Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಂಧ್ರದ ಡಿಸಿಎಂ ಹಾಗೂ ಅರಣ್ಯ ಸಚಿವ ಪವನ್ ಕಲ್ಯಾಣ್ ಗೆ 6 ಆನೆಗಳ ಹಸ್ತಾಂತರ-ಡಿಕೆಶಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಳೆದ ವರ್ಷ ಆಗಸ್ಟ್ ನಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಆನೆ- ಮಾನವ ಸಂಘರ್ಷ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಆನೆ- ಮಾನವ ಸಂಘರ್ಷ ತಡೆ ಸಂಬಂಧ ಉತ್ತಮ ರೂಢಿಗಳ ವಿನಿಮಯಕ್ಕೆ ನಮ್ಮ ರಾಜ್ಯದ ಜೊತೆಗೆ ಆಂಧ್ರ
, ಕೇರಳ, ತೆಲಂಗಾಣ ಸರ್ಕಾರಗಳು ಒಪ್ಪಂದಕ್ಕೆ ಸಹಿ ಹಾಕಿದ್ದವು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಮರಿಸಿದ್ದಾರೆ.

ಅದರ ಭಾಗವಾಗಿ, ಆನೆ- ಮಾನವ ಸಂಘರ್ಷ ತಡೆಗೆ ಹಾಗೂ ಪುಂಡಾನೆಗಳ ಸೆರೆ ಕಾರ್ಯಾಚರಣೆಗೆ ಬಳಸಲು ಕುಮ್ಕಿ ಆನೆಗಳನ್ನು ಒದಗಿಸಿ, ಮಾವುತರಿಗೆ ತರಬೇತಿಯನ್ನೂ ನೀಡಲು ಆಂಧ್ರ ಉಪಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವ ಪವನ್ ಕಲ್ಯಾಣ್ ಅವರು ಪತ್ರ ಬರೆದು ನಮ್ಮ ಸರ್ಕಾರಕ್ಕೆ ಕೋರಿದ್ದರು.

ಅದರಂತೆ 6 ಆನೆಗಳನ್ನು ಇಂದು ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೂಡಿ ಪವನ್ ಕಲ್ಯಾಣ್ ಅವರಿಗೆ ಹಸ್ತಾಂತರಿಸಲಾಯಿತು ಎಂದು ಡಿಸಿಎಂ ತಿಳಿಸಿದರು.

ನೆರೆ ರಾಜ್ಯಗಳಲ್ಲಿ ಮಾನವ- ಪ್ರಾಣಿ ಸಂಘರ್ಷ ಕಡಿಮೆಯಾದಲ್ಲಿ ಅದು ನಮ್ಮ ರಾಜ್ಯಕ್ಕೂ ಅನುಕೂಲವಾಗಲಿದೆ. ಅಲ್ಲದೆ, ನೆರೆ ರಾಜ್ಯಗಳಲ್ಲಿ ಈ ನಿಟ್ಟಿನಲ್ಲಿ ಅಳವಡಿಸಿಕೊಂಡಿರುವ ಕ್ರಮಗಳನ್ನು ನಮ್ಮ ರಾಜ್ಯದಲ್ಲೂ ಅಳವಡಿಸಿಕೊಳ್ಳಲು ಇಂಥ ಬಾಂಧವ್ಯ ಕಾರ್ಯಕ್ರಮಗಳು ಅನುಕೂಲವಾಗಲಿದೆ ಎಂದು ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ