Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕಸಗುಡಿಸುವ ಕೆಲಸಕ್ಕೆ ಅರ್ಜಿ ಹಾಕಿದ 50 ಸಾವಿರ ಪದವೀಧರರು, ಸ್ನಾತಕೋತ್ತರರು !!

 

 

 

ಚಂಡೀಗಢ : ಉನ್ನತ ಶಿಕ್ಷಣ ಪಡೆದ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಸ್ವೀಪರ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಹೊರಗುತ್ತಿಗೆ ಸಂಸ್ಥೆ ಹರ್ಯಾಣ ಕೌಶಲ್ ರೋಜ್ಗರ್ ನಿಗಮ್ ಲಿಮಿಟೆಡ್ ಈ ನೇಮಕಾತಿ ಜವಾಬ್ದಾರಿ ಹೊತ್ತಿದೆ.

ಹರ್ಯಾಣ ಸರಕಾರ ಹೊರಡಿಸಿರುವ ಉದ್ಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಮಾಸಿಕ ರೂ. 15,000 ವೇತನ ನಿಗದಿಪಡಿಸಲಾಗಿದ್ದು, ಹುದ್ದೆಗಳ ನಿರ್ದಿಷ್ಟ ಸಂಖ್ಯೆಯನ್ನು ಪ್ರಕಟಿಸಲಾಗಿಲ್ಲ. ಈ ಹುದ್ದೆಗಳಿಗೆ ಸುಮಾರು 6,000 ಸ್ನಾತಕೋತ್ತರ ಹಾಗೂ ಸುಮಾರು 40,000 ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಇವರೊಂದಿಗೆ 12ನೇ ತರಗತಿವರೆಗೆ ವ್ಯಾಸಂಗ ಮಾಡಿರುವ ಸುಮಾರು 1.2 ಲಕ್ಷ ಅಭ್ಯರ್ಥಿಗಳೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದಾರೆ.

ಕಳೆದೊಂದು ತಿಂಗಳಲ್ಲಿ ಉದ್ಯೋಗವನ್ನು ಬಯಸಿ ಲಕ್ಷಾಂತರ ಅರ್ಜಿದಾರರು ಅರ್ಜಿ ಹಾಕಿದ್ದಾರೆ. ಅರ್ಜಿದಾರರು ಎಲ್ಲಾ ವರ್ಗದವರಿದ್ದಾರೆ. ಅವರಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಪದವೀಧರ ಮನೀಶ್ ಕುಮಾರ್ ಮತ್ತು ಅವರ ಪತ್ನಿ ಅರ್ಹ ಶಿಕ್ಷಕಿ ರೂಪಾ ಅವರುಗಳೂ ಇದ್ದಾರೆ.

ಖಾಸಗಿ ಸಂಸ್ಥೆಗಳು ಹಾಗೂ ಕಂಪನಿಗಳಲ್ಲಿ ಕೂಡ ನಮಗೆ ತಿಂಗಳಿಗೆ 10,000 ರೂ. ನೀಡುವುದಿಲ್ಲ. ಇಲ್ಲಿ ಸರ್ಕಾರಿ ಮಟ್ಟದಲ್ಲಿ, ಭವಿಷ್ಯದಲ್ಲಿ ನಿಯಮಿತ ಉದ್ಯೋಗದ ಭರವಸೆಯೇ ಆಶಾಕಿರಣವಾಗಿದೆ. ಜೊತೆಗೆ, ಕಸ ಗುಡಿಸುವುದು ಪೂರ್ಣ ದಿನದ ಕೆಲಸವಲ್ಲ, ಆದ್ದರಿಂದ ನಾವು ಹಗಲಿನಲ್ಲಿ ಇತರ ಕೆಲಸವನ್ನು ಮುಂದುವರಿಸಬಹುದು ಎಂದು ಮನೀಶ್ ತಮ್ಮತರ್ಕವನ್ನು ಮುಂದಿಡುತ್ತಾರೆ.

ಸಕಾರಾತ್ಮಕವಾಗಿ ಕೆಲಸ ಸಿಗುವ ಭರವಸೆಯೊಂದಿಗೆ ನಾನು ಅರ್ಜಿ ಸಲ್ಲಿಸಬಹುದಾದ ಏಕೈಕ ಕೆಲಸ ಇದಾಗಿದೆ. ನನ್ನ ಕುಟುಂಬವು ಹೆಚ್ಚಿನ ಅಧ್ಯಯನ ಅಥವಾ ತರಬೇತಿಗೆ ಹಣವನ್ನು ಖರ್ಚು ಮಾಡಲು ಸಿದ್ಧವಿಲ್ಲ. ಆದ್ದರಿಂದ ಈ ಉದ್ಯೋಗ ಈಗ ನನ್ನ ಏಕೈಕ ಆಯ್ಕೆಯಾಗಿದೆ ಎಂದು ಸುಮಿತ್ರಾ ಹೇಳಿದ್ದಾರೆ.

ಆದರೆ ರಾಜ್ಯದಲ್ಲಿನ ಈ ಪರಿಸ್ಥಿತಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ. ನಿರುದ್ಯೋಗ ಬಿಕ್ಕಟ್ಟನ್ನು ಪರಿಹರಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಹರ್ಯಾಣ ಕಾಂಗ್ರೆಸ್ ಆರೋಪಿಸಿದೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ