Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ಮೀಸಲಾತಿ: ರಾಜಕೀಯ ಬಣ್ಣ ಬೇಡ, ಇದು ರಾಷ್ಟ್ರದ ಸಾಮೂಹಿಕ ಯಶಸ್ಸು - ಪ್ರಧಾನಿ ಮೋದಿ ಕರೆ

Advertisement
ಮಹಿಳಾ ಮೀಸಲಾತಿ: ರಾಜಕೀಯ ಬಣ್ಣ ಬೇಡ, ಇದು ರಾಷ್ಟ್ರದ ಸಾಮೂಹಿಕ ಯಶಸ್ಸು - ಪ್ರಧಾನಿ ಮೋದಿ ಕರೆ
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮಹಿಳಾ ಮೀಸಲಾತಿ ಮಸೂದೆಯನ್ನು ಮಹಿಳಾ ಸಬಲೀಕರಣದ ದಿಸೆಯಲ್ಲಿ ಒಂದು "ಐತಿಹಾಸಿಕ ಹೆಜ್ಜೆ" ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಮಸೂದೆಗೆ ರಾಜಕೀಯ ಬಣ್ಣ ಬಳಿಯುವ ಅಗತ್ಯವಿಲ್ಲ ಎಂದು ಪ್ರತಿಪಕ್ಷಗಳಿಗೆ ಕಿವಿಮಾತು ಹೇಳಿದ್ದಾರೆ.

ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಕಾಯ್ದೆಯು ದಶಕಗಳ ಹಿಂದೆಯೇ ಜಾರಿಗೆ ಬರಬೇಕಿತ್ತು ಎಂಬ ಆಶಯ ವ್ಯಕ್ತಪಡಿಸಿದರು. ಪ್ರಧಾನಿಯವರ ಭಾಷಣದ ಪ್ರಮುಖ ಅಂಶಗಳು ಇಲ್ಲಿವೆ.

ರಾಜಕೀಯವನ್ನು ಮೀರಿದ ನಿರ್ಧಾರ: "ಈ ಮಸೂದೆ ಅಂಗೀಕಾರವಾದರೆ ಅದು ಯಾವುದೇ ಒಂದು ಪಕ್ಷಕ್ಕೆ ಸಿಕ್ಕ ವಿಜಯವಲ್ಲ, ಬದಲಿಗೆ ಇಡೀ ರಾಷ್ಟ್ರಕ್ಕೆ ಸಿಗುವ ಸಾಮೂಹಿಕ ಯಶಸ್ಸು" ಎಂದು ಪ್ರಧಾನಿ ಹೇಳಿದರು.

ಐತಿಹಾಸಿಕ ಅವಕಾಶ: ದೇಶದ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಅರ್ಧದಷ್ಟು ಜನಸಂಖ್ಯೆಯಾದ ಮಹಿಳೆಯರನ್ನು ಭಾಗಿ ಮಾಡಿಕೊಳ್ಳುವುದು ನಮ್ಮೆಲ್ಲರ ಅದೃಷ್ಟ ಮತ್ತು ಪವಿತ್ರವಾದ ಅವಕಾಶವಾಗಿದೆ.

ಹಳೆಯ ವಿಳಂಬದ ಬಗ್ಗೆ ವಿಷಾದ: ಮಹಿಳಾ ಮೀಸಲಾತಿಯನ್ನು 25-30 ವರ್ಷಗಳ ಹಿಂದೆಯೇ ಜಾರಿಗೊಳಿಸಬೇಕಿತ್ತು ಎಂದು ಅವರು ಅಭಿಪ್ರಾಯಪಟ್ಟರು.
ವಿರೋಧ ಪಕ್ಷಗಳಿಗೆ ಸಲಹೆ: "ಯಾವ ಪಕ್ಷಗಳೂ ತಾತ್ವಿಕವಾಗಿ ಇದನ್ನು ವಿರೋಧಿಸಿಲ್ಲ. ಆದರೆ ರಾಜಕೀಯ ದೃಷ್ಟಿಕೋನದಿಂದ ಕೆಲವರು ಅಪಸ್ವರ ಎತ್ತುತ್ತಿದ್ದಾರೆ. ನಾವೆಲ್ಲರೂ ಒಟ್ಟಾಗಿ ಇದನ್ನು ಜಾರಿಗೆ ತಂದರೆ ಇತಿಹಾಸ ನಮ್ಮನ್ನು ನೆನಪಿಸಿಕೊಳ್ಳುತ್ತದೆ" ಎಂದು ಸ್ನೇಹಿತನಂತೆ ಸಲಹೆ ನೀಡುವುದಾಗಿ ಮೋದಿ ತಿಳಿಸಿದರು.
"ಭಾರತವು ಪ್ರಜಾಪ್ರಭುತ್ವದ ತಾಯಿ. ನಮ್ಮ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ನಾವು ಅರ್ಥಪೂರ್ಣ ಪ್ರಯತ್ನ ಮಾಡುತ್ತಿದ್ದೇವೆ. ರಾಷ್ಟ್ರಕ್ಕೆ ಹೊಸ ದಿಕ್ಕು ನೀಡಲು ನಾವೆಲ್ಲರೂ ಒಂದಾಗಬೇಕಿದೆ."
ನರೇಂದ್ರ ಮೋದಿ, ಪ್ರಧಾನಮಂತ್ರಿ

ಮಹಿಳಾ ಮೀಸಲಾತಿ ಮತ್ತು ಸೀಮಾ ನಿರ್ಣಯ ಮಸೂದೆಯ ಕುರಿತು ಮಾತನಾಡಿದ ಪ್ರಧಾನಿಯವರು, ಅಭಿವೃದ್ಧಿಯ ಪ್ರಯಾಣದಲ್ಲಿ ಮಹಿಳೆಯರ ಪಾತ್ರ ಬಹಳ ದೊಡ್ಡದಿದೆ. ಇದನ್ನು ಕೇವಲ ಮತಬ್ಯಾಂಕ್ ರಾಜಕಾರಣವಾಗಿ ನೋಡದೆ, ರಾಷ್ಟ್ರ ನಿರ್ಮಾಣದ ಮಹತ್ತರ ಹೆಜ್ಜೆಯಾಗಿ ನೋಡಬೇಕು ಎಂದು ಎಲ್ಲ ಪಕ್ಷಗಳಲ್ಲಿ ಮನವಿ ಮಾಡಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ