LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

187 ಕೋಟಿ ಲೂಟಿ ಹೊಡೆದ ಕಳಂಕಿತನಿಗೆ ಮತ್ತೆ ಮಂತ್ರಿಗಿರಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿ.ಟಿ. ರವಿ ತೀವ್ರ ವಾಗ್ದಾಳಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ​​ಬೆಂಗಳೂರು:
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ 187 ಕೋಟಿ ರೂಪಾಯಿ ಹಣವನ್ನು ಲೂಟಿ ಹೊಡೆದ ಕಳಂಕಿತನಿಗೆ ಕಾಂಗ್ರೆಸ್ ಸರ್ಕಾರ ಮತ್ತೆ ಮಂತ್ರಿಗಿರಿ ನೀಡಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ಈ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪರಿಶಿಷ್ಟ ಸಮುದಾಯಗಳಿಗೆ ಅನ್ಯಾಯ ಎಸಗಿ, ನಿಗಮದ ಹಣವನ್ನು ಹೈಕಮಾಂಡ್‌ಗೆ ಕಪ್ಪ ನೀಡಿದ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸಂಪುಟದಲ್ಲಿ ಮಣೆ ಹಾಕಲಾಗಿದೆ. ಸ್ವತಃ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರೇ ವಾಲ್ಮೀಕಿ ನಿಗಮದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ವಿಧಾನಸಭೆಯಲ್ಲೇ ಒಪ್ಪಿಕೊಂಡಿದ್ದರು. ಆದರೆ, ಈಗ ಅದೇ ಅವ್ಯವಹಾರಕ್ಕೆ ಶಿಕ್ಷೆ ನೀಡುವ ಬದಲು ಸಚಿವ ಸ್ಥಾನದ ಬಹುಮಾನ ನೀಡಲಾಗುತ್ತಿದೆಯೇ ಎಂದು ಪ್ರಶ್ನಿಸಿದರು.

​ರಾಜ್ಯದಲ್ಲಿ ಈಗಾಗಲೇ 60% ಕಮಿಷನ್ ಮೂಲಕ ಭ್ರಷ್ಟಾಚಾರದ ತಳಹದಿಯ ಮೇಲೆಯೇ ಸರ್ಕಾರ ನಡೆಯುತ್ತಿದೆ. ಇನ್ನು ನಿಗಮ-ಮಂಡಳಿಗಳ ಹಣ ನುಂಗಿದವರನ್ನೂ ಸಚಿವರನ್ನಾಗಿ ಮಾಡುವ ಮೂಲಕ ಕಾಂಗ್ರೆಸ್ ಕರ್ನಾಟಕಕ್ಕೆ ಹೊಸ ಭ್ರಷ್ಟ ಪರಂಪರೆಯನ್ನು ಪರಿಚಯಿಸುತ್ತಿದೆ. ಒಂದಿಷ್ಟೂ ನಾಚಿಕೆ ಇಲ್ಲದೆ ಸರ್ಕಾರ ನಡೆಸಲಾಗುತ್ತಿದ್ದು, ರಾಜ್ಯದ ಜನತೆ ಈ ಲಂಚಾವತಾರ ಹಾಗೂ ಭ್ರಷ್ಟಾಚಾರವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರ ಹಾಗೂ ಗಾಯತ್ರಿ ಜಲಾಶಯಗಳಿಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿರ್ಬಂಧಆಗಸ್ಟ್ 12ಕ್ಕೆ 'ಶತಮಾನದ ಖಗ್ರಾಸ ಸೂರ್ಯಗ್ರಹಣ': ಭಾರತದಲ್ಲಿ ಗೋಚರವಿಲ್ಲ, ಯಾವುದೇ ಆಚರಣೆ ಅಗತ್ಯವಿಲ್ಲರಾಣಿ ಎಲಿಜಬೆತ್ ಹೊಗಳಿದ್ದ ನಮ್ಮ ವಿಧಾನಸೌಧವೇ ನನಗೆ ಸ್ಫೂರ್ತಿ-ಟಿ.ಬಿ ಜಯಚಂದ್ರಕೆಪಿಸಿಸಿ ಅಧ್ಯಕ್ಷರ ಆಶೀರ್ವಾದ ಸಿಕ್ಕಿದೆ- ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ ಯುವ ಜನತೆಗೆ ಯೋಗ, ವ್ಯಾಯಾಮ ಅತ್ಯಂತ ಅವಶ್ಯ:ದಿವ್ಯ ಜ್ಞಾನಾನಂದ ಶ್ರೀಎಸ್. ನಾಗೇನಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷರಾಗಿ ಮುನಿಕೃಷ್ಣಪ್ಪ ಆಯ್ಕೆಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್ಸವರ್ಣೀಯ ಮುಖಂಡರಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ-ಮಾರಸಂದ್ರ ಮುನಿಯಪ್ಪಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆಮೈಸೂರಲ್ಲಿ  'ಜೋಡೆತ್ತು' ಚಿತ್ರದ ಅದ್ದೂರಿ ಕ್ಲೈಮ್ಯಾಕ್ಸ್