Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಸಗುಡಿಸುವ ಕೆಲಸಕ್ಕೆ ಅರ್ಜಿ ಹಾಕಿದ 50 ಸಾವಿರ ಪದವೀಧರರು, ಸ್ನಾತಕೋತ್ತರರು !!

Advertisement
 

 

 

ಚಂಡೀಗಢ : ಉನ್ನತ ಶಿಕ್ಷಣ ಪಡೆದ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಸ್ವೀಪರ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಹೊರಗುತ್ತಿಗೆ ಸಂಸ್ಥೆ ಹರ್ಯಾಣ ಕೌಶಲ್ ರೋಜ್ಗರ್ ನಿಗಮ್ ಲಿಮಿಟೆಡ್ ಈ ನೇಮಕಾತಿ ಜವಾಬ್ದಾರಿ ಹೊತ್ತಿದೆ.

ಹರ್ಯಾಣ ಸರಕಾರ ಹೊರಡಿಸಿರುವ ಉದ್ಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಮಾಸಿಕ ರೂ. 15,000 ವೇತನ ನಿಗದಿಪಡಿಸಲಾಗಿದ್ದು, ಹುದ್ದೆಗಳ ನಿರ್ದಿಷ್ಟ ಸಂಖ್ಯೆಯನ್ನು ಪ್ರಕಟಿಸಲಾಗಿಲ್ಲ. ಈ ಹುದ್ದೆಗಳಿಗೆ ಸುಮಾರು 6,000 ಸ್ನಾತಕೋತ್ತರ ಹಾಗೂ ಸುಮಾರು 40,000 ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಇವರೊಂದಿಗೆ 12ನೇ ತರಗತಿವರೆಗೆ ವ್ಯಾಸಂಗ ಮಾಡಿರುವ ಸುಮಾರು 1.2 ಲಕ್ಷ ಅಭ್ಯರ್ಥಿಗಳೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದಾರೆ.

ಕಳೆದೊಂದು ತಿಂಗಳಲ್ಲಿ ಉದ್ಯೋಗವನ್ನು ಬಯಸಿ ಲಕ್ಷಾಂತರ ಅರ್ಜಿದಾರರು ಅರ್ಜಿ ಹಾಕಿದ್ದಾರೆ. ಅರ್ಜಿದಾರರು ಎಲ್ಲಾ ವರ್ಗದವರಿದ್ದಾರೆ. ಅವರಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಪದವೀಧರ ಮನೀಶ್ ಕುಮಾರ್ ಮತ್ತು ಅವರ ಪತ್ನಿ ಅರ್ಹ ಶಿಕ್ಷಕಿ ರೂಪಾ ಅವರುಗಳೂ ಇದ್ದಾರೆ.

ಖಾಸಗಿ ಸಂಸ್ಥೆಗಳು ಹಾಗೂ ಕಂಪನಿಗಳಲ್ಲಿ ಕೂಡ ನಮಗೆ ತಿಂಗಳಿಗೆ 10,000 ರೂ. ನೀಡುವುದಿಲ್ಲ. ಇಲ್ಲಿ ಸರ್ಕಾರಿ ಮಟ್ಟದಲ್ಲಿ, ಭವಿಷ್ಯದಲ್ಲಿ ನಿಯಮಿತ ಉದ್ಯೋಗದ ಭರವಸೆಯೇ ಆಶಾಕಿರಣವಾಗಿದೆ. ಜೊತೆಗೆ, ಕಸ ಗುಡಿಸುವುದು ಪೂರ್ಣ ದಿನದ ಕೆಲಸವಲ್ಲ, ಆದ್ದರಿಂದ ನಾವು ಹಗಲಿನಲ್ಲಿ ಇತರ ಕೆಲಸವನ್ನು ಮುಂದುವರಿಸಬಹುದು ಎಂದು ಮನೀಶ್ ತಮ್ಮತರ್ಕವನ್ನು ಮುಂದಿಡುತ್ತಾರೆ.

ಸಕಾರಾತ್ಮಕವಾಗಿ ಕೆಲಸ ಸಿಗುವ ಭರವಸೆಯೊಂದಿಗೆ ನಾನು ಅರ್ಜಿ ಸಲ್ಲಿಸಬಹುದಾದ ಏಕೈಕ ಕೆಲಸ ಇದಾಗಿದೆ. ನನ್ನ ಕುಟುಂಬವು ಹೆಚ್ಚಿನ ಅಧ್ಯಯನ ಅಥವಾ ತರಬೇತಿಗೆ ಹಣವನ್ನು ಖರ್ಚು ಮಾಡಲು ಸಿದ್ಧವಿಲ್ಲ. ಆದ್ದರಿಂದ ಈ ಉದ್ಯೋಗ ಈಗ ನನ್ನ ಏಕೈಕ ಆಯ್ಕೆಯಾಗಿದೆ ಎಂದು ಸುಮಿತ್ರಾ ಹೇಳಿದ್ದಾರೆ.

ಆದರೆ ರಾಜ್ಯದಲ್ಲಿನ ಈ ಪರಿಸ್ಥಿತಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ. ನಿರುದ್ಯೋಗ ಬಿಕ್ಕಟ್ಟನ್ನು ಪರಿಹರಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಹರ್ಯಾಣ ಕಾಂಗ್ರೆಸ್ ಆರೋಪಿಸಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ