Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರದ ಸ್ವಚ್ಛತೆಗೆ ಸಾರ್ವಜನಿಕರ ಸಹಕಾರ ಅಗತ್ಯ : ಎ ವಾಸೀಂ

Advertisement
ಚಂದ್ರವಳ್ಳಿ ನ್ಯೂಸ್ ಹಿರಿಯೂರು:
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶದಂತೆ ನಗರ ಅಭಿವೃದ್ಧಿ  ಪೌರಾಡಳಿತ ನಿರ್ದೇಶನಾಲಯದ ವ್ಯಾಪ್ತಿಯ ನಗರಸಭೆ ಕಾರ್ಯಾಲಯ ಹಿರಿಯೂರು ವತಿಯಿಂದ ಸೆಪ್ಟಂಬರ್ 17 ರಿಂದ ಅಕ್ಟೋಬರ್  2 ರವರಿಗೆ ಸ್ವಚ್ಛತೆಯೇ ಸೇವೆ ಸ್ವಚ್ಛೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಪೌರಾಯುಕ್ತ ಎ ವಾಸೀಂ ಹೇಳಿದರು.


ನಗರದ ರಾಷ್ಟ್ರೀಯ ಅಕಾಡೆಮಿ ಶಾಲೆಯ ಹತ್ತಿರ ಸ್ವಚ್ಛತೆಯ ಕಾರ್ಯಕ್ರಮಕ್ಕೆ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ ಡಿ ಸಣ್ಣಪ್ಪ ಸ್ವಚ್ಛತಾ ಆಂದೋಲನ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ಆಂದೋಲನಕ್ಕೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಸಾರ್ವಜನಿಕರು ರಸ್ತೆಯ ಅಕ್ಕ ಪಕ್ಕ ಚರಂಡಿಗೆ ಕಸ ಹಾಕಬಾರದು, ಪ್ರತಿನಿತ್ಯ ಸಾರ್ವಜನಿಕರು ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸ್ವಚ್ಛತೆ ಕಾಪಾಡಿಕೊಳ್ಳುವುದರಿಂದ ಯಾವುದೇ ಸಾಂಕ್ರಾಮಿಕ ರೋಗಗಳು ಹರಡುವುದಿಲ್ಲ, ಒಳ್ಳೆಯ ವಾತಾವರಣ ಕಾಪಾಡಿಕೊಳ್ಳುವುದರ ಜೊತೆಗೆ ಪೌರ ಕಾರ್ಮಿಕರ ಕಾರ್ಯಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ವಾಸೀಂ ಮನವಿ ಮಾಡಿದರು.


ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಡಿ ಸಣ್ಣಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ನಗರದ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡುತ್ತಿದ್ದು ಸಾರ್ವಜನಿಕರು ಕೈ ಜೋಡಿಸಬೇಕು ಕಸವನ್ನು ಸಿಕ್ಕ ಸಿಕ್ಕಲ್ಲಿ ಹಾಕಬಾರದು. ಪ್ರತಿ ದಿನ ಬೆಳಿಗ್ಗೆ ನಗರಸಭೆಯ ಕಸದ ಗಾಡಿಗಳು ಬರುತ್ತವೆ. ಆ ಗಾಡಿಗೆ ಹಸಿ ಕಸ ಒಣ ಕಸ  ಬೇರ್ಪಡಿಸಿ ಹಾಕುವುದರ ಮೂಲಕ ನಗರದ ಸ್ವಚ್ಛತೆಗೆ ಸಹಕರಿಸಬೇಕೆಂದು ಮನವಿ ಮಾಡಿದರು.


ನಗರದ ಸಂಘ ಸಂಸ್ಥೆಗಳು ಯುವಕರು ವಿದ್ಯಾರ್ಥಿಗಳು ನಗರ ಸಭೆ ಕೈಗೊಳ್ಳುವ ಸ್ವಚ್ಛತೆಗೆ ಕೈಜೋಡಿಸಿದರೆ ನಗರವನ್ನು ಸ್ವಚ್ಛವಾಗಿ ಇಡಲು ಸಾಧ್ಯ. ನಗರದಲ್ಲಿ ಇರುವ ಶಾಲೆ ಕಾಲೇಜು ವಿದ್ಯಾರ್ಥಿಗಳು ಪ್ರತಿಯೊಂದು ಶಾಲೆಯ ವತಿಯಿಂದ ಯಾವುದಾದರೂ ವಾರ್ಡ್ಗಳಲ್ಲಿ ಸ್ವಚ್ಛತೆಗೆ ವಿದ್ಯಾರ್ಥಿಗಳು ಮುಂದಾಗುವುದರ ಮುಖಾಂತರ ಸಾರ್ವಜನಿಕರಿಗೆ ಅರಿವು ಮೂಡಿಸಲು ಯುವ ಪೀಳಿಗೆ ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ನಗರ ಸಭೆಯ ಆರೋಗ್ಯ ನಿರೀಕ್ಷಕರಾದ ಸುನಿಲ್ ಕುಮಾರ್, ಸಂಧ್ಯಾ, ಅಶೋಕ್, ಮಹಾಲಿಂಗಪ್ಪ, ರಾಷ್ಟ್ರೀಯ ಅಕಾಡೆಮಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು, ಪೌರಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನಾಗರಿಕರು ನಗರದ ಸ್ವಚ್ಛತೆಯನ್ನು ಕಾಪಾಡಿದರೆ ನಗರದ ಜನರು ಆರೋಗ್ಯವಾಗಿರಲು ಸಾಧ್ಯ ಹಾಗೂ ಮನೆಯ ಅಕ್ಕ ಪಕ್ಕ ಚರಂಡಿಗೆ ಕಸ ಸೇರಿದಂತೆ ಯಾವುದೇ ಘನ ತ್ಯಾಜ್ಯ ವಸ್ತುಗಳನ್ನ ಹಾಕದೆ ಮನೆಯ ಸುತ್ತ ಮುತ್ತಲ ಸ್ವಚ್ಛತೆ ಕಾಪಾಡುವುದರಿಂದ ಒಳ್ಳೆಯ ವಾತಾವರಣ ಹಾಗೂ ಸಾಂಕ್ರಾಮಿಕ ರೋಗಗಳಿಂದ ದೂರ ಇರಬಹುದು ಮತ್ತು ಪೌರಕಾರ್ಮಿಕರನ್ನು ಪ್ರೀತಿ ವಿಶ್ವಾಸದಿಂದ ಕಾಣುವ ಮೂಲಕ ಸಾರ್ವಜನಿಕರು ಸಹಕಾರ ನೀಡುವುದು ಬಹಳ ಮುಖ್ಯವಾದದ್ದು, ಕಸವನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಪ್ಪಿಸುವುದು.

ಕಸವನ್ನು ಮೂಲದಲ್ಲಿಯೇ ವಿಂಗಡಿಸುವುದು. ಪೌರಕಾರ್ಮಿಕರನ್ನು ಗೌರವಿಸುವುದು ಮತ್ತು ಬೀದಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು. ನಗರ ಸ್ವಚ್ಛತಾ ಅಭಿಯಾನಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು. ನಾಗರಿಕರ ಪ್ರೀತಿ ವಾತ್ಸಲ್ಯ ಬಹು ದೊಡ್ಡದು.
ಎ.ವಾಸೀಂ ಪೌರಾಯುಕ್ತರು, ನಗರ ಸಭೆ, ಹಿರಿಯೂರು.


 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಸ್ಕಾಂನ ಪ್ರತಿಭಾವಂತ ಇಂಜಿನಿಯರ್ ರೇಣುಕಾಪ್ರಸಾದ್ ಇನ್ನಿಲ್ಲ​ಸಂದಿಗ್ದ ಪರಿಸ್ಥಿತಿಯಲ್ಲಿ ಹಿರಿಯೂರು ರಾಜಕೀಯ  NEET 2026 ರದ್ದು: ಯುವಜನತೆಯ ಕನಸಿಗೆ ಕೇಂದ್ರದ 'ಮಹಾವಂಚನೆ' – ಎಂ.ಬಿ. ಪಾಟೀಲ್ ಆಕ್ರೋಶಕರ್ನಾಟಕ-ಜಪಾನ್ ಬಾಂಧವ್ಯ ವೃದ್ಧಿ: ಜಪಾನ್ ರಾಯಭಾರಿಯೊಂದಿಗೆ ಸಚಿವ ಎಂ.ಬಿ. ಪಾಟೀಲ್ ಸಮಾಲೋಚನೆರಾಷ್ಟ್ರೀಯ ಪಂಚಾಯತ್ ಪುರಸ್ಕಾರ: ಕರ್ನಾಟಕದ 6 ಪಂಚಾಯತಿಗಳಿಗೆ ಐತಿಹಾಸಿಕ ಗೌರವ'ಆರಕ್ಷಕರೇ ಅಪರಾಧಿಗಳಾದರೆ ಜನರ ಪಾಡೇನು?': ಬಿ.ವೈ. ವಿಜಯೇಂದ್ರ ಆಕ್ರೋಶಕಾಂಗ್ರೆಸ್ ಸರ್ಕಾರ ಆಡಳಿತಾತ್ಮಕವಾಗಿ ದಿವಾಳಿ: ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿಕನ್ನಡ ಕಲಾಕ್ಷೇತ್ರಕ್ಕೆ ತುಂಬಲಾರದ ನಷ್ಟ: ಬಹುಮುಖ ಪ್ರತಿಭೆ ದಿಲೀಪ್ ರಾಜ್ ಇನ್ನಿಲ್ಲ​ಕಾಂಗ್ರೆಸ್‌ಗೆ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಚರ್ಚಿಸುವ ನೈತಿಕತೆ ಇಲ್ಲ: ಕುಮಾರಸ್ವಾಮಿ ವಾಗ್ದಾಳಿಭ್ರಷ್ಟ ಕೆಪಿಎಸ್‌ಸಿ ವ್ಯವಸ್ಥೆಯ ವಿರುದ್ಧ ನಿಖಿಲ್ ಕುಮಾರಸ್ವಾಮಿ 'ಮಹಾಸಮರ'