Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಖಾತೆಯ ಅಧಿಕಾರ, ಜವಾಬ್ದಾರಿ ಬಗ್ಗೆ ಸ್ಪಷ್ಟನೆ ಸಿಕ್ಕ ಮೇಲಷ್ಟೇ ಅಧಿಕಾರ ಸ್ವೀಕಾರ: ಸಚಿವ ಕೃಷ್ಣ ಬೈರೇಗೌಡ ಖಡಕ್ ಹೇಳಿಕೆ!

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಅಭಿವೃದ್ಧಿ ಸಚಿವರಾಗಿ ನೇಮಕಗೊಂಡಿದ್ದರೂ ಇನ್ನೂ ಅಧಿಕೃತವಾಗಿ ಅಧಿಕಾರ ಸ್ವೀಕರಿಸದ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. "ಖಾತೆಯ ಜವಾಬ್ದಾರಿ ಮತ್ತು ಅಧಿಕಾರಗಳ ಬಗ್ಗೆ ಸಂಪೂರ್ಣ ಸ್ಪಷ್ಟತೆ ಸಿಕ್ಕ ಬಳಿಕವಷ್ಟೇ ನಾನು ಅಧಿಕಾರ ವಹಿಸಿಕೊಳ್ಳುತ್ತೇನೆ" ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಮೌನವನ್ನು ಅವರು ಮುರಿದಿದ್ದಾರೆ.

ಚರ್ಚೆಗೆ ಗ್ರಾಸವಾದ ಅಸಲಿ ಕಾರಣವೇನು?:
ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಕೃಷ್ಣ ಬೈರೇಗೌಡ ಅವರಿಗೆ ನೀಡಲಾಗಿದ್ದರೂ, ಆ ಖಾತೆಯ ಅತ್ಯಂತ ಪ್ರಮುಖ ಸಂಸ್ಥೆಗಳಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮತ್ತು ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇಂದಿಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿಯಂತ್ರಣದಲ್ಲಿಯೇ ಇವೆ. ಇದು ಸಚಿವರ ಅಧಿಕಾರ ವ್ಯಾಪ್ತಿಯ ಬಗ್ಗೆ ಗೊಂದಲ ಮೂಡಿಸಿತ್ತು.

ಹೊಣೆಗಾರಿಕೆಗೆ ಆದ್ಯತೆ: "ಬೆಂಗಳೂರು ಅಭಿವೃದ್ಧಿ ಎಂಬುದು ಅತ್ಯಂತ ದೊಡ್ಡ ಜವಾಬ್ದಾರಿ. ಜನರು ಮತ್ತು ಸರ್ಕಾರ ನಮ್ಮ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಾನು ಯಾವುದೇ ಜವಾಬ್ದಾರಿಯನ್ನು ವಹಿಸಿಕೊಂಡರೂ ಅದಕ್ಕೆ ತಕ್ಕ ಉತ್ತರದಾಯಿತ್ವ ಇರಬೇಕು. ಪಕ್ಷ ಮತ್ತು ಸಾರ್ವಜನಿಕರು ಬಯಸುವ ಫಲಿತಾಂಶ ನೀಡಬೇಕಾದರೆ ಖಾತೆಯ ಅಧಿಕಾರ ಹಾಗೂ ಜವಾಬ್ದಾರಿಗಳ ಬಗ್ಗೆ ನನಗೊಂದು ಸ್ಪಷ್ಟತೆ ಬೇಕು" ಎಂದು ವಿಧಾನಸೌಧದಲ್ಲಿ ಸುದ್ದಿಗಾರರ ಮುಂದೆ ಕೃಷ್ಣ ಬೈರೇಗೌಡ ಪ್ರತಿಪಾದಿಸಿದರು.

ಖಾತೆ ಬಗ್ಗೆ ಅಸಮಾಧಾನವಿಲ್ಲ: ತಮಗೆ ಹಂಚಿಕೆಯಾಗಿರುವ ಖಾತೆಯ ಬಗ್ಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, "ಮುಖ್ಯಮಂತ್ರಿಗಳು ಮತ್ತು ಹೈಕಮಾಂಡ್ ನನಗೆ ಕಠಿಣ ಜವಾಬ್ದಾರಿಯನ್ನು ನೀಡಿದ್ದಾರೆ. ಇದನ್ನು ನಾನು ಕೇವಲ ಅಧಿಕಾರದ ಸ್ಥಾನವಾಗಿ ನೋಡುತ್ತಿಲ್ಲ, ಇದೊಂದು ದೊಡ್ಡ ಹೊಣೆಗಾರಿಕೆ" ಎಂದರು.

ಸಿಎಂ ಮೇಲೆ ವಿಶ್ವಾಸ: ಇತ್ತೀಚೆಗೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದ ಕೃಷ್ಣ ಬೈರೇಗೌಡ ಅವರು, ಈ ಅಧಿಕಾರ ವ್ಯಾಪ್ತಿಯ ಸಮಸ್ಯೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶೀಘ್ರದಲ್ಲೇ ಬಗೆಹರಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸರಳತೆ ಮೆರೆದ ಸಚಿವ!
ಅಧಿಕೃತವಾಗಿ ಸಚಿವಾಲಯದ ಅಧಿಕಾರ ವಹಿಸಿಕೊಳ್ಳದ ಕಾರಣ
, ಶನಿವಾರ ನಡೆದ ಹಿರಿಯ ಅಧಿಕಾರಿಗಳ ಸಭೆಗೆ ಕೃಷ್ಣ ಬೈರೇಗೌಡ ಅವರು ಸರ್ಕಾರದ ಅಧಿಕೃತ ಕಾರನ್ನು ಬಳಸದೆ, ತಮ್ಮ ಖಾಸಗಿ ವಾಹನದಲ್ಲೇ ಆಗಮಿಸುವ ಮೂಲಕ ಗಮನ ಸೆಳೆದರು.

ಇತ್ತೀಚೆಗೆ ನಡೆದ ನೀತಿ ಆಯೋಗದ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಭಾಗವಹಿಸಿದ್ದ ಕೃಷ್ಣ ಬೈರೇಗೌಡ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಸಂದರ್ಭದಲ್ಲೂ ಸಿಎಂ ಅವರೊಂದಿಗೇ ಇದ್ದರು ಎಂಬುದು ಗಮನಾರ್ಹ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.