Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಬ್ಬಿನಹೊಳೆ ಪೊಲೀಸರ ಮಿಂಚಿನ ಕಾರ್ಯಾಚರಣೆ ಶ್ರೀಗಂಧ ಕಳ್ಳರ ಬಂಧನ

Advertisement
ಅಬ್ಬಿನಹೊಳೆ ಪೊಲೀಸರ ಮಿಂಚಿನ ಕಾರ್ಯಾಚರಣೆ ಶ್ರೀಗಂಧ ಕಳ್ಳರ ಬಂಧ
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಶ್ರೀಗಂಧ ಬೆಳೆಗಾರರ ದೂರು ಆಧರಿಸಿ ಪೊಲೀಸರು ಮಿಂಚಿನ ಕಾರ್ಯಾಚರಣೆ ಮಾಡಿ ಶ್ರೀಗಂಧದ ಮರಗಳನ್ನು ಕಳವು ಮಾಡಿದ್ದ 4 ಮಂದಿ ಅಂತರರಾಜ್ಯ ಮತತು ರಾಜ್ಯದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹಿರಿಯೂರು ತಾಲ್ಲೂಕು ಶ್ರೀರಂಗ ಬಡಾವಣೆ ಇಕ್ಕನೂರು-ಕುರುಬರಹಳ್ಳಿ ಗ್ರಾಮ ವಿ. ರಾಜು ತಂದೆ ಲೇಟ್ ವೆಂಕಟಪ್ಪ ಇವರಿಗೆ ಸೇರಿದ ಹಿರಿಯೂರು ತಾಲ್ಲೂಕಿನ ಇಕ್ಕನೂರು ಕುರಬರಹಳ್ಳಿ ಮಧ್ಯೆ ಇರುವ ರಿ.ಸ.ನಂಬರ್ ೧೩/೩ ರಲ್ಲಿ ೪ ಎಕರೆ ಜಮೀನಿನಲ್ಲಿ ೩೦೦ ಶ್ರೀಗಂಧದ ಸಸಿಗಳನ್ನು ಹಾಕಿದ್ದು ಇವುಗಳಲ್ಲಿ ದಿನಾಂಕ-೦೩-೦೯-೨೦೨೪ ರಂದು ರಾತ್ರಿ ವೇಳೆಯಲ್ಲಿ ಯಾರೋ ಕಳ್ಳರು ೩ ಶ್ರೀಗಂಧದ ಮರಗಳನ್ನು ಕತ್ತರಿಸಿ ಮರದ ಮೇಲ್ಬಾಗ ಅಲ್ಲಿಯೇ ಬಿಟ್ಟು ಮರದ ಕಾಂಡದ ಭಾಗವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು, ೩ ಮರದ ತುಂಡು ಸುಮಾರು ೫೦ ರಿಂದ ೬೦ ಕೆ.ಜಿ. ತೂಕವಿದ್ದು, ಇದರ ಅಂದಾಜು ಮೌಲ್ಯ ಸುಮಾರು ೧೦೦೦೦೦ ರೂಪಾಯಿ ಆಗಿದ್ದು, ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿಕೊಂಡು ಹೋದವರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಿ ಎಂದು ರೈತರು ನೀಡಿದ ದೂರಿನ ಮೇರೆಗೆ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತದೆ.
ಸದರಿ ಪ್ರಕರಣದಲ್ಲಿ ಕಳುವಾದ ಮಾಲು ಮತ್ತು ಆರೋಪಿತರನ್ನು ಪತ್ತೆ ಮಾಡುವ ಸಲುವಾಗಿ ಅಬ್ಬಿನಹೊಳೆ ಪೊಲೀಸ್ ಠಾಣೆಯ ಪಿಎಸ್‌ಐ ಬಾಹುಬಲಿ ಎಂ ಪಡನಾಡ, ಮಂಜುನಾಥ ಜಿ. ಹಾಗೂ ಸಿಬ್ಬಂದಿಯವರನ್ನು ಒಳಗೊಂಡ ತಂಡವು ಆರೋಪಿತರ ಕುರಿತಂತೆ ಬಾತ್ಮೀದಾರರಿಂದ ಮಾಹಿತಿ ಸಂಗ್ರಹಿಸಿ ಆರೋಪಿಗಳಾದ ಅನಂತಪುರ ಜಿಲ್ಲೆ ಕಲ್ಯಾಣದುರ್ಗ ತಾಲ್ಲೂಕು ಕುಂದುರ್ಪಿ ಮಂಡಲಂ ವಡ್ಡೆಪಾಳ್ಯಂ ಕೊಟ್ಟೂರಪ್ಪ ತಂದೆ ಓಬಳಪ್ಪ, ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದ ಸಿದ್ದಣ್ಣ ಟಿ ತಂದೆ ತಿಪ್ಪೇಸ್ವಾಮಿ ಎಸ್, ಜಿಲ್ಲೆ ಕಲ್ಯಾಣದುರ್ಗ ತಾಲ್ಲೂಕು ಕುಂದುರ್ಪಿ ಮಂಡಲಂ ವಡ್ಡೆಪಾಳ್ಯಂ ಓಬಣ್ಣ ತಂದೆ ಓಬಣ್ಣ, ಈರಣ್ಣ ಆರ್ ತಂದೆ ಮಲ್ಲೇಶಪ್ಪ ಈ ನಾಲ್ಕು ಜನ ಆರೋಪಿತರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಇಕ್ಕನೂರು- ಕುರುಬರಹಳ್ಳಿ ಗ್ರಾಮದ ಮಧ್ಯ ಇರುವ ವಿ ರಾಜು ರವರ ಜಮೀನಿನಲ್ಲಿ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಸದರಿಯವರ ಕಡೆಯಿಂದ ಸುಮಾರು ೬೦,೦೦೦ ರೂಪಾಯಿ ಮೌಲ್ಯದ ೩೦ ಕೆ.ಜಿ. ೬೪೦ ಗ್ರಾಂ ತೂಕದ ಶ್ರೀಗಂಧದ ಮರದ ತುಂಡುಗಳನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದ ೨ ಗರಗಸ, ೧ ಬಾಚಿ, ೨ ಮೋಟಾರ್ ಸೈಕಲ್‌ಗಳನ್ನು ಅಮಾನತ್ತುಪಡಿಸಿಕೊಂಡಿರುತ್ತದೆ.
ಪತ್ತೆ ಕಾರ್ಯದಲ್ಲಿ ಭಾಗವಹಿಸಿದ ಅಬ್ಬಿನಹೊಳೆ ಪೊಲೀಸ್ ಠಾಣೆಯ ಪಿ.ಎಸ್.ಐ. ಬಾಹುಬಲಿ ಎಂ ಪಡನಾಡ ಮತ್ತು ಮಂಜುನಾಥ ಜಿ. ಹಾಗೂ ಸಿಬ್ಬಂದಿಯವರಾದ ನಾಗರಾಜ್, ನಿಂಗರಾಜು, ದೇವೆಂದ್ರಪ್ಪ, ದಾದಾ ಖಲಂದರ್, ನಾಗಣ್ಣ, ನಾಗರಾಜ ಮತ್ತು ರುದ್ರೇಶ ರವರುಗಳ ಕಾರ್ಯವನ್ನು ಪೊಲೀಸ್ ಅಧೀಕ್ಷಕರು ಶ್ಲಾಘಿಸಿರುತ್ತಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ