Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನಿಂದ 4 ಪ್ರಮುಖ ಪ್ರವಾಸಿ ಪ್ಯಾಕೇಜ್‍ಗಳು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು - ಗಗನಚುಕ್ಕಿ (ಐರಾವತ ಬಸ್ ಪ್ರವಾಸ):
ಪ್ರವಾಸಿಗರು ಬೆಂಗಳೂರಿನಿಂದ ಹೊರಟು ಶಿವನಸಮುದ್ರದ ಗಗನಚುಕ್ಕಿ ಜಲಪಾತ
, ತಲಕಾಡು, ಸೋಮನಾಥಪುರ ಮತ್ತು ಮುಡುಕುತೊರೆ ತಾಣಗಳನ್ನು ವೀಕ್ಷಿಸಬಹುದು. ಈ 340 ಕಿ.ಮೀ ಪ್ರಯಾಣದ ಪ್ಯಾಕೇಜ್‍ಗೆ ವಯಸ್ಕರಿಗೆ 750 ರೂ. ಹಾಗೂ ಮಕ್ಕಳಿಗೆ 600 ರೂ. ದರ ನಿಗದಿಪಡಿಸಲಾಗಿದೆ. ಈ ಪ್ರವಾಸವು ಜುಲೈ 05, 2025 ರಿಂದ ಲಭ್ಯವಿರಲಿದೆ.

ಬೆಂಗಳೂರು - ಗಗನಚುಕ್ಕಿ (ಐರಾವತ ಕ್ಲಬ್ ಕ್ಲಾಸ್):
ಇದೇ ಪ್ರವಾಸಿ ತಾಣಗಳಿಗೆ ಅಂದರೆ ಗಗನಚುಕ್ಕಿ
, ತಲಕಾಡು ಮತ್ತು ಸೋಮನಾಥಪುರಕ್ಕೆ ಐರಾವತ ಕ್ಲಬ್ ಕ್ಲಾಸ್ ಬಸ್ ಮೂಲಕವೂ ಪ್ರಯಾಣಿಸಬಹುದು. ಜುಲೈ 20, 2024 ರಿಂದ ಈ ಸೇವೆ ಲಭ್ಯವಿದ್ದು, ಇದರ ದರ ವಯಸ್ಕರಿಗೆ 600 ರೂ. ಹಾಗೂ ಮಕ್ಕಳಿಗೆ 450 ರೂ. ಆಗಿರುತ್ತದೆ.

ಬೆಂಗಳೂರು - ಚಿತ್ರದುರ್ಗ ಪ್ರವಾಸ:
ಐತಿಹಾಸಿಕ ತಾಣಗಳ ವೀಕ್ಷಣೆಗಾಗಿ ಬೆಂಗಳೂರಿನಿಂದ ಹೊರಟು ವಾಣಿವಿಲಾಸ ಸಾಗರ
, ಹಿರಿಯೂರು ಮತ್ತು ಚಿತ್ರದುರ್ಗದ ಕೋಟೆಯನ್ನು ವೀಕ್ಷಿಸುವ ಅವಕಾಶವಿದೆ. 270 ಕಿ.ಮೀ ದೂರದ ಈ ಪ್ರವಾಸವು ಜೂನ್ 28, 2025 ರಿಂದ ಪ್ರಾರಂಭವಾಗಲಿದ್ದು, ಐರಾವತ ಕ್ಲಬ್ ಕ್ಲಾಸ್ ಬಸ್‍ನಲ್ಲಿ ವಯಸ್ಕರಿಗೆ 600 ರೂ. ಹಾಗೂ ಮಕ್ಕಳಿಗೆ 450 ರೂ. ಪ್ರಯಾಣ ದರವಿರುತ್ತದೆ.

ಬೆಂಗಳೂರು - ಬೇಲೂರು/ಹಳೇಬೀಡು ಪ್ರವಾಸ:
ಶಿಲ್ಪಕಲೆಗಳ ವೀಕ್ಷಣೆಗಾಗಿ ಶ್ರವಣಬೆಳಗೊಳ
, ಬೇಲೂರು ಮತ್ತು ಹಳೇಬೀಡು ತಾಣಗಳ ಪ್ಯಾಕೇಜ್ ಸಿದ್ಧಪಡಿಸಲಾಗಿದೆ. 350 ಕಿ.ಮೀ ವ್ಯಾಪ್ತಿಯ ಈ ಪ್ರವಾಸವು ಮೇ 31, 2025 ರಿಂದ ಲಭ್ಯವಿದ್ದು, ಐರಾವತ ಕ್ಲಬ್ ಕ್ಲಾಸ್ ಬಸ್ ಪ್ರಯಾಣಕ್ಕೆ ವಯಸ್ಕರಿಗೆ 670 ರೂ. ಮತ್ತು ಮಕ್ಕಳಿಗೆ 500 ರೂ. ದರ ನಿಗದಿಪಡಿಸಲಾಗಿದೆ.

ಆಸಕ್ತ ಪ್ರಯಾಣಿಕರು ನಿಗಮದ ಅಧಿಕೃತ ವೆಬ್‍ಸೈಟ್‍ಗಳಾದ www.ksrtc.in  ಮತ್ತು www.ksrtc.karnataka.gov.in  ಮೂಲಕ ಮುಂಗಡ ಟಿಕೆಟ್‍ಗಳನ್ನು ಕಾಯ್ದಿರಿಸಬಹುದು.

ಹೆಚ್ಚಿನ ಮಾಹಿತಿ ಮತ್ತು ವಿಚಾರಣೆಗಾಗಿ ದೂರವಾಣಿ ಸಂಖ್ಯೆ 080-26252625, ಮೊಬೈಲ್ ಸಂಖ್ಯೆ 7760990100 / 7760990560 / 7760990287 ಗಳನ್ನು ಸಂಪರ್ಕಿಸಬಹುದು.

ಸಾರ್ವಜನಿಕರು ಮತ್ತು ಪ್ರವಾಸಿಗರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಕೆ.ಎಸ್.ಆರ್.ಟಿ.ಸಿ ಬೆಂಗಳೂರು ಕೇಂದ್ರೀಯ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ