Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರದ ಬೊಕ್ಕಸಕ್ಕೆ ಬರೊಬ್ಬರಿ 1,757 ಕೋಟಿ ನಷ್ಟ

Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಸರ್ಕಾರಿ ಸ್ವಾಮ್ಯದ
BSNL ಸಂಸ್ಥೆ ಮಾಡಿದ ಎಡವಟ್ಟಿನಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಬರಬೇಕಿದ್ದ ಬರೊಬ್ಬರಿ 1,757 ಕೋಟಿ ರೂ.ನಷ್ಟವಾಗಿದೆ ಎಂದು ಭಾರತದ ಲೆಕ್ಕ ನಿಯಂತ್ರಕ ಮತ್ತು ಮಹಾಲೇಖಪಾಲ (ಸಿಎಜಿ)ರ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆ BSNL ಸ್ಥಿರ ಮೂಲಸೌಕರ್ಯಗಳ ಹಂಚಿಕೆಗಾಗಿ ತಮ್ಮ ನಡುವಿನ ಒಪ್ಪಂದದ ಪ್ರಕಾರ ಮೇ 2014 ರಿಂದ ಹತ್ತು ವರ್ಷಗಳ ಕಾಲ ರಿಲಯನ್ಸ್ ಜಿಯೋ ಸಂಸ್ಥೆಗೆ ಶುಲ್ಕವನ್ನು ವಿಧಿಸುವಲ್ಲಿ ವಿಫಲಗೊಂಡಿದ್ದು, ಇದರಿಂದಾಗಿ ಸರ್ಕಾರವು 1,757.56 ಕೋಟಿ ರೂ.ಗಳ ನಷ್ಟ ಅನುಭವಿಸಿದೆ ಎಂದು ಭಾರತದ ಲೆಕ್ಕ ನಿಯಂತ್ರಕ ಮತ್ತು ಮಹಾಲೇಖಪಾಲ (ಸಿಎಜಿ)ರ ವರದಿ ಹೇಳಿದೆ.

ಟೆಲಿಕಾಂ ಮೂಲಸೌಕರ್ಯ ಪೂರೈಕೆದಾರ(ಟಿಐಪಿ)ರಿಗೆ ಪಾವತಿಸಿದ ಆದಾಯದ ಪಾಲಿನಲ್ಲಿ ಪರವಾನಿಗೆ ಶುಲ್ಕವನ್ನು ಕಡಿತಗೊಳಿಸಲು ವಿಫಲಗೊಂಡಿದ್ದರಿಂದ ಬಿಎಸ್‌ಎನ್‌ಎಲ್ 38.36 ಕೋಟಿ ರೂ.ಗಳ ನಷ್ಟ ಅನುಭವಿಸಿದೆ ಎಂದು ಸಿಎಜಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ರಿಲಯನ್ಸ್ ಜಿಯೊ ಇನ್ಫೋಕಾಮ್ ಲಿ.(ಆರ್‌ಜೆಐಎಲ್) ಜೊತೆ ಮಾಸ್ಟರ್ ಸರ್ವಿಸ್ ಅಗ್ರಿಮೆಂಟ್(ಎಂಎಸ್‌ಎ)ನ್ನು ಜಾರಿಗೊಳಿಸುವಲ್ಲಿ ಬಿಎಸ್‌ಎನ್‌ಎಲ್ ವಿಫಲಗೊಂಡಿದ್ದು, ಮೇ 2014 ಮತ್ತು ಮೇ 2024ರ ನಡುವೆ ತನ್ನ ಸ್ಥಿರ ಮೂಲ ಸೌಕರ್ಯದಲ್ಲಿ ಬಳಸಿಕೊಂಡ ಹೆಚ್ಚುವರಿ ತಂತ್ರಜ್ಞಾನಕ್ಕೆ ಶುಲ್ಕ ವಿಧಿಸಿಲ್ಲ. ಇದು ಸರ್ಕಾರದ ಬೊಕ್ಕಸಕ್ಕೆ 1757.56 ಕೋಟಿ ರೂ. ಮತ್ತು ಅದರ ಮೇಲಿನ ದಂಡ ಬಡ್ಡಿಯ ನಷ್ಟಕ್ಕೆ ಕಾರಣವಾಗಿದೆ ಎಂದು ಸಿಎಜಿ ವರದಿ ಹೇಳಿದೆ.

ಸ್ಥಿರ ಮೂಲಸೌಕರ್ಯ ಹಂಚಿಕೆಯ ಮೇಲೆ ಬಿಎಸ್‌ಎನ್‌ಎಲ್ ಶಾರ್ಟ್ ಬಿಲ್ಲಿಂಗ್ ಮಾಡಿದೆ ಎನ್ನುವುದನ್ನೂ ಗಮನಿಸಿರುವ ಸಿಎಜಿ, ರಿಲಯನ್ಸ್ ಜಿಯೊ ಜೊತೆಗಿನ ಒಪ್ಪಂದದಲ್ಲಿ ನಿಗದಿ ಪಡಿಸಿದ ನಿಯಮಗಳು ಮತ್ತು ಷರತ್ತುಗಳನ್ನು ಬಿಎಸ್‌ಎನ್‌ಎಲ್ ಪಾಲಿಸಿಲ್ಲ ಮತ್ತು ಹೆಚ್ಚಳ ನಿಬಂಧನೆ ಅನ್ವಯಿಸಿಲ್ಲ, ಹೀಗಾಗಿ ಮೂಲಸೌಕರ್ಯ ಹಂಚಿಕೆ ಶುಲ್ಕಗಳಿಗೆ ಸಂಬಂಧಿಸಿದಂತೆ 29 ಕೋಟಿ ರೂ.(ಜಿಎಸ್‌ಟಿ) ಗಳ ಆದಾಯ ನಷ್ಟವಾಗಿದೆ ಎಂದು ಸಿಎಜಿ ತನ್ನ ವರದಿಯಲ್ಲಿ ತಿಳಿಸಿದೆ.
BSNL ಆದಾಯದ ಮೇಲೆ ಪರಿಣಾಮ

ರಾಜ್ಯಸಭೆಗೆ ಇತ್ತೀಚೆಗೆ ಟೆಲಿಕಾಂ ಖಾತೆ ರಾಜ್ಯ ಸಚಿವ ಪೆಮ್ಮಸಾನಿ ಚಂದ್ರಶೇಖರ್ ಲಿಖಿತ ಉತ್ತರ ನೀಡುತ್ತಾ, BSNL ಒಂದು ಲಕ್ಷ 4G ಸೈಟ್‌ಗಳಿಗೆ ಖರೀದಿ ಆದೇಶಗಳನ್ನು ನೀಡಿದೆ, ಅದರಲ್ಲಿ 83,993 ಸೈಟ್‌ಗಳನ್ನು ಸ್ಥಾಪಿಸಲಾಗಿದೆ ಮತ್ತು ಮಾರ್ಚ್ 8 ರ ವೇಳೆಗೆ 74,521 ಸೈಟ್‌ಗಳು ಪ್ರಸಾರವಾಗುತ್ತಿವೆ ಎಂದು ಹೇಳಿದರು. ಅಂತೆಯೇ 4G ಸೇವೆಗಳ ಬಿಡುಗಡೆಯಲ್ಲಿ ವಿಳಂಬ ಮತ್ತು ಮೊಬೈಲ್ ವಿಭಾಗದಲ್ಲಿನ ತೀವ್ರ ಸ್ಪರ್ಧೆಯಿಂದಾಗಿ BSNL ಆದಾಯದ ಮೇಲೆ ಪರಿಣಾಮ ಬೀರಿದೆ ಎಂದು ಸಚಿವರು ಮಾಹಿತಿ ನೀಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ