Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೀದಿ ನಾಯಿಗಳ ಕಾಟ ಮೂರು ವರ್ಷದ ಬಾಲಕನ ಮೇಲೆ ದಾಳಿ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಕಳೆದ ಸುಮಾರು ಎರಡು ತಿಂಗಳಿನಿಂದ ಚಳ್ಳಕೆರೆ ನಗರವೂ ಸೇರಿದಂತೆ ತಾಲ್ಲೂಕಿನಾದ್ಯಂತ ರಸ್ತೆಗಳಲ್ಲಿ ಓಡಾಡುವ ಸಾರ್ವಜನಿಕರು, ಮಕ್ಕಳು, ಮಹಿಳೆಯರು ಹೆಜ್ಜೆ ಹೆಜ್ಜೆಗೂ ರಸ್ತೆಯಲ್ಲಿ ಬೀದಿ ನಾಯಿಗಳು ಇರುವಿಕೆಯನ್ನು ಗಮನಿಸಿ ರಸ್ತೆಗೆ ಇಳಿಯಬೇಕಿದೆ. ಮೈಮರೆತು ರಸ್ತೆಗೆ ಬಂದರೆ ಬೀದಿನಾಯಿಗಳು ಓಡಿಸಿಕೊಂಡು ಬಂದು ಕಚ್ಚುತ್ತಿವೆ.

ಪ್ರತಿನಿತ್ಯ ನಾಯಿಗಳ ಕಾಟ ಮಿತಿಮೀರುತ್ತಿದ್ದರೂ ನಗರಸಭೆಯಾಗಲಿ, ಗ್ರಾಮ ಪಂಚಾಯಿತಿ ಆಡಳಿತವಾಗಲಿ ನಾಯಿಗಳ ಕಾಟವನ್ನು ನಿಯಂತ್ರಿಸಲು ಮುಂದಾಗುತ್ತಿಲ್ಲ. ಇದುವರೆಗೂ ಸುಮಾರು ೫೦೦ಕ್ಕೂ ಹೆಚ್ಚು ಜನರಿಗೆ ನಾಯಿಗಳು ಕಚ್ಚಿವೆ. ನಗರ ಪ್ರದೇಶದಲ್ಲಿ ೨೦೦, ಗ್ರಾಮೀಣ ಪ್ರದೇಶದಲ್ಲಿ ೩೦೦ಕ್ಕೂ ಹೆಚ್ಚು ಜನರಿಗೆ ನಾಯಿ ಕಚ್ಚಿದ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡುತ್ತಾರೆ. ನಾಯಿಗಳಿಂದ ಕಚ್ಚಿಸಿಕೊಂಡವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.

ನಗರದ ಕಾಟಪ್ಪನಹಟ್ಟಿ, ಕಾಟಪ್ಪನಹಟ್ಟಿ ಗೊಲ್ಲರಹಟ್ಟಿ, ಚಿತ್ರಯ್ಯನಹಟ್ಟಿ, ಗಾಂಧಿನಗರ, ರಹೀಂನಗರ, ಅಂಬೇಡ್ಕರ್ ನಗರ, ಶಾಂತಿನಗರ, ಮದಕರಿನಗರ, ವಾಲ್ಮೀಕಿ ನಗರ ವಿಠಲನಗರವೂ ಸೇರಿದಂತೆ ಅನೇಕ ಕಡೆ ಬೀದಿನಾಯಿಗಳು ಗುಂಪು, ಗುಂಪಾಗಿ ಓಡಾಡುತ್ತಾ ದಿಢೀರನೆ ಸಾರ್ವಜನಿಕರು, ವಾಹನ ಸವಾರರ ಮೇಲೆ ಎರಗುತ್ತಿವೆ. ಭಯಭೀತರಾಗುವ ಸಾರ್ವಜನಿಕರಿಗೆ ಯಾವುದೇ ರಕ್ಷಣೆ ಇರುವುದಿಲ್ಲ. ನಾಯಿಗಳ ಭಯದಿಂದ ಜನರು ಬೆಳಗಿನ ಸಮಯದಲ್ಲಿ ಓಡಾಟ ನಡೆಸುವುದೇ ಕಡಿಮೆ ಮಾಡಿದ್ದಾರೆ.

ನಗರಸಭೆ ಆಡಳಿತ ನಗರದಾದ್ಯಂತ ಬೀದಿ, ಬೀದಿಗಳಲ್ಲಿ ಅಲೆದಾಡುವ ನಾಯಿಗಳ ಕಾಟವನ್ನು ನಿಯಂತ್ರಿಸುವಲ್ಲಿ ಮುಂದಾಗಬೇಕಿದೆ. ಇತ್ತೀಚಿಗಷ್ಟೇ ಕಾಟಪ್ಪನಹಟ್ಟಿಯಗೊಲ್ಲರಹಟ್ಟಿಯಲ್ಲಿ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ೩ ವರ್ಷದ ಸಿಂಪು ಎಂಬ ಬಾಲಕನ ಕೈಗೆ ಬಾಯಿಹಾಕಿ ಅವನ ಕೈಯ ಮಾಂಸವನ್ನು ಕಿತ್ತಿದೆ.



ಬಿಡಿಸಲು ಬಂದ ಅವರ ತಂದೆ ಮಂಜುನಾಥ(೩೩)ನ ಮೇಲೂ ನಾಯಿ ದಾಳಿ ನಡೆಸಿ ಎರಡ್ಮೂರು ಕಡೆ ಕಚ್ಚಿದೆ. ಹಳೇ ಟೌನ್‌ನ ತೇರು ಬೀದಿಯಲ್ಲಿ ಬೀದಿನಾಯಿಯೊಂದು ಸಿಕ್ಕಿ ಸಿಕ್ಕ ಜನರನ್ನು ಕಚ್ಚುತ್ತಿದ್ದು, ಅದನ್ನು ಕಂಡ ಸ್ಥಳೀಯರು ನಾಯಿಯನ್ನು ದೊಣ್ಣೆಯಿಂದ ಹೊಡೆದು ಓಡಿಸಿದ್ದಾರೆ.

ಒಟ್ಟಿನಲ್ಲಿ ನಾಯಿಗಳ ಕಾಟದಿಂದ ಸಾರ್ವಜನಿಕರಿಗೆ ರಕ್ಷಣೆ ನೀಡುವ ಕೆಲಸವನ್ನು ನಗರಸಭೆ ಆಡಳಿತ ನೀಡಬೇಕಿದೆ. ಈಗಾಗಲೇ ನಾಯಿಗಳ ಕಾಟದಿಂದ ಸಾರ್ವಜನಿಕರು ರೋಸಿದ್ದಾರೆ. ಇತ್ತೀಚೆಗೆ ನಗರಸಭೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲೂ ನಾಯಿಗಳ ಉಪಟಳದ ಬಗ್ಗೆ ಸದಸ್ಯರೇ ಧ್ವನಿ ಎತ್ತಿ ಗಮನ ಸೆಳೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ