Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೃತ್ತಿ ಬದ್ದವಾಗಿ ಪತ್ರಕರ್ತರ ಸಂಘಟನೆ ಬಲಪಡಿಸಲು ಕರೆ- ಶಿವಾನಂದ ತಗಡೂರು

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಚಿಕ್ಕಮಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಭೇಟಿ ನೀಡಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪತ್ರಕರ್ತರ ಸಂಘಟನೆಯನ್ನು ವೃತ್ತಿಬದ್ಧವಾಗಿ ಮತ್ತಷ್ಟು ಬಲಪಡಿಸುವ ಅಗತ್ಯವಿದ್ದು, ಎಲ್ಲರೂ ಒಗ್ಗಟ್ಟಿನಿಂದ ಸಂಘವನ್ನು ಕಟ್ಟುವ ಕೆಲಸಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

ಒಂದು ಕಾಲದಲ್ಲಿ ರಾಜ್ಯಕ್ಕೆ ಮಾದರಿಯಾಗಿದ್ದ ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘವನ್ನು ಮತ್ತೆ ಅದೇ ಮಟ್ಟಕ್ಕೆ ಕೊಂಡೊಯ್ಯುವ ಜವಾಬ್ದಾರಿ ಎಲ್ಲರ ಮೇಲಿದೆ. ವೈಮನಸ್ಸುಗಳನ್ನು ಬದಿಗೊತ್ತಿ ಸಂಘದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಅವರು ಹೇಳಿದರು.

ಜಿಲ್ಲಾಧ್ಯಕ್ಷ ಅನಿಲ್ ಆನಂದ್ ಅವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಘಟಕಗಳನ್ನು ರಚಿಸಿರುವುದು ಶ್ಲಾಘನೀಯ. ಈ ಕಾರ್ಯದಲ್ಲಿ ರಾಜ್ಯ ಉಪಾಧ್ಯಕ್ಷ ಎಚ್.ಬಿ. ಮದನಗೌಡ ಅವರ ಪರಿಶ್ರಮ ಹಾಗೂ ರಾಜ್ಯ ಸಮಿತಿ ಸದಸ್ಯ ಕಲ್ಯಾಣ್ ಕುಮಾರ್ ಅವರ ಸಹಕಾರವೂ ಮಹತ್ವದ್ದಾಗಿದೆ ಎಂದು ಹೇಳಿದರು.

ಕೆಯುಡಬ್ಲ್ಯೂಜೆ ಜೊತೆಗೆ ಮುಂದುವರಿಯಲು ನಿರ್ಧರಿಸಿರುವ ಜಯಕುಮಾರ್ ಅವರ ತೀರ್ಮಾನ ಸ್ವಾಗತಾರ್ಹವಾಗಿದೆ. ಹಿರಿಯ ಪತ್ರಕರ್ತ ದಿನೇಶ್ ಪಟವರ್ಧನ್ ಸಭೆಯಲ್ಲಿ ಭಾಗವಹಿಸಿ ಸಂಘವನ್ನು ಮತ್ತಷ್ಟು ಬಲಪಡಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿರುವುದು ಸಂತಸದ ಸಂಗತಿ ಎಂದು ಹೇಳಿದರು.

ಸಭೆಯಲ್ಲಿ ಜುಲೈ 25ರಂದು ಪತ್ರಿಕಾ ದಿನಾಚರಣೆ ಹಾಗೂ ಜಿಲ್ಲಾ ಸಂಘದ ಅಧಿಕಾರ ಸ್ವೀಕಾರ ಸಮಾರಂಭವನ್ನು ಆಯೋಜಿಸಲು ನಿರ್ಧರಿಸಲಾಯಿತು.

ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯ ಕಲ್ಯಾಣ್ ಕುಮಾರ್, ಜಿಲ್ಲಾಧ್ಯಕ್ಷ ಅನಿಲ್ ಆನಂದ್, ಹಿರಿಯ ಪತ್ರಕರ್ತ ದಿನೇಶ್ ಪಟವರ್ಧನ್, ಜಯಕುಮಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಘಟಕಗಳ ಹಿರಿಯ ಮತ್ತು ಕಿರಿಯ ಸದಸ್ಯರು ಉಪಸ್ಥಿತರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.