LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

"ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ": ಕಾಂಗ್ರೆಸ್ ಶಾಸಕ ಎನ್.ವೈ. ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರವನ್ನು ಆಂಧ್ರಪ್ರದೇಶಕ್ಕೆ ಸೇರಿಸಿ
, ಇಲ್ಲವೇ ಪಕ್ಕದ ಚಳ್ಳಕೆರೆ ಕ್ಷೇತ್ರಕ್ಕಾದರೂ ಸೇರಿಸಿ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಎನ್.ವೈ. ಗೋಪಾಲಕೃಷ್ಣ ನೀಡಿರುವ ಹೇಳಿಕೆ ತೀವ್ರ ವಿವಾದ ಹಾಗೂ ಚರ್ಚೆಗೆ ಗ್ರಾಸವಾಗಿದೆ.

ಅಸಮಾಧಾನ ಹೊರಹಾಕಿದ ಶಾಸಕ:
ಮೊಳಕಾಲ್ಮೂರಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಸ್ಥಳ ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಾತನಾಡಿದ ಅವರು
, ಕ್ಷೇತ್ರದ ನಿರ್ಲಕ್ಷ್ಯದ ಕುರಿತು ಬಹಿರಂಗವಾಗಿಯೇ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

 "ಮೊಳಕಾಲ್ಮೂರು ಯಾವುದೋ ಒಂದು ಮೂಲೆಯಲ್ಲಿದೆ. ದೊಡ್ಡ ದೊಡ್ಡ ನಾಯಕರಿಗೆ ಹಾಗೂ ಸರ್ಕಾರಕ್ಕೆ ಈ ಕ್ಷೇತ್ರವಿರುವುದೇ ಕಣ್ಣಿಗೆ ಕಾಣುತ್ತಿಲ್ಲ. ಇಲ್ಲಿನ ಶಾಸಕರಿಗೆ ಕನಿಷ್ಠ ಗೌರವವೂ ಸಿಗುತ್ತಿಲ್ಲ. ಮೊಳಕಾಲ್ಮೂರಿನ ಹಣೆಬರಹ ಎಲ್ಲಿತ್ತೋ, ವರ್ಷಗಳು ಕಳೆದರೂ ಇಂದಿಗೂ ಅಲ್ಲೇ ಇದೆ" ಎಂದು ಅಸಮಾಧಾನ ಹಂಚಿಕೊಂಡಿದ್ದಾರೆ.

ಅನುದಾನಕ್ಕೆ ಮನವಿ, ವಿಡಿಯೋ ವೈರಲ್:
ಕ್ಷೇತ್ರದ ಅಭಿವೃದ್ಧಿಗೆ ಸೂಕ್ತ ಬೆಂಬಲ ಸಿಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ ಅವರು
, "ಆಂಧ್ರಪ್ರದೇಶಕ್ಕೆ ಸೇರಿಸಲು ಸಾಧ್ಯವಾಗದಿದ್ದರೆ ಕನಿಷ್ಠ ಚಳ್ಳಕೆರೆ ಕ್ಷೇತ್ರಕ್ಕಾದರೂ ಸೇರ್ಪಡೆ ಮಾಡಲಿ" ಎಂದು ಹೇಳಿದ್ದಾರೆ. ಇದರ ಬೆನ್ನಲ್ಲೇ, "ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸೋಣ. ಈ ಸಂಬಂಧ ನೂತನ ಸಚಿವರಿಗೂ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದ್ದೇನೆ" ಎಂದು ಸಮಾಧಾನದ ಮಾತುಗಳನ್ನೂ ಆಡಿದ್ದಾರೆ. ಶಾಸಕ ಗೋಪಾಲಕೃಷ್ಣ ಅವರು ಆಡಿದ ಈ ಮಾತುಗಳ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿ ವಿಲಾಸ ಸಾಗರದ ಸನಿಹದಲ್ಲೇ ಒಣಗುತ್ತಿರುವ ಅಡಿಕೆ ತೋಟಗಳು: ರೈತರ ಕಣ್ಣೀರಿಗೆ ಸಿಗುವುದೇ ಸರ್ಕಾರದ ಸ್ಪಂದನೆ?​ ಅರಿವಿನ ಪಯಣದೊಂದಿಗೆ 12 ವರ್ಷಗಳ ಸುದೀರ್ಘ ಸಮಾನತೆಯ ಕರುಣ-ಮೈತ್ರಿ ಹಾದಿಯಲ್ಲಿ ಪಯಣ:ಆರ್‌ಎಸ್ಎಸ್ ಕಾನೂನಾತ್ಮಕ ಅಸ್ತಿತ್ವ ಮತ್ತು ಹೊಣೆಗಾರಿಕೆ ಕುರಿತು ಪ್ರಿಯಾಂಕ್ ಖರ್ಗೆ ಪ್ರಶ್ನೆಸ್ವಾತಂತ್ರ್ಯ ದಿನದ ‘ಸ್ಪೆಷಲ್ ಎಡಿಷನ್’ HMT ವಾಚ್‌ಗಾಗಿ 2 ಕಿ.ಮೀ. ಸಾಲು ನಿಂತ ಬೆಂಗಳೂರಿಗರು!ಮಹಿಳೆ ಜೊತೆ ಅಸಭ್ಯ ವರ್ತನೆ, ಸ್ವಾಮೀಜಿಗೆ ಸ್ಥಳೀಯರಿಂದ ಧರ್ಮದೇಟು"ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ": ಕಾಂಗ್ರೆಸ್ ಶಾಸಕ ಎನ್.ವೈ. ಗೋಪಾಲಕೃಷ್ಣ ವಿವಾದಾತ್ಮಕ ಹೇಳಿಕೆ'ತಿಪಟೂರು ಪ್ರತ್ಯೇಕ ಜಿಲ್ಲೆ' ಬಾವುಟ ಹಾರಿಸಿದ ಶಾಸಕ ಕೆ. ಷಡಕ್ಷರಿನೈಸ್ ಅಕ್ರಮ: ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ ಸೂಕ್ತ ಕ್ರಮ – ಎಚ್‌ಡಿಕೆ ಪತ್ರಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆಅಸಮಾಧಾನಿತ ಶಾಸಕರಿಗೆ ನಿಗಮ-ಮಂಡಳಿ 'ಅಧ್ಯಕ್ಷ' ಪಟ್ಟತುಮಕೂರಿಗೆ ನಮ್ಮ ಮೆಟ್ರೋ ಹಾಗೂ ಎರಡು ಹೊಸ ರೈಲು ಮಾರ್ಗಗಳ ಸೌಲಭ್ಯ: ಡಾ. ಜಿ. ಪರಮೇಶ್ವರ್