Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿ ದಿನ ಹಾಲು ಉತ್ಪಾದಕರಿಗೆ 5 ಕೋಟಿ ಸಹಾಯಧನ ನೀಡಲಾಗುತ್ತಿದೆ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ಹೀಗಾಗಿ ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ. ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿ, ಸಹಕಾರಿ ರಂಗದ ಸಾಧಕರಿಗೆ 'ಸಹಕಾರ ರತ್ನ' ಪ್ರಶಸ್ತಿ ವಿತರಿಸಿ ಮಾತನಾಡಿದರು.

ಏಷ್ಯಾದಲ್ಲೇ ಮೊದಲ ಬಾರಿಗೆ ಸಹಕಾರಿ ಬ್ಯಾಂಕ್ ಸ್ಥಾಪನೆಯಾಗಿದ್ದು ರಾಜ್ಯದಲ್ಲಿ. ಹೀಗಾಗಿ ಕರ್ನಾಟಕವನ್ನು ಭಾರತದ ಸಹಕಾರ ಕ್ಷೇತ್ರದ ರಾಜಧಾನಿ ಎಂದು ಕರೆಯುತ್ತಾರೆ.

ಯಾವುದೇ ಗ್ರಾಮ ಉದ್ಧಾರ ಆಗಬೇಕಾದರೆ ಆ ಗ್ರಾಮದಲ್ಲಿ ಒಂದು ಶಾಲೆ, ಒಂದು ಸಹಕಾರಿ ಸಂಘ, ಒಂದು ಆಸ್ಪತ್ರೆ ಇರಬೇಕು ಎನ್ನುವುದು ನೆಹರೂ ಅವರ ಸ್ಪಷ್ಟ ಕಲ್ಪನೆಯಾಗಿತ್ತು. ಈ ಕಲ್ಪನೆಯನ್ನು ಗುರಿಯಾಗಿಸಿಕೊಂಡು ಕೆಲಸ ಮಾಡಿ ಸಹಕಾರ ಚಳವಳಿಗೆ ನೆಹರೂ ಮತ್ತು ಮಹಾತ್ಮ ಗಾಂಧಿ ಅವರು ಶಕ್ತಿ ನೀಡಿದರು.

ರಾಜ್ಯದಲ್ಲಿ ವಾರ್ಷಿಕ ವಹಿವಾಟು 25,000 ಕೋಟಿ ಜೊತೆಗೆ ಪ್ರತೀ ದಿನ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು, ಇದು ಸಹಕಾರಿ ಚಳವಳಿ ಮೂಲಕ ಬೆಳೆದ ಹಾಲು ಮಹಾಮಂಡಳಗಳ ಮಹತ್ ಸಾಧನೆ. ಹಾಲು ಉತ್ಪಾದಕರ ಸಂಘಗಳು ಚಳವಳಿ ಸ್ವರೂಪದಲ್ಲಿ ನಡೆದು ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರು ಹಾಲನ್ನು ನೇರವಾಗಿ ಉತ್ಪಾದಕರ ಸಂಘಗಳಿಗೆ ಸರಬರಾಜು ಮಾಡುವಂತಾಯಿತು.

ಸಹಕಾರ ಕ್ಷೇತ್ರದಿಂದಾಗಿ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ದೊಡ್ಡ ಚೈತನ್ಯ ಸಿಕ್ಕಿದೆ. ಲಕ್ಷಾಂತರ ಕುಟುಂಬಗಳ ಬದುಕಿಗೆ ಆಧಾರವಾಗಿದೆ.

ನಾನು ಮೊದಲಿಗೆ ಮುಖ್ಯಮಂತ್ರಿಯಾಗಿ ಹಾಲಿನ ಪ್ರೋತ್ಸಾಹ ಧನವನ್ನು ಲೀಟರಿಗೆ 3 ರೂ. ಮಾಡಿದ್ದೆ. ಈಗ ಪ್ರೋತ್ಸಾಹ ಧನವನ್ನು ಲೀಟರಿಗೆ 5 ರೂ.ಗೆ ಹೆಚ್ಚಿಸಿ ಪ್ರತೀ ದಿನ ಸರ್ಕಾರದಿಂದ 5 ಕೋಟಿ ರೂಪಾಯಿ ಸಹಾಯಧನವನ್ನು ಹಾಲು ಉತ್ಪಾದಕರಿಗೆ ನೀಡಲಾಗುತ್ತಿದೆ. 40 ಲಕ್ಷ ರೈತರಿಗೆ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಸಹಾಯ ಧನ ಜಮೆ ಆಗುತ್ತಿದೆ.  ಇದಕ್ಕೆಲ್ಲಾ ಹಾಲು ಮಹಾ ಮಂಡಳ ತಾಯಿಬೇರು ಇದ್ದಹಾಗೆ ಎಂದು ಸಿದ್ದರಾಮಯ್ಯ ತಿಳಿಸಿದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ