Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಟ್ಟಿದ್ದು 13×20, ಕಟ್ಟಿದ್ದು 18×60, ಹೇಳುವವರು ಕೇಳುವವರು ಯಾರೂ ಇಲ್ಲವೇ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರಿನ ತಾಲ್ಲೂಕು ಕಛೇರಿ ಪಕ್ಕದ ಎಸ್ ಬಿಐ ಬ್ಯಾಂಕ್ ಹತ್ತಿರ ಶ್ರೀಕನಕ ನೌಕರರ  ಕ್ಷೇಮಾಭಿವೃದ್ಧಿ ಸಂಘಕ್ಕೆ ದಿನಾಂಕ 04-01-2021ರಂದು ನಡೆದ ನಗರಸಭೆ ಸಭೆಯಲ್ಲಿ 12.9×20 ಅಡಿ ಜಾಗವನ್ನು ಸರ್ಕಾರದ ನಿಯಾಮವಳಿಗಳ ಪ್ರಕಾರ ಮಂಜೂರು ಮಾಡಿದ್ದರು.

ಆ ಸಂಘದವರು ಅಕ್ರಮವಾಗಿ 18×60 ಅಡಿಯಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಬಗ್ಗೆ ದಿನಾಂಕ13-12-2024ರಂದು ಮಹಾನಾಯಕ ದಲಿತಸೇನೆ ಸಂಘಟನೆಯ ವತಿಯಿಂದ ಯೋಜನಾ ನಿರ್ದೇಶಕರು ಜಿಲ್ಲಾ ನಗರಕೋಶ ಚಿತ್ರದುರ್ಗ ಇವರಿಗೆ ದೂರು ನೀಡಲಾಗಿತ್ತು.

ದೂರಿನನ್ವಯ ಯೋಜನಾ ಅಧಿಕಾರಿಗಳು ಸಂಬಂಧ ಪಟ್ಟ ನಗರಸಭೆ ಅಧಿಕಾರಿಗಳಿಗೆ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿದ್ದರು ಕೂಡ ಆ ಸಂಘದವರು ಅಕ್ರಮವಾಗಿ ಕಟ್ಟಡವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶ್ರೀಶೈಲ ವೃತ್ತದ ಹತ್ತಿರ ಇರುವ ಕಾಂಗ್ರೆಸ್ ಪಕ್ಷದ ಜಾಗದಲ್ಲಿ ವಾಸಮಾಡುತ್ತಿರುವ ಬಡವರ ಮನೆಯನ್ನು ಏಕಾಏಕಿ ತೆರವುಗೊಳಿಸಿದ ನಗರಸಭೆ ಅಧಿಕಾರಿಗಳಿಗೆ ಇಷ್ಟೊಂದು ಜಾಗವನ್ನು ಆಕ್ರಮಿಸಿಕೊಂಡು ಅಕ್ರಮವಾಗಿ ಕಟ್ಟುತ್ತಿರುವುದು ಕಂಡರು ಕಾಣದ ಹಾಗೇ ಇರುವುದು ಏತಕ್ಕೆ ಎನ್ನುವುದೇ ಅನುಮಾನವಾಗಿದೆ.

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯವೆನ್ನುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಈ ಅಕ್ರಮ ಕಟ್ಟಡ ತೆರವುಗೊಳಿಸುವಂತೆ ಹಾಗೂ ಹೆಚ್ಚುವರಿ ಜಾಗದಲ್ಲಿ ಕಟ್ಟಿರುವ ಕಟ್ಟಡವನ್ನು ಹಿರಿಯೂರು ತಾಲ್ಲೂಕಿನ ಎಲ್ಲಾ ರೈತ /ಕನ್ನಡ /ದಲಿತ /ಮತ್ತು ಪ್ರಗತಿಪರ ಸಂಘಟನೆಗಳ ಕಛೇರಿಗೆ  ಬಿಟ್ಟು ಕೊಡಬೇಕೆಂದು ಒತ್ತಾಯಿಸಿ ಶೀಘ್ರದಲ್ಲೇ ನಗರಸಭೆ ಅಧಿಕಾರಿಗಳ ವಿರುದ್ಧ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು.

ಇದು ಯಾವುದೇ ಸಮಾಜದ ವಿರುದ್ಧ ನಡೆಸುತ್ತಿರುವ ಹೋರಾಟವಲ್ಲಾ ನಗರಸಭೆ ವ್ಯಾಪ್ತಿಯಲ್ಲಿ ಕೋಟಿಗಟ್ಟಲೆ ಬೆಲೆ ಬಾಳುವ ಆಸ್ತಿಯ ಉಳಿವುಗಾಗಿ ಹೋರಾಟ ಮಾಡುವುದಾಗಿ ಮಹಾನಾಯಕ ದಲಿತಸೇನೆ ಸಂಘಟನೆಯ ಕೆ.ಪಿ.ಶ್ರೀನಿವಾಸ್ ಮತ್ತಿತರರು ಎಚ್ಚರಿಸಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ