Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲ್ತುಳಿತ 11 ಸಾವು, ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳು-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿವೆ. ಘಟನೆಗೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಕಂಡುಬರುವ ಮಾಹಿತಿ ಆಧರಿಸಿ ಸಂಬಂಧಪಟ್ಟ ಪೊಲೀಸರ ಮೇಲೆ ಸರ್ಕಾರ  ಕ್ರಮ ತೆಗೆದುಕೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರ ಬೇಡಿಕೆಯಂತೆ ನ್ಯಾಯಾಂಗ ತನಿಖೆಗೆ ಆದೇಶ ಮಾಡಲಾಗಿದೆ. ಅಂತೆಯೇ ಪೊಲೀಸರ ಮೇಲೆಯೂ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳು ಮಾಧ್ಯಮಗಳಿಗೆ ಹೇಳಿಕೆ ನೀಡಿ ಮಾತನಾಡಿ ವಿಧಾನಸೌಧದ ಭದ್ರತೆಯ ದೃಷ್ಟಿಯಿಂದ ಡಿಪಿಎಆರ್ ನಿಂದ ಷರತ್ತುಬದ್ಧ ಅನುಮತಿ ನೀಡಲಾಗಿತ್ತು. ಷರತ್ತುಗಳನ್ನು ಪಾಲಿಸಿ , ಕಾರ್ಯಕ್ರಮವನ್ನು ಆಯೋಜಿಸುವುದು ಪೊಲೀಸರ ಕರ್ತವ್ಯವಾಗಿತ್ತು.

ಈ ಅನುಮತಿ ವಿಧಾನಸೌಧದ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದು, ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮದಲ್ಲಿ ಕಾಲ್ತುಳಿತ ಘಟನೆ ಸಂಭವಿಸಿದೆ. ಪೊಲೀಸರು ಸಮರ್ಪಕವಾಗಿ ಇಲ್ಲಿ ಭದ್ರತೆ ಒದಗಿಸಬೇಕಿತ್ತು. ಆದರೆ ಪೊಲೀಸ್ ವ್ಯವಸ್ಥೆ ಸಮರ್ಪಕವಾಗಿರದಿದ್ದ ಕಾರಣ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಸ್ಥಳದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಬಗ್ಗೆ ಪೊಲೀಸ್ ಇಲಾಖೆಯಿಂದ ಸಮಗ್ರ ಮಾಹಿತಿ ಕೊಟ್ಟಿರಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಸರ್ಕಾರಿ ಕಾರ್ಯಕ್ರಮವಾಗಿರಲಿಲ್ಲ ಹಾಗೂ ಅದಕ್ಕೆ ನನಗೆ ಆಹ್ವಾನವೂ ಇರಲಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ನವರು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ.

ಮಧ್ಯಾಹ್ನ 3.50 ಕ್ಕೆ ಗಾಯಗೊಂಡವರು ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ, ನನಗೆ ಸಂಜೆ 5.45 ಕ್ಕೆ ಕ್ರೀಡಾಂಗಣದ ಬಳಿ ಕಾಲ್ತುಳಿತ ಉಂಟಾಗಿ, ಜನರು ಮೃತಪಟ್ಟಿರುವ ಮಾಹಿತಿ ದೊರೆಯಿತು. ಕಾಲ್ತುಳಿತದ ಘಟನೆ ಘಟಿಸಬಾರದಿತ್ತು. ಬಹಳ ಬೇಸರ ತಂದಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕ್ರಿಕೆಟ್ ಕ್ರೀಡಾಂಗಣವನ್ನು ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ಸರ್ಕಾರ ಪರಿಶೀಲಿಸಲಿದೆ. ಯಾವ ಸರ್ಕಾರದ ಅವಧಿಯಲ್ಲಿಯೂ ಇಂತಹ ಅಹಿತಕರ ಘಟನೆ ನಡೆಯಬಾರದು. ವೈಯಕ್ತಿಕವಾಗಿ ಈ ಘಟನೆ ನನಗೆ ಮತ್ತು ಸರ್ಕಾರಕ್ಕೆ ನೋವು ತಂದಿದೆ.

ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಐದು ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ. ಗುಪ್ತಚರ ಮುಖ್ಯಸ್ಥರನ್ನು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳನ್ನು ಬದಲಾಯಿಸಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರ ತಪ್ಪು ಮಾಡಿಲ್ಲವಾದರೂ ಘಟನೆ ದು:ಖ ತಂದಿದೆ.

ಹಲವಾರು ವರ್ಷಗಳ ಕನಸನ್ನು ಆರ್ ಸಿ ಬಿ ಕನಸು ನನಸಾಗಿಸಿದ್ದು, ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಅನುಮತಿ ನೀಡದಿರುವುದು ಗೃಹ ಸಚಿವರ ಅಸಮರ್ಪಕತೆಯನ್ನು ತೋರಿಸುತ್ತದೆ ಎಂದು ರಾಜ್ಯ ಬಿಜೆಪಿಯವರು ಹೇಳಿ ಈಗ ಘಟನೆಯ ನಂತರ ಸರ್ಕಾರವನ್ನು ದೂರುತ್ತಿದ್ದಾರೆ. ಇದು ರಾಜ್ಯ ಬಿಜೆಪಿಯ ಇಬ್ಬದಿತನದ ನಿಲುವನ್ನು ತೋರಿಸುತ್ತದೆ.

ಸರ್ಕಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ತಪ್ಪು ಹೆಜ್ಜೆ ಇಟ್ಟಿಲ್ಲ ಹಾಗೂ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ತೆಗೆದುಕೊಂಡಿರುವ ಕಾರಣ, ಸರ್ಕಾರಕ್ಕೆ ಮುಜುಗರವಾಗುವ ಪ್ರಶ್ನೆಯಿಲ್ಲ. ಉತ್ತರಪ್ರದೇಶದ ಕುಂಭಮೇಳದ ಸೇತುವೆ ಬಿದ್ದು ಜನರು ಮೃತ್ತಪಟ್ಟ ಸಂದರ್ಭದಲ್ಲಿ ಅಲ್ಲಿನ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿದರೇ? ಬಿಜೆಪಿ ಹಾಗೂ ಜೆಡಿಎಸ್ ನವರು ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ