Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಡಳಿತಕ್ಕಾಗಿ ಖಾತೆ ಹಂಚಿಕೆಯಲ್ಲ, ಲೂಟಿ ಮತ್ತು ರಾಜಕೀಯ ಹೊಂದಾಣಿಕೆಗೆ ಮಾಡಿದ ಖಾತೆ ಹಂಚಿಕೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ಖಾತೆ ಹಂಚಿಕೆ ಪ್ರಕ್ರಿಯೆಯನ್ನು ತೀವ್ರವಾಗಿ ಟೀಕಿಸಿದ್ದು
, "ಇದು ಆಡಳಿತಕ್ಕಾಗಿ ಮಾಡಿದ ಹಂಚಿಕೆಯಲ್ಲ, ಬದಲಿಗೆ ಲೂಟಿಗಾಗಿ ಮಾಡಿದ ರಾಜಕೀಯ ಹೊಂದಾಣಿಕೆ" ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿದ್ದಾರೆ.

​ಅಶೋಕ್ ಅವರು ಸರ್ಕಾರದ ವಿರುದ್ಧ ಮಾಡಿರುವ ಪ್ರಮುಖ ಆರೋಪಗಳು:
​ಕೃಷಿ ಮತ್ತು ಶಿಕ್ಷಣ ಇಲಾಖೆಗಳು ಅನಾಥ.
​ಕೃಷಿ ಇಲಾಖೆಗೆ ಸಚಿವರಿಲ್ಲ: ಮುಂಗಾರು ಬಿತ್ತನೆಗೆ ರೈತರು ಸಜ್ಜಾಗುತ್ತಿರುವ ಈ ಮಹತ್ವದ ಸಮಯದಲ್ಲಿ ರಾಜ್ಯಕ್ಕೆ ಪೂರ್ಣಾವಧಿ ಕೃಷಿ ಸಚಿವರೇ ಇಲ್ಲ. ಬಿತ್ತನೆ ಬೀಜ
, ರಸಗೊಬ್ಬರ ಪೂರೈಕೆ, ಬೆಳೆ ಸಾಲ ಮತ್ತು ವಿಮೆಯ ಉಸ್ತುವಾರಿ ನೋಡಿಕೊಳ್ಳುವವರೇ ಇಲ್ಲದಂತಾಗಿದೆ.

​ಶಿಕ್ಷಣ ಇಲಾಖೆಯ ಸವಾಲುಗಳು: ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ ಶಾಲೆಗಳ ಕೊಠಡಿ ದುರಸ್ತಿ, ಶೌಚಾಲಯ ಕೊರತೆ, ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆಯಂತಹ ತುರ್ತು ಸಮಸ್ಯೆಗಳನ್ನು ಆಲಿಸಲು ಒಬ್ಬ ಶಿಕ್ಷಣ ಸಚಿವರೂ ಇಲ್ಲದಂತಾಗಿದೆ.

​ಬೆಂಗಳೂರು ಅಭಿವೃದ್ಧಿ ಖಾತೆ ಕೇವಲ 'ಆಟಕ್ಕುಂಟು ಲೆಕ್ಕಕ್ಕಿಲ್ಲ'-
​ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಸಚಿವರಿಗೆ ನೀಡಲಾಗಿದ್ದರೂ
, ನಗರದ ಯೋಜನೆಗೆ ಅತ್ಯಂತ ಪ್ರಮುಖವಾಗಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮತ್ತು ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಂಸ್ಥೆಗಳನ್ನು ಮುಖ್ಯಮಂತ್ರಿಗಳೇ ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ಹಾಗಾಗಿ ಬೆಂಗಳೂರು ಅಭಿವೃದ್ಧಿ ಸಚಿವರು ಹೆಸರಿಗಷ್ಟೇ ಇದ್ದು, "ಆಟಕ್ಕುಂಟು ಲೆಕ್ಕಕ್ಕಿಲ್ಲ" ಎನ್ನುವಂತಾಗಿದೆ ಎಂದು ಅಶೋಕ್ ಲೇವಡಿ ಮಾಡಿದ್ದಾರೆ.

​"ರಣಹದ್ದುಗಳಂತೆ ಪೈಪೋಟಿ"
​"ಕಾಂಗ್ರೆಸ್ ನಾಯಕರು ಕಣ್ಣಿರುವುದು ಕೇವಲ ಲೂಟಿ ಹೊಡೆಯುವ ಖಾತೆಗಳ ಮೇಲೆ ಮಾತ್ರ! ಸಾವಿರಾರು ಕೋಟಿ ರೂಪಾಯಿಗಳ ಸಂಪನ್ಮೂಲ, ಗುತ್ತಿಗೆ ಮತ್ತು ಕಮಿಷನ್ ದಂಧೆಗೆ ಅನುಕೂಲವಾಗುವ ಖಾತೆಗಳಿಗಾಗಿ ಕಾಂಗ್ರೆಸ್ ನಾಯಕರ ನಡುವೆ ರಣಹದ್ದುಗಳಂತೆ ಭಾರೀ ಪೈಪೋಟಿ ನಡೆಯುತ್ತಿದೆ."
ಆರ್. ಅಶೋಕ್
, ವಿಪಕ್ಷ ನಾಯಕ

​ಸ್ಥಗಿತಗೊಂಡ ಆಡಳಿತ ಯಂತ್ರ-
​ಕಾಂಗ್ರೆಸ್‌ನ ಒಳಜಗಳ ಮತ್ತು ಅಧಿಕಾರದ ಕಿತ್ತಾಟದಿಂದಾಗಿ ಕಳೆದ ಹಲವು ವಾರಗಳಿಂದ ಇಡೀ ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ.

ಈ ಸರ್ಕಾರಕ್ಕೆ ರೈತರ ಸಮಸ್ಯೆಗಳಿಗೆ ಸಮಯವಿಲ್ಲ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಶಾಲೆಗಳ ದುರಸ್ತಿಗೆ ಆಸಕ್ತಿಯಿಲ್ಲ. ಬೆಂಗಳೂರಿನ ಅವ್ಯವಸ್ಥೆ ಸುಧಾರಿಸುವ ಉದ್ದೇಶವಿಲ್ಲ ಎಂದು ಅವರು ವಾಗ್ದಾಳಿ ಮಾಡಿದ್ದಾರೆ.

​ಕಾಂಗ್ರೆಸ್ ಸರ್ಕಾರದ ಮೊದಲ ಆದ್ಯತೆ ರೈತರು, ವಿದ್ಯಾರ್ಥಿಗಳು ಅಥವಾ ಜನಸಾಮಾನ್ಯರಲ್ಲ; ಬದಲಿಗೆ "ಅಧಿಕಾರ, ಸಂಪನ್ಮೂಲ ಮತ್ತು ಲೂಟಿ" ಮಾತ್ರ ಆಗಿದೆ. ಈ ಲಜ್ಜೆಗೆಟ್ಟ ಅಧಿಕಾರ ದಾಹವನ್ನು ಗಮನಿಸುತ್ತಿರುವ ಕರ್ನಾಟಕದ ಜನತೆ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು 'ನೂರಕ್ಕೆ ನೂರು ಪರ್ಸೆಂಟ್ ಗ್ಯಾರಂಟಿ' ಎಂದು ಅಶೋಕ್ ಭವಿಷ್ಯ ನುಡಿದಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಂಗಾರದ ಅಂಗಡಿಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; 5.76 ಲಕ್ಷ ರೂ. ಮೌಲ್ಯದ ಚಿನ್ನಾಬರಣ ವಶಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಗುರುರಕ್ಷೆ ನೀಡಿ ಗೌರವ, ಆಶೀರ್ವಾದಿಸಿದ ವೀರಶೈವ ಶಿವಾಚಾರ್ಯರುಕಾರ್ಮಿಕರ ರಕ್ಷಣಾ ಕಿಟ್ ವಿತರಣೆಯಲ್ಲಿ ನೂರಾರು ಕೋಟಿ ಹಗರಣ: ಜೆಡಿಎಸ್ ವಾಗ್ದಾಳಿ ‘ರೌಡಿ ನಿಗ್ರಹ ದಳ’ ರಚನೆ ರಾಜಕೀಯ ಗಿಮಿಕ್-ಅಶೋಕ್ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ಕಾಯುತ್ತಿರುವೆ-ರಾಮಲಿಂಗಾರೆಡ್ಡಿಸಿಎಂ ಸಂಧಾನ ಯಶಸ್ವಿ, ಖಾತೆ ಹಂಚಿಕೆ ಬಿಕ್ಕಟ್ಟು ಸದ್ಯಕ್ಕೆ ಸುಖಾಂತ್ಯಖಾತೆಗಾಗಿ ಕಿತ್ತಾಟ, ವಿಪಕ್ಷಗಳ ನಾಟಕ: ಜನಪರ ಕಾರ್ಯದ ಆಧಾರದ ಮೇಲೆ ಖಾತೆ ಹಂಚಿಕೆಯಾಗಲಿಕೆ.ಎನ್ ರಾಜಣ್ಣ ಅವರನ್ನು ಸಚಿವ ಸಂಪುಟ ಸೇರ್ಪಡೆಗೆ ಪ್ರಾಮಾಣಿಕ ಪ್ರಯತ್ನಅಂಡಮಾನ್ ಕಡಲಾಚೆ ಪ್ರದೇಶದಲ್ಲಿ ಭಾರಿ ಪ್ರಮಾಣದ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆವಿಧಾನ ಪರಿಷತ್ ಗೆ 5ನೇ ಅಭ್ಯರ್ಥಿ ಹೆಸರು ಘೋಷಿಸಿದ ಕಾಂಗ್ರೆಸ್