Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಚಿತ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 66 ನವ ಜೋಡಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : 
ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದು 66 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

 ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಘಾಟಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹದಲ್ಲಿ 66 ನೂತನ ಜೋಡಿಗಳು ಸತಿ-ಪತಿಗಳಾದರು. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಸಾನಿಧ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರ ಸಮ್ಮುಖದಲ್ಲಿ ನೂತನ ವಧು-ವರರಿಗೆ ಆಶೀರ್ವದಿಸಿ ಶುಭ ಹಾರೈಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವರು ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಆಶೀರ್ವಾದ ಮಾಡಲು ಬಂದಿರುವ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಗಳಿಗೆ ಧನ್ಯವಾದಗಳನ್ನು ತಿಳಿಸುತ್ತಾ ಶುಭ ಲಗ್ನದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆದಿರುವುದು ವಿಶೇಷವಾಗಿದೆ. ಈ ಪುಣ್ಯ ಕಾರ್ಯಕ್ರಮಕ್ಕೆ ಬಂದಿರುವುದು ನನಗೂ ಹೆಮ್ಮೆ ಇದೆ. ಬಡವರಿಗೆ, ಹಿಂದುಳಿದವರಿಗೆ, ಸರಳ ವಿವಾಹ ಬಯಸುವವರಿಗೆ ಈ ಸಾಮೂಹಿಕ ವಿವಾಹ ಬಹಳ ಸಹಕಾರಿಯಾಗಿದೆ.

  ಸಾಲ ಮಾಡಿ ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿ ಆಗುವ ಮದುವೆಗಳಿಂದ, ಮುಂದೆ ಸಾಲ ತೀರಿಸಲಾಗದ ಪರಿಸ್ಥಿತಿ ನಿರ್ಮಾಣ ಆಗಬಹುದು. ಸರಳ ವಿವಾಹ ಆಗುವುದರಿಂದ ನೆಮ್ಮದಿಯ ಜೀವನ ನಡೆಸಬಹುದು. ದೇವರ ಸನ್ನಿದಾನದಲ್ಲಿ ನೆರವೇರಿರುವ ಈ ಸಾಮೂಹಿಕ ವಿವಾಹ ಶ್ರೇಷ್ಠವಾಗಿದೆ. ತಮಗೆ ಉತ್ತಮ ಜೀವನ, ಆರೋಗ್ಯ ಭಾಗ್ಯ, ಆಯಸ್ಸು ಕೊಟ್ಟು ದೇವರು ಕಾಪಾಡಲಿ ಎಂದು ನವ ದಂಪತಿಗಳಿಗೆ ಶುಭ ಹಾರೈಸಿದರು.

   ನವ ದಂಪತಿಗಳಾದ ತಾವು ಪ್ರೀತಿ ವಾತ್ಸಲ್ಯದಿಂದ ಜೀವನ ಮಾಡಬೇಕು ಮತ್ತು ತಮ್ಮ ತಂದೆ-ತಾಯಿ, ಕುಟುಂಬವನ್ನು ಚೆನ್ನಾಗಿ ಪೋಷಿಸಿ ಉತ್ತಮ ಜೀವನ ಸಾಗಿಸಲು ಸಲಹೆ ನೀಡಿದರು.

ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ ಪ್ರಾಧಿಕಾರ ಹಾಗೂ ಅಧಿಕಾರಿಗಳಿಗೆ ಸಚಿವರು ಧನ್ಯವಾದ ತಿಳಿಸಿದರು. ಮಾಂಗಲ್ಯ ಭಾಗ್ಯ ಯೋಜನೆಯಡಿ ಪ್ರಾಧಿಕಾರದ ವತಿಯಿಂದ ನವ ಜೋಡಿಗೆ ತಾಳಿ, ಎರಡು ಚಿನ್ನದ ಗುಂಡು, ಪಂಚೆ-ಶಲ್ಯ, ಬೆಳ್ಳಿ ಕಾಲುಂಗುರವನ್ನು ಉಚಿತವಾಗಿ ನೀಡಲಾಗಿದೆ.



ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶಿಲ್ದಾರ್ ವಿಭಾ ರಥೊಡ್, ಇಒ ಮುನಿರಾಜು, ಪ್ರಾಧಿಕಾರದ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ