Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಡಳಿತ ಸುಧಾರಣೆಗೆ 853 ಶಿಫಾರಸ್ಸು–ಆರ್.ವಿ.ದೇಶಪಾಂಡೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಆಡಳಿತ ಸುಧಾರಣಾ ಆಯೋಗ 2024 ರ ಜನವರಿಯಿಂದ ಈವರೆಗೆ 19 ಇಲಾಖೆಗಳ 853 ಶಿಪಾರಸ್ಸುಗಳನ್ನು ಅನುಷ್ಠಾನಗೊಳಿಸಿದೆ ಎಂದು ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ತಿಳಿಸಿದರು.


ಇಂದು ವಿಕಾಸಸೌಧದಲ್ಲಿ ಆಯೋಗದ ಪ್ರಗತಿ ಕುರಿತ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಟ್ಟು 19 ಇಲಾಖೆಗಳ 2891 ಶಿಫಾರಸ್ಸುಗಳ ಪೈಕಿ, 853 ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲಾಗಿದೆ. ಇನ್ನು ಅನುಷ್ಠಾನದ ಹಂತದಲ್ಲಿ 592 ಶಿಫಾರಸುಗಳಿದ್ದು, ಸರ್ಕಾರದ ಮಟ್ಟದಲ್ಲಿ 243, ಇಲಾಖಾ ಮಟ್ಟದಲ್ಲಿ 1181 ಶಿಫಾರಸ್ಸುಗಳು ಬಾಕಿ ಇವೆ ಎಂದು ವಿವರ ನೀಡಿದರು.

2024ರ ಜನವರಿ ಅಂತ್ಯದ ವೇಳೆಗೆ ಆಯೋಗ 39 ಇಲಾಖೆಗಳನ್ನು ಒಳಗೊಂಡು ಒಟ್ಟು ಏಳು ವರದಿಗಳನ್ನು ಸರ್ಕಾರಗಳಿಗೆ ನೀಡಿದೆ. ಈ ವರದಿಗಳು 5039 ಶಿಫಾರಸುಗಳನ್ನು ಒಳಗೊಂಡಿತು.


ಜನವರಿ ಅಂತ್ಯದವರೆಗೆ ಕೇವಲ 99 ಶಿಫಾರಸ್ಸುಗಳನ್ನು ಅನುಷ್ಠಾನಕ್ಕೆ ತರಲಾಗಿತ್ತು. ನಿರಂತರವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಹೆಚ್ಚುವರಿ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಇತರರಿಗೆ ನಿರಂತರವಾಗಿ ಪತ್ರ ಬರೆದು ಹೆಚ್ಚು ಶಿಫಾರಸ್ಸುಗಳನ್ನು ತಾವು ಅನುಷ್ಠಾನಗೊಳಿಸಿರುವುದಾಗಿ ತಿಳಿಸಿದರು.

ಅಲ್ಲದೆ 20 ಇಲಾಖೆಗಳಿಗೆ ಸಂಬಂಧಿಸಿದ 2168 ಶಿಫಾರಸುಗಳ ಪೈಕಿ 12 ನ್ನು ಅನುಷ್ಠ್ಠಾನಗೊಳಿಸಲಾಗಿದೆ. ಅನುಷ್ಠಾನದ ಹಂತದಲ್ಲಿ 993 ಬಾಕಿಯಿದ್ದು 192 ಶಿಫಾರಸ್ಸುಗಳು ಸರ್ಕಾರದ ಮಟ್ಟದಲ್ಲಿ 1771 ಇಲಾಖಾ ಮಟ್ಟದಲ್ಲ ಬಾಕಿ ಇವೆ. ಬಾಕಿ ಉಳಿದ ಶಿಫಾರಸುಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗುವುದು ಎಂದರು.

ಆಯೋಗ ಉತ್ತರ ಕನ್ನಡ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಿಗೆ ಭೇಟಿ ನೀಡಿದ್ದು, ವಿವಿಧ ಇಲಾಖೆಗಳಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ. ನಾಗರೀಕರ ಸಲಹೆ ಸೂಚನೆಗಳನ್ನು ಸ್ವೀಕರಿಸಲಾಗಿದೆ ಎಂದರು.

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಮಾನದಂಡವನ್ನು ಪರಿಶೀಲಿಸಿ, ಅರ್ಹರಿಗೆ ಕಾರ್ಡ್ ನೀಡಿ, ಅನರ್ಹ ಕಾರ್ಡ್‍ಗಳನ್ನು ರದ್ದುಗೊಳಿಸಲು ಉಪಸಮಿತಿ ರಚಿಸಲಾಗಿದೆ. ಇದಲ್ಲದೆ ಇಲಾಖೆಗಳು ನಿಗಮ ಮಂಡಳಿಗಳನ್ನು ವಿಲೀನಗೊಳಿಸಲು ಪರಿಶೀಲಿಸಲಾಗುವುದು. ಸರ್ಕಾರಿ ಯೋಜನೆ ಮತ್ತು ಕಾರ್ಯಕ್ರಮಗಳಲ್ಲಿ ಯಾವುದೇ ಲೋಪ ವಿಳಂಬಕ್ಕೆ ಆಸ್ಪದ ನೀಡದಂತೆ ಆಯೋಗ ಕ್ರಮಕೈಗೊಳ್ಳಬೇಕು ಎಂದರು.

ನಗದು ರಹಿತ, ಸಂಪರ್ಕ ರಹಿತ ಸೇವೆ ನೀಡಲು ಎಲ್ಲಾ ಸೇವೆಗಳನ್ನು ಆನ್‍ಲೈನ್, ಎಂಡ್- ಟು – ಎಂಡ್ ಆನ್‍ಲೈನ್ ಸೇವೆಗಳು ಮತ್ತು ತಂತ್ರಜ್ಞಾನ ಬಳಸಿಕೊಂಡು ಕಡತವನ್ನು ತ್ವರಿತ ವಿಲೇವಾರಿ ಮಾಡಲು ಸೂಚಿಸಲಾಗುವುದು.


ಅಟಲ್‍ಜೀ ಜನಸ್ನೇಹಿ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಮುಂತಾದ ಕಚೇರಿಗಳ ಸೇವಾ ವೈಖರಿ ಬಲಪಡಿಸಲು ಶಿಫಾರಸ್ಸು ಸೇರಿದಂತೆ ಸರ್ಕಾರಿ ಖಾಲಿ ಲಿಪಿಕ ಹುದ್ದೆಗಳನ್ನು ತಾಂತ್ರಿಕ ಹುದ್ದೆಗಳಿಗೆ ಪರಿವರ್ತಿಸುವ ಕಾರ್ಯವನ್ನು ಸಹ ಮಾಡಲಾಗಿದೆ ಎಂದರು.

ಒಟ್ಟಿನಲ್ಲಿ ಪಾರದರ್ಶಕತೆ, ಸರಳತೆ ಮತ್ತು ಕಡಿಮೆ ವೆಚ್ಚದಲ್ಲಿ ನಾಗರೀಕ ಸೇವೆಗಳನ್ನು ಸಕಾಲದಲ್ಲಿ ವಿಳಂಬವಿಲ್ಲದೇ ತಲುಪಿಸಲು ಆಯೋಗ ಬದ್ಧವಾಗುದೆ ಎಂದು ತಿಳಿಸಿದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ