Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

7 ಲಕ್ಷ ಸ್ವಂತ ಮನೆ ಹೊಂದುವ ಕನಸು ನನಸು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2024-25 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ 7,02,731 ಗ್ರಾಮೀಣ ಮನೆಗಳನ್ನು  ನಿರ್ಮಿಸುವ ಗುರಿ ನೀಡಿರುವ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರಿಗೆ ಹಾಗೂ ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧನ್ಯವಾದಗಳನ್ನು ತಿಳಿಸಿದ್ದಾರೆ.

ಈ ಹಿಂದೆ ನೀಡಲಾಗಿದ್ದ 2,26,175 ಮನೆಗಳ ನಿರ್ಮಾಣದ ಗುರಿಯ ಜೊತೆಗೆ ಹೆಚ್ಚುವರಿ 4,76,556 ಮನೆಗಳನ್ನು ನಿರ್ಮಿಸುವ ಉದ್ದೇಶವನ್ನು ಸಾಧಿಸಲು ಸರ್ವರಿಗೂ ಸೂರು ಕಲ್ಪಿಸುವ ಮಹತ್ವದ ಗುರಿ ತಲುಪುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ನಿರ್ಧಾರದಿಂದ ಗ್ರಾಮೀಣ ಕುಟುಂಬಗಳಿಗೆ ಅಗತ್ಯ ಸೌಕರ್ಯಗಳೊಂದಿಗೆ ಸುಸಜ್ಜಿತ ಮನೆಗಳನ್ನು ನಿರ್ಮಿಸಿಕೊಂಡು ನಾಡಿನ ಬಡವರ ಸ್ವಂತ ಸೂರು ಹೊಂದುವ ಕನಸುಗಳನ್ನು ಈಡೇರಿಸುತ್ತದೆ ಎಂದು ವಿಜಯೇಂದ್ರ ಹೇಳಿದರು.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ಈ ನಿಟ್ಟಿನಲ್ಲಿ ಸಂಪೂರ್ಣ ಸಹಕಾರ ನೀಡಿ ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಕರ್ನಾಟಕವನ್ನು ಗುಡಿಸಲು ಮುಕ್ತ ರಾಜ್ಯವನ್ನಾಗಿಸುವಲ್ಲಿ ಶ್ರಮಿಸಲಿ. ಸದರಿ ಯೋಜನೆಯು ನಾಡಿನ 7 ಲಕ್ಷ ಬಡ ಕುಟುಂಬಗಳಿಗೆ ಸದುಪಯೋಗವಾಗಲಿದ್ದು ಸುಸಜ್ಜಿತ ಮನೆ ಹಾಗೂ ಮೂಲಸೌಕರ್ಯಗಳೊಂದಿಗೆ ಸ್ವಂತ ಮನೆ ಹೊಂದುವ ಕನಸು ನನಸಾಗಲಿದೆ ಎಂದು ವಿಜಯೇಂದ್ರ ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ