Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಸರ್ಕಾರದ ಶೇ.40ರಷ್ಟು ಭ್ರಷ್ಟಾಚಾರ ಕುರಿತ ವರದಿ ಸಲ್ಲಿಕೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದವರು ಮಾಡಿದ ಆರೋಪಗಳು ಹಾಗೂ ನಾರಾಯಣಪುರ ಬಲದಂಡೆ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೀಳು ಕಾಲುವೆಗಳ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಬಗ್ಗೆ ಕೇಳಿ ಬಂದ ಆರೋಪಗಳ ಕುರಿತು ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅವರ ಆಯೋಗವು ನಡೆಸಿದ ತನಿಖೆಯ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.
ಗುತ್ತಿಗೆದಾರರು ಶೇ. 40ರಷ್ಟು ಕಮಿಷನ್ ಆರೋಪ ಮಾಡಿದ ಪ್ರಕರಣದ ವಿಚಾರಣೆ ಬಹುದೊಡ್ಡ ಚಾಲೆಂಜಿಂಗ್ ಟಾಸ್ಕ್
ಆಗಿತ್ತು ಎಂದು ಗುತ್ತಿಗೆದಾರರ ಪ್ರಕರಣದ ನ್ಯಾಯಾಂಗ ವಿಚಾರಣಾ ಆಯೋಗ ಅಧ್ಯಕ್ಷ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಹೇಳಿದರು.

ಗುತ್ತಿಗೆದಾರರ ಸಂಘದ ಕಮಿಷನ್ ಆರೋಪಗಳ ಬಗ್ಗೆ ತನಿಖೆ ನಡೆಸಿ 20 ಸಾವಿರ ಪುಟಗಳ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬುಧವಾರ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಗುತ್ತಿಗೆದಾರರ ಕಮಿಷನ್ ಆರೋಪಗಳ ಬಗ್ಗೆ ತನಿಖೆ ನಡೆಸುವುದು
, ಸಾಕ್ಷಿಗಳ ವಿಚಾರಣೆ ನಡೆಸಿ ನ್ಯಾಯಾಂಗ ವಿಚಾರಣಾ ಆಯೋಗವು ಸೂಕ್ತ ತೀರ್ಮಾನ ತೆಗೆದುಕೊಂಡು ಸರ್ಕಾರಕ್ಕೆ ವರದಿ ಸಲ್ಲಿಸುವುದು ಬಹಳ ದೊಡ್ಡ ಟಾಸ್ಕ್ ಆಗಿತ್ತು ಎಂದು ತಿಳಿಸಿದರು.

ಆಯೋಗದ ಅಧಿಕಾರಿ, ಸಿಬ್ಬಂದಿಗಳ ಪರಿಶ್ರಮ ಮತ್ತು ಸಹಕಾರದಿಂದ ಸುದೀರ್ಘ ತನಿಖಾ ವರದಿ ತಯಾರಿಸಿ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದು ನ್ಯಾ.ನಾಗಮೋಹನದಾಸ್ ಹೇಳಿದರು.

ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಟೆಂಡರ್ ಕಾಮಗಾರಿಗಳಲ್ಲಿ ಶೇ.40ಕ್ಕಿಂತ ಅಧಿಕ ಕಮಿಷನ್ ನೀಡುವ ಪದ್ಧತಿ ಜಾರಿಯಲ್ಲಿದೆ ಎಂದು ಗುತ್ತಿಗೆದಾರರ ಸಂಘ ಸಲ್ಲಿಸಿದ್ದ ದೂರುಗಳು, ಟೆಂಡರ್ ಕರೆಯುವಾಗ ಪ್ಯಾಕೇಜ್ ಪದ್ಧತಿ ಕೈಬಿಡುವುದು, ಎಸ್‌ಆರ್ ದರಪಟ್ಟಿ ನಿಗದಿ, ಸ್ಟಾರ್ ರೇಟ್ ಪದ್ಧತಿ ಜಾರಿ, ಪಾರದರ್ಶಕತೆ ಕಾಪಾಡಿಕೊಳ್ಳುವುದು, ಸೀನಿಯಾರಿಟಿ ಮೇಲೆ ಬಿಲ್ ಪಾವತಿ, ಕೆಆರ್‌ಐಡಿಎಲ್‌ನಿಂದ ಗುತ್ತಿಗೆದಾರರಿಗೆ ನೇರವಾಗಿ ಕಾಮಗಾರಿ ನೀಡಿಕೆ ತಪ್ಪಿಸುವುದು ಸೇರಿದಂತೆ ಹಲವಾರು ಸಮಸ್ಯೆಗಳ ಕುರಿತು ಗುತ್ತಿಗೆದಾರರ ಸಂಘವು ದೂರು ಸಲ್ಲಿಸಿತ್ತು. ಗುತ್ತಿಗೆದಾರರ ಸಂಘದ ಆರೋಪಗಳ ಸತ್ಯಾಸತ್ಯತೆ ಬಗ್ಗೆ ವಿವರವಾದ ಅಧ್ಯಯನ ನಡೆಸಿರುವ ಆಯೋಗ ಸರ್ಕಾರಕ್ಕೆ ವಸ್ತುನಿಷ್ಠ ವರದಿ ಸಲ್ಲಿಸಿದೆ ಎಂದು ನ್ಯಾಯಾಧೀಶರು ತಿಳಿಸಿದರು.

 ಕಮಿಷನ್ ಆರೋಪಗಳು ಸಾರ್ವಜನಿಕ ಕಾಮಗಾರಿಗಳಿಗೆ ಸಂಬಂಧಪಟ್ಟಿರುವ ಆರೋಪಗಳಾಗಿದ್ದರಿಂದ ಸಾರ್ವಜನಿಕರ ಹೇಳಿಕೆಗಳು ಮತ್ತು ವಿವರಗಳು ಬಹಳ ಮುಖ್ಯ. ಸಾರ್ವಜನಿಕರಿಂದ ಬಂದ ದೂರುಗಳ ಬಗ್ಗೆ ಆಯೋಗ ಕೂಲಂಕಷವಾಗಿ ತನಿಖೆ ನಡೆಸಿದ್ದು, ಸಲಹೆ ಮತ್ತು ವಿಚಾರಣಾ ಆಯೋಗದ ಅಭಿಪ್ರಾಯಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯ ಸರ್ಕಾರದ ಜಲಸಂಪನ್ಮೂಲ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ 5 ಪ್ರಮುಖ ಇಲಾಖೆಗಳಲ್ಲಿ ದಿನಾಂಕ 16-7-2019ರಿಂದ 31-3-2023ರ ಅವಧಿಯಲ್ಲಿ ನಡೆದ ಎಲ್ಲಾ ಕಾಮಗಾರಿಗಳ ತನಿಖೆ ನಡೆಸಿ ವರದಿ ನೀಡಲು ತಿಳಿಸಿತ್ತು. ವಿಚಾರಣಾ ಆಯೋಗ ವೈಜ್ಞಾನಿಕವಾಗಿ ರ್ಯಾಂಡಮ್ ಮಾದರಿಯಲ್ಲಿ ಕೆಲ ಪೂರ್ಣಗೊಂಡ ಕಾಮಗಾರಿಗಳ ಆಯ್ಕೆ ಮಾಡಿ ತನಿಖೆ ನಡೆಸಿದೆ ಎಂದು ನ್ಯಾ.ನಾಗಮೋಹನದಾಸ್ ಮಾಹಿತಿ ನೀಡಿದ್ದಾರೆ.

ದೂರುಗಳಿಗೆ ಸಂಬಂಧಿಸಿದ ಆಯ್ದ ಸ್ಥಳ ಪರಿಶೀಲನೆ ಮಾಡಲಾಗಿದೆ. ಅಲ್ಲದೆ ಕಡತ ಹಾಗೂ ಲೆಕ್ಕ ಪತ್ರಗಳ ಪರಿಶೀಲನೆ ನಡೆಸಲಾಗಿದೆ. ತನಿಖಾ ವರದಿ ಅನುಬಂಧಗಳು ಸೇರಿದಂತೆ ಸುಮಾರು 20 ಸಾವಿರ ಪುಟಗಳ ಸಮಗ್ರ ವಿಚಾರಣಾ ವರದಿ ಸಿದ್ಧ ಪಡಿಸಿ ಸಲ್ಲಿಸಲಾಗಿದೆ ಎಂದು  ನ್ಯಾ.ನಾಗಮೋಹನದಾಸ್ ತಿಳಿಸಿದರು.
ಆದರೆ ಯಾವುದೇ ಕಾರಣಕ್ಕೂ ವರದಿಯ ಶಿಫಾರಸುಗಳನ್ನು ತಾವು ಬಹಿರಂಗ ಪಡಿಸುವುದು ನೈತಿಕವೆನಿಸದು ಎಂದು ಇದೇ ಸಂದರ್ಭದಲ್ಲಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.




 ರಾಜ್ಯ ಸರ್ಕಾರಕ್ಕೆ ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗಳಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಉಪ ಕಾಲುವೆಗಳ ಆಧುನೀಕರಣ ಅಂದಾಜು ಪಟ್ಟಿ ಬಗ್ಗೆಯೂ 2,800 ಪುಟಗಳ ತನಿಖಾ ವರದಿಯನ್ನು ನ್ಯಾಯಾಂಗ ತನಿಖಾ ಆಯೋಗವು ಸಲ್ಲಿಸಿದೆ.
ಈ ಸಂದರ್ಭದಲ್ಲಿ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಆಯೋಗದ ಅಧಿಕಾರಿಗಳು ಮತ್ತಿತರರು ಇದ್ದರು.


 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ