ್ಥಿಕ ತಜ್ಞರೂ ಆಗಿದ್ದರು. 1923ರಲ್ಲಿ ಅವರು ಇಂಗ್ಲೆಂಡ್‍ನಲ್ಲಿ ಮಂಡಿಸಿದ ಆರ್ಥಿಕ ಪ್ರಬಂಧ ಮತ್ತು ರೂಪಾಯಿಯ ಮೌಲ್ಯದ ಕುರಿತಾದ ಅವರ ಚಿಂತನೆಗಳೇ 1935ರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆಗೆ ಮೂಲ ಪ್ರೇರಣೆಯಾದವು ಎಂದು ತಿಳಿಸಿದರು.

ದೇಶದ ಸಮೃದ್ಧಿಗಾಗಿ ನದಿಗಳ ಜೋಡಣೆಯಾಗಬೇಕು ಎಂಬ ಕನಸನ್ನು ಅಂಬೇಡ್ಕರ್ ಅಂದೇ ಕಂಡಿದ್ದರು. ಮಹಿಳೆಯರು ಮತ್ತು ಪುರುಷರಿಗೆ ಸಮಾನ ಶಿಕ್ಷಣ ದೊರೆತಾಗ ಮಾತ್ರ ದೇಶ ಅಭಿವೃದ್ಧಿ ಹೊಂದುತ್ತದೆ ಎಂದು ಅವರು ಪ್ರತಿಪಾದಿಸಿದ್ದರು ಎಂದು ತಿಳಿಸಿದ ಅವರು, ಸುಮಾರು 40 ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ, ಭಾರತದ ವೈವಿಧ್ಯಮಯ ಸಂಸ್ಕøತಿಗೆ ಅನುಗುಣವಾಗಿ ಸಮಾನತೆಯ ಸಂವಿಧಾನ ನೀಡಿದ ಮಹಾನ್ ನಾಯಕನನ್ನು ಸ್ಮರಿಸುವುದು ನಮ್ಮೆಲ್ಲರ ಸೌಭಾಗ್ಯ ಎಂದರು.

ಕಾರ್ಯಕ್ರಮದಲ್ಲಿ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೀರಣ್ಣ ಸೋಮಶೇಖರ್, 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ಹೆಚ್.ಗಂಗಾಧರ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ಡಿ.ಮಮತ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ರಶ್ಮಿ ಎಸ್.ಮರಡಿ, ವಕೀಲರ ಸಂಘದ ಉಪಾಧ್ಯಕ್ಷೆ ಕೆ.ಎಸ್.ಸಾವಿತ್ರಮ್ಮ, ಪ್ರಧಾನ ಕಾರ್ಯದರ್ಶಿ ಹೆಚ್.ಓ.ಜಗದೀಶ್ ಗುಂಡೇರಿ, ವಕೀಲರಾದ ಬಿಸ್ನಳ್ಳಿ ಜಯಣ್ಣ, ಟಿ.ಹೆಚ್.ಹನುಮಂತಪ್ಪ, ಚಂದ್ರಪ್ಪ ಸೇರಿದಂತೆ ವಕೀಲರು ಇದ್ದರು.

 

 news_1776469163_7_220.webp

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ