Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟಿ ಸರೋಜಾದೇವಿ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು

Advertisement
ಚಂದ್ರವಳ್ಳಿ ನ್ಯೂಸ್, ಚನ್ನಪಟ್ಟಣ (ರಾಮನಗರ):
ಅಭಿನಯ ಸರಸ್ವತಿ ಖ್ಯಾತಿಯ ಬಿ.ಸರೋಜಾ ದೇವಿ ಅವರ ಅಂತ್ಯಸಂಸ್ಕಾರ ಅವರ ಹುಟ್ಟೂರಾದ ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಮಂಗಳವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಸರೋಜಾ ದೇವಿ ಅವರ ತಾಯಿಯ ಸಮಾಧಿ ಪಕ್ಕವೇ ಒಕ್ಕಲಿಗ ಸಮುದಾಯ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಿತು.


ಬಿ.ಸರೋಜಾ ದೇವಿ ಅವರ ತೋಟದಲ್ಲಿ ತಾಯಿ ಸಮಾಧಿಯ ಪಕ್ಕವೇ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಬಿ.ಸರೋಜಾ ದೇವಿ ಅವರು ಜುಲೈ 14ರ ಸೋಮವಾರ ಬೆಳಗ್ಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ಸ್ವಗೃಹದಲ್ಲಿ ಕೊನೆ ಉಸಿರೆಳೆದಿದ್ದರು.
ಪಾರ್ಥಿವ ಶರೀರವನ್ನು ಬೆಳಗಿನವರೆಗೂ ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲೇ ಸಾರ್ವಜನಿಕ ದರ್ಶನಕ್ಕಿಡಲಾಗಿತ್ತು. ಸಾರ್ವಜನಿಕ ದರ್ಶನದ ಪಾರ್ಥಿವ ಶರೀರದ ಅಂತಿಮಯಾತ್ರೆ ನಡೆಸಲಾಯಿತು.


ಪುಷ್ಪಾಂಲಕೃತ ವಾಹನದಲ್ಲಿ ಪಾರ್ಥೀವ ಶರೀರವನ್ನು ಚನ್ನಪಟ್ಟಣದ ದಶವಾರ ಗ್ರಾಮಕ್ಕೆ ತರಲಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಸಲಾಯಿತು. ಅದಕ್ಕೂ ಮುನ್ನ ಚನ್ನಪಟ್ಟಣದಲ್ಲಿ ಕೆಲ ಹೊತ್ತು ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.

ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ‌ ಗೌರವ ವಂದನೆ ಸಲ್ಲಿಸಿದರು. ನಂತರ ಬಿ.ಸರೋಜಾ ದೇವಿ ಅವರ ಸ್ವಂತ ಭೂಮಿಯಲ್ಲಿ ತಾಯಿ ರುದ್ರಮ್ಮ ಸಮಾಧಿ ಪಕ್ಕದಲ್ಲೇ ಮಣ್ಣಿನಲ್ಲಿ ಸಮಾಧಿ ಮಾಡಲಾಯಿತು.

ದಾರಿ ಉದ್ದಕ್ಕೂ ಅಂತಿಮ ನಮನ:
ಬೆಂಗಳೂರಿನಿಂದ ನೇರವಾಗಿ ದಶವಾರ ಗ್ರಾಮಕ್ಕೆ ಪಾರ್ಥಿವ ಶರೀರವನ್ನು ತರಲಾಯಿತು. ಇದಕ್ಕೂ ಮುನ್ನ ಬಿಡದಿ
, ರಾಮನಗರ ಹಾಗೂ ಚನ್ನಪಟ್ಟಣದ ದಾರಿ ಉದ್ದಕ್ಕೂ ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದ್ದಾರೆ.
ಚನ್ನಪಟ್ಟಣದ ಗಾಂಧಿ ಭವನದ ಬಳಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಟ್ಟು
, ಹುಟ್ಟೂರು ದಶವಾರ ಗ್ರಾಮಕ್ಕೆ ವಾಹನ ಸಂಚರಿಸಿತು.


ದಶವಾರ ಗ್ರಾಮದ ಹೊರ ವಲಯದಲ್ಲಿರುವ ಸರೋಜಾದೇವಿ ಅವರ ಮೆಚ್ಚಿನ ತೋಟದಲ್ಲೇ ಸಂಪ್ರದಾಯಗಳ ಪ್ರಕಾರ ಅಂತಿಮ ವಿಧಿವಿಧಾನಗಳು ನೆರವೇರಿತು.


ಗ್ರಾಮದಲ್ಲಿ ನೀರವ ಮೌನ ಆವರಿಸಿತ್ತು. ಪೂರ್ವ ನಿಗದಿಯಂತೆ ತಾಯಿಯ ರುದ್ರಮ್ಮ ಸಮಾಧಿ ಪಕ್ಕದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಅಂತ್ಯ ಸಂಸ್ಕಾರಕ್ಕೆ ಯಾವುದೇ ತೊಂದರೆ ಆಗದಂತೆ ಬ್ಯಾರಿಕೇಡ್​ ಹಾಕಿ ಸಿದ್ದತೆ ಮಾಡಿಕೊಳ್ಳಲಾಗಿತ್ತು.


ಡಿಸಿಎಂ ಡಿ.ಕೆ ಶಿವಕುಮಾರ್, ಸ್ಥಳೀಯ ಶಾಸಕ ಸಿ.ಪಿ ಯೋಗೇಶ್ವರ್ ಸೇರಿದಂತೆ ಸ್ಥಳೀಯ ರಾಜಕೀಯ ಮುಖಂಡರು, ಸಂಬಂಧಿಕರು, ಚಲನಚಿತ್ರ ನಟರು, ನಿರ್ಮಾಪಕರು, ನಿರ್ದೇಶಕರು ಹಾಗೂ ಗ್ರಾಮಸ್ಥರು ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ