Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್.ಎಂ ಕೃಷ್ಣ ಅವರಿಗೆ ಭಾವಪೂರ್ಣ ವಿದಾಯ

Advertisement
ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಕರ್ನಾಟಕದ ಮಾಜಿ ಮುಖ್ಯಮಂತ್ರಿ
, ಹಿರಿಯ ರಾಜಕೀಯ ಮುತ್ಸದ್ಧಿ ಎಸ್.​ಎಂ.ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರಾದ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಿತು.

ಒಕ್ಕಲಿಗ ಸಮಾಜದ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳ ಬಳಿಕ ಎಸ್ಎಂಕೆ ಅವರ ಮಗಳ ಮಗ ಅಂದರೆ ಮೊಮ್ಮಗ ಅಮರ್ತ್ಯ ಹೆಗ್ಡೆ, ತಮ್ಮ ಅಜ್ಜನ ಚಿತೆಗೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಅಂತ್ರ್ಯಕ್ರಿಯೆ ವಿಧಾನಗಳನ್ನು ಪೂರ್ಣಗೊಳಿಸಿದರು. ಇದರೊಂದಿಗೆ ಎಸ್​ಎಂ ಕೃಷ್ಣ ಅವರು ಪಂಚಭೂತಗಳಲ್ಲಿ ಲೀನರಾದರು.

ಅಗ್ನಿಸ್ಪರ್ಶಕ್ಕೂ ಮುನ್ನ ಜಿಲ್ಲಾ ಪೊಲೀಸ್‌ಇಲಾಖೆಯಿಂದ ಮೃತರ ಗೌರವಾರ್ಥವಾಗಿ ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಮರ್ಪಿಸಿದರು. ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ತ್ರಿವರ್ಣ ಧ್ವಜವನ್ನು ಗೌರವಪೂರ್ವಕವಾಗಿ ಕೃಷ್ಣ ಅವರ ಪತ್ನಿ ಪ್ರೇಮಾ ಅವರಿಗೆ ಹಸ್ತಾಂತರಿಸಲಾಯಿತು.

ಇದಕ್ಕೂ ಮುನ್ನ ಅಂತ್ಯಕ್ರಿಯೆ ಸ್ಥಳದಲ್ಲಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಲಾಗಿತ್ತು. ಕುಟುಂಬಸ್ಥರೂ ಸೇರಿದಂತೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಆದಿಯಾಗಿ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ