Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ದಲಿತರಿಗೆ ಕ್ಷೌರ ಮಾಡದ ವ್ಯಕ್ತಿಗೆ ವ್ಯಾಪಕ ಖಂಡನೆ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಚಿತ್ರದುರ್ಗ ಜಿಲ್ಲೆ  ಚಳ್ಳಕೆರೆ ತಾಲ್ಲೂಕಿನ ಕಾಲುವೆಹಳ್ಳಿ ಗ್ರಾಮದಲ್ಲಿ ಮಾದಿಗ ಸಮುದಾಯದವರಿಗೆ ಹೇರ್(ಕ್ಷೌರ) ಕಟಿಂಗ್ ಮಾಡಲು ಅಲ್ಲಿನ ಗ್ರಾಮದವರು ನಿರಾಕರಣೆ ಮಾಡುತ್ತಿದ್ದು ಈ ವಿಚಾರವಾಗಿ ಪ್ರಶ್ನೆ ಮಾಡಿದ ಮಾದಿಗ ಸಮುದಾಯದ ಯುವಕನಿಗೆ ಗ್ರಾಮದ ಕೆಲವು ಜನ ಪ್ರಾಣ ಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯ ಎಂದು ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.


 ಮಾದಿಗ ಸಮುದಾಯದ ಯುವಕರ ಜೊತೆ ಮಾತನಾಡಿರುವ ಮೊಬೈಲ್  ಆಡಿಯೋದಲ್ಲಿ ಗ್ರಾಮ ಪಂಚಾಯಿತಿಯ ನೀರುಗಂಟಿ ಒಬ್ಬ ಬೆದರಿಕೆ ಹಾಕುತ್ತಿರುವುದು ಸೇರಿದಂತೆ ನಾಲ್ಕೈದು ಜನ ಗ್ರಾಮದಲ್ಲಿ ನಡೆಯುವ  ಪಂಚಾಯಿತಿಗೆ ಮಾದಿಗರು ಬಾರದೇ ಹೋದರೆ ತಕ್ಕಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿರುತ್ತಾರೆ.

ಆ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ಜೀವಂತವಾಗಿದ್ದು ಸಂಬಂಧಪಟ್ಟ ತಾವುಗಳು ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವ ಹಾಗೂ ಮಾಡಲು ಕುಮ್ಮಕ್ಕು ನೀಡುವ ಮತ್ತು ಮಾದಿಗ ಸಮುದಾಯದವರಿಗೆ ಪ್ರಾಣ ಬೆದರಿಕೆ ಹಾಕಿರುವವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು  ದಲಿತಪರ ಸಂಘಟನೆ ಒಕ್ಕೂಟದಿಂದ ಹಿರಿಯೂರು  ತಹಶೀಲ್ದಾರ್ ರವರಿಗೆ ಮನವಿ ಪತ್ರ ನೀಡಲಾಯಿತು.

ದಲಿತ ಮುಖಂಡರಾದ ಜೀವೇಶ್ ಬೋರನಕುಂಟೆ, ಕೆ.ಪಿ.ಶ್ರೀನಿವಾಸ್, ಮಂಜುನಾಥ್ ಹೆಗ್ಗೆರೆ, ರಘುನಾಥ್ ಕೆ.ಆರ್.ಹಳ್ಳಿ, ಮಾರುತೇಶ್ ಕೂನಿಕೆರೆ, ಓಂಕಾರ್ ಮಸ್ಕಲ್ ಮಟ್ಟಿ, ಶಿವು ಖಂಡೇನಹಳ್ಳಿ, ಕರಿಯಪ್ಪ ಬೋರನಕುಂಟೆ, ಘಾಟ್ ರವಿ, ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಘವೇಂದ್ರ,ತಿಪ್ಪೇಸ್ವಾಮಿ ಫಿಟ್ಲಾಲಿ, ಲಕ್ಷ್ಮಣ್ ರಾವ್ಬೆಳ್ಳಿಯಪ್ಪ, ರಂಗಸ್ವಾಮಿ ಸೋಮೆರಹಳ್ಳಿ, ಲಿಂಗರಾಜ್ ಸೂರಗೊಂಡಹಳ್ಳಿ ಸೇರಿದಂತೆ ಮತ್ತಿತರರು ಮನವಿ ಸಲ್ಲಿಸಿ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ ಬಂದ್ ತಾತ್ಕಾಲಿಕ ಮುಂದೂಡಿಕೆ-ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್ ದೇವಸ್ಥಾನ ಲೋಕಾರ್ಪಣೆ ಹಾಗೂ ಮಲ್ಟಿಜಿಮ್ ಉದ್ಘಾಟನೆಚಿತ್ರದುರ್ಗ ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ಕಾಟಿಹಳ್ಳಿ ಕರಿಯಪ್ಪ ಅವಿರೋಧ ಆಯ್ಕೆ ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಮತ್ತೆ ಇಡಿ ಶಾಕ್, ವಿಚಾರಣೆಗೆ ಹಾಜರ್‘ಭಾರತ್ ಜೋಡೋ ಯಾತ್ರೆ’ಗೆ ೪ ವರ್ಷ: ಸಮಗ್ರ ಆಡಳಿತ ಮಾದರಿಗೆ ಯಾತ್ರೆಯೇ ಸ್ಫೂರ್ತಿ –ಸಿಎಂ ಡಿ.ಕೆ. ಶಿವಕುಮಾರ್ಭವಿಷ್ಯದ ತಂತ್ರಜ್ಞಾನಕ್ಕೆ ಬೆಂಗಳೂರು ಹೆಬ್ಬಾಗಿಲು -ಸಿಎಂ ಡಿ.ಕೆ. ಶಿವಕುಮಾರ್ಸೈನ್ಸ್ ಅಂಡ್ ಮ್ಯಾನೇಜ್‌ಮೆಂಟ್ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಅಮೆರಿಕದ ಅಕ್ಕ ಸಮ್ಮೇಳನದಲ್ಲಿ ಭಾರತದ ಪ್ರಗತಿ ಬಿಚ್ಚಿಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಮೆಚ್ಚಿದ್ದ ನಿಂಗಮ್ಮನ ಅಂಗಡಿ ತೆರವಿಗೆ ಜಿಬಿಎ ನೋಟಿಸ್: ಆರ್. ಅಶೋಕ್ ಕಿಡಿ ಭಾರತದ ಕೀರ್ತಿ ಪತಾಕೆ ಹಾರಿಸಿದ ಸಾತ್ವಿಕ್-ಚಿರಾಗ್ ಜೋಡಿಗೆ ಅಭಿನಂದನೆಗಳ ಮಹಾಪೂರ