Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆವಿಕೆ ಕೇಂದ್ರದಲ್ಲಿ ಸುಧಾರಿತ ಕೃಷಿ ತರಬೇತಿ ಕಾರ್ಯಕ್ರಮ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನ ತೂಬಗೆರೆ ಹೋಬಳಿ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ದಾಳಿಂಬೆ ಬೆಳೆಯ ಸುಧಾರಿತ ಬೇಸಾಯ ಕ್ರಮಗಳ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು.


ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಬಿ.ಜಿ.ಹನುಮಂತರಾಯ ಮಾತನಾಡಿ, ರೈತರು ದಾಳಿಂಬೆ ಕೃಷಿಯನ್ನು ಮಾಡಿ, ಆರ್ಥಿಕವಾಗಿ ಲಾಭಗಳಿಸಬಹುದು. ಆದರೆ, ಇದಕ್ಕೆ ವೈಜ್ಞಾನಿಕವಾಗಿ, ತಜ್ಞರ ಸಲಹೆ ಪಡೆದು ಕೃಷಿ ಮಾಡಿದರೆ ಹೆಚ್ಚು ಲಾಭದಾಯಕ ಎಂದು ಹೇಳಿ, ದಾಳಿಂಬೆ ಕೃಷಿಯ ಪ್ರಾಮುಖ್ಯತೆ, ಪೋಷಕಾಂಶ, ನೀರು ನಿರ್ವಹಣೆ ಹಾಗೂ ಸುಧಾರಿತ ಬೇಸಾಯ ಕ್ರಮಗಳ ಬಗ್ಗೆ ತಿಳಿಸಿಕೊಟ್ಟರು.

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಅಖಿಲ ಭಾರತ ಸುಸಂಘಟಿತ ಸಂಶೋಧನಾ ಪ್ರಾಯೋಜನೆ ಪ್ರಧಾನ ಸಂಶೋಧಕ ಡಾ.ಕೆ.ಟಿ.ವಿಜಯ ಕುಮಾರ್, ದಾಳಿಂಬೆ ಬೆಳೆಯಲ್ಲಿ ಜೇನು ನೊಣಗಳ ಪ್ರಾಮುಖ್ಯತೆ ಹೆಚ್ಚು. ನಾಲ್ಕು ತುಡುವೆ ಜೇನು ಕುಟುಂಬಗಳನ್ನು 2.5 ಎಕರೆ ಪ್ರದೇಶಕ್ಕೆ ಹೂ ಬಿಡುವ ಸಮಯದಲ್ಲಿ ಸಾಕಣೆ ಮಾಡುವುದರಿಂದ ದಾಳಿಂಬೆ ಹಣ್ಣುಗಳ ಇಳುವರಿ ಶೇ.20 ರಿಂದ 30ರಷ್ಟು ಹೆಚ್ಚಾಗುತ್ತದೆ ಎಂದು ತಿಳಿಸಿದರು.

ದಾಳಿಂಬೆ ಬೆಳೆಯ ತಾಂತ್ರಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಸುನೀಲ್ ತಾಮಗಾಳೆ ಅವರು ದಾಳಿಂಬೆಯಲ್ಲಿ ಹೂವು ಮತ್ತು ಕಾಯಿ ಕಚ್ಚುವಿಕೆಯಲ್ಲಿ ಅನುಸರಿಸುವ ನಿರ್ವಹಣಾ ಕ್ರಮಗಳ ಬಗ್ಗೆ ವಿವರಿಸಿದರು.

ಬಾಗಲ ಕೋಟೆಯ ವಿಶ್ವವಿದ್ಯಾನಿಲಯದ ತೋಟಗಾರಿಕಾ ಪ್ರಾಧ್ಯಾಪಕ ಡಾ.ರಾಘವೇಂದ್ರ ಆಚಾರಿ, ದಾಳಿಂಬೆ ಬೆಳೆಯಲ್ಲಿ ಜೇನು ನೊಣಗಳಿಗೆ ಹಾನಿಯಾಗದಂತೆ ಸುರಕ್ಷಿತ ಕೀಟನಾಶಕಗಳನ್ನು ಬಳಕೆ ಮಾಡುವ ಬಗ್ಗೆ ವಿವರಿಸಿದರು.

ಕೃಷ್ಣ ಆಗೋ ಟೆಕ್ ವ್ಯಾಲಿಯ ನೀಲಕಾಂತ್ ವಾಲ್ಕಿ, ದಾಳಿಂಬೆ ಬೆಳೆಯಲ್ಲಿ ಗಿಡಮೂಲಿಕೆ ಸಾರಕಗಳ ಬಳಕೆಯ ಬಗ್ಗೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಅಧ್ಯಾಪಕ ಡಾ.ಜಿ.ಈಶ್ವರಪ್ಪ, ದಾಳಿಂಬೆ ತೋಟದಲ್ಲಿ ಜೇನು ಕುಟುಂಬಗಳ ನಿರ್ವಹಣೆಯ ಬಗ್ಗೆ ವಿವರಿಸಿದರು.

ಪ್ರಗತಿಪರ ರೈತ ಬಿ. ನಂಜುಂಡಗೌಡ, ಡಾ.ಎಂ.ಆ‌ರ್ .ದೇವರಾಜ ದಾಳಿಂಬೆ ಕೃಷಿಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು. ಕೃಷ್ಣವ್ಯಾಲಿ ಆಕ್ರೋಟೆಕ್‌ನ ಓಂಕಾರ್ ಸಾವಂತ್ ಭಾಗವಹಿಸಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ