Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮೆರಿಕ ಕನ್ನಡತಿ ಕಾವೇರಿ ಆರತಿಗೆ 5 ಲಕ್ಷ ಸಮರ್ಪಣೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾವೇರಿ ಆರತಿಗೆ ಅಮೆರಿಕ ಕನ್ನಡತಿ ಮೆಚ್ಚುಗೆ ವಿದೇಶಿ ಕನ್ನಡತಿಯಿಂದ ಕಾವೇರಿ ಆರತಿಗಾಗಿ 5 ಲಕ್ಷ ರೂ. ಸಮರ್ಪಣೆ ಮಾಡಿ ಸಹಕಾರ ನೀಡಿದ್ದಾರೆ.

ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮ ರಾಜ್ಯ, ದೇಶದಲ್ಲಿ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ. ಅಮೆರಿಕದ ಫೀನಿಕ್ಸ್ ನೆಲೆಸಿರುವ ಬೆಂಗಳೂರು ಮೂಲದ ಶ್ರೀಮತಿ ಜ್ಯೋತಿ ಮತ್ತು ವಿಕಾಸ್ ದಂಪತಿಗಳು ಕಾವೇರಿ ಆರತಿ ಕಾರ್ಯಕ್ರಮವನ್ನು ಮೆಚ್ಚಿ ಕೊಂಡಾಡಿದ್ದಾರೆ.

ಭಾರತದ ಪವಿತ್ರ ನದಿಗಳಲ್ಲಿ ಒಂದಾದ ಕಾವೇರಿ ನದಿಗೆ ಕಾವೇರಿ ಆರತಿಯಂತಹ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಐದು ಲಕ್ಷ ರೂ.ಗಳನ್ನು ಸಮರ್ಪಣೆ ಮಾಡಿದ್ದಾರೆ.

ತಾನು ಬೆಂಗಳೂರಿನವರಾಗಿದ್ದು, ಕಾವೇರಿ ನೀರನ್ನು ಕುಡಿದು ಬಾಲ್ಯ ಜೀವನ ಕಳೆದು, ಇಂಜಿನಿಯರಿಂಗ್ ಪದವಿ ಪೂರೈಸಿ ಅಮೆರಿಕದಲ್ಲಿ ನೆಲೆಸಿದ್ದೇವೆ. ಸೆಪ್ಟೆಂಬರ್ 26ರಿಂದ ಕೆಆರ್ ಎಸ್ ನ ಬೃಂದಾವನದಲ್ಲಿ ಆರಂಭವಾಗಿರುವ ಐತಿಹಾಸಿಕ "ಕಾವೇರಿ ಆರತಿ" ಕಾರ್ಯಕ್ರಮವನ್ನು ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಿಸಿ ಭಾವುಕರಾಗಿದ್ದೇವೆ ಅನಿವಾಸಿ ಭಾರತೀಯ ಜ್ಯೋತಿ ವಿಕಾಸ್ ತಿಳಿಸಿದ್ದಾರೆ.

ಅಮೆರಿಕಾದಲ್ಲಿ ನೆಲೆಸಿದ್ದರೂ ನಾವು ಕುಡಿದು ಬೆಳೆದಿರುವುದು ಕಾವೇರಿ ನೀರೇ. ಕಾವೇರಿ ತಾಯಿ ಕೋಟ್ಯಂತರ ಜನರ ದಾಹ ನೀಗಿಸಿದ್ದು ರೈತರ ಬದುಕಿಗೆ ಆಸರೆಯಾಗಿದ್ದಾಳೆ. ಜೀವನದ ಅವಿಭಾಜ್ಯ ಅಂಗವಾಗಿದ್ದಾಳೆ. ಕನ್ನಡ ನಾಡಿನ ಜನತೆ ಕಾವೇರಿಯನ್ನು ಮರೆಯಲು ಸಾಧ್ಯವಿಲ್ಲ. ಇಂತಹ ಜೀವನದಿಗೆ ವಂದಿಸಿ, ನಮಿಸುವ ಕಾರ್ಯಕ್ಕೆ ಮುನ್ನುಡಿ ಬರೆದಿರುವ ಕರ್ನಾಟಕ ಸರ್ಕಾರದ ಈ ಕಾರ್ಯಕ್ಕೆ ಎಲ್ಲಾ ಅನಿವಾಸಿ ಕನ್ನಡಿಗರ ಪರವಾಗಿ ಅಭಿನಂದನೆಗಳು ಎಂದು ಅವರು ತಿಳಿಸಿದ್ದಾರೆ.

"ಕಾವೇರಿ ಆರತಿ"ಯ ಪೂಜಾ ವಿಧಾನ ಹಾಗೂ ಕಾರ್ಯಕ್ರಮದ ಬಗ್ಗೆ ಸಂತಸಗೊಂಡಿದ್ದೇವೆ. ಕರ್ನಾಟಕ ಸರ್ಕಾರದ ಈ ಕಾರ್ಯ ಪ್ರಶಂಸನೀಯ. ರಾಜ್ಯದ ಇತಿಹಾಸದಲ್ಲಿ ಈ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಅನಿವಾಸಿ ಭಾರತೀಯ ಜ್ಯೋತಿ ವಿಕಾಸ್ ಅಭಿಪಾಯಪಟ್ಟಿದ್ದಾರೆ.

ಕಾವೇರಿ ಮಾತೆಗೆ ವಂದಿಸಿ, ಪೂಜಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಮತ್ತು ಜವಾಬ್ದಾರಿ. ದೇವರು ಎಂದರೆ ಪ್ರಕೃತಿ. ಆ ಪ್ರಕೃತಿ ರೂಪವೇ ಕಾವೇರಿ. ಕಾವೇರಿಯನ್ನು ಪೂಜಿಸುವುದರಿಂದ ಮಾನವ ಕುಲ ಮಾತ್ರವಲ್ಲದೆ ಸಕಲ ಜೀವಸಂಕುಲಕ್ಕೂ ಸನ್ಮಂಗಳ ಉಂಟಾಗಲಿದೆ. ಆದ್ದರಿಂದ ಕಾವೇರಿ ಆರತಿಯನ್ನು ಕೇವಲ ದಸರಾಗೆ ಮಾತ್ರ ಸೀಮಿತಗೊಳಿಸದೆ ವರ್ಷ ಪೂರ್ತಿ ಆಚರಣೆ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಾವೇರಿ ಆರತಿ ಕಾರ್ಯಕ್ರಮ ಶಾಸ್ತ್ರೋಕ್ತವಾಗಿದೆ. ಇದೊಂದು ಪುಣ್ಯದ ಕಾರ್ಯ. ಮುಂದಿನ ದಿನಗಳಲ್ಲಿ ಕರ್ನಾಟಕಕ್ಕೆ ಬಂದಾಗ ಕಾವೇರಿ ತಾಯಿಗೆ ಪೂಜೆ ಸಲ್ಲಿಸುತ್ತೇನೆ ಎಂದು ಜ್ಯೋತಿ ವಿಕಾಸ್, ಅನಿವಾಸಿ ಭಾರತೀಯರು, ಫೀನಿಕ್ಸ್.

ಶ್ರೀಮತಿ ಜ್ಯೋತಿ ವಿಕಾಸ ಅವರು 5 ಲಕ್ಷ ರೂ ಹಣವನ್ನು ಕಾವೇರಿ ಆರತಿ ಹಾಗೂ ಅಭಿವೃದ್ಧಿಗಾಗಿ ಬಳಸಿಕೊಳ್ಳಲು 5 ಲಕ್ಷ ರೂ ಕಳುಹಿಸಿಕೊಟ್ಟಿರುತ್ತಾರೆ. ಈ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಶಾಸಕರು ಹಾಗೂ ಗ್ಯಾರಂಟಿ ಯೋಜನೆಯ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ