Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಂದಿಗಳಿಗೆ ಆಫ್ರಿಕನ್ ಹಂದಿ ಜ್ವರ, ನೂರಾರು ಹಂದಿಗಳ ಸಾವು

Advertisement
ಚಂದ್ರವಳ್ಳಿ ನ್ಯೂಸ್, ಚಿಂತಾಮಣಿ:
ಉದ್ಯಮಿಗಳು ಫಾರ್ಮ್ ಗಳಲ್ಲಿ ಸಾಕಾಣಿಕೆ ಮಾಡುತ್ತಿರುವ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿರುವುದು ದೃಢಪಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ 57 ಹಂದಿಗಳನ್ನು ಸಾಯಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೆಬ್ಬರಿ ಗ್ರಾಮದಲ್ಲಿರುವ ಹಂದಿಗಳ ಸಾಕಾಣಿಕೆ ಕೇಂದ್ರದಲ್ಲಿ ಆಫ್ರಿಕನ್ ಜ್ವರ ಇರುವುದು ಬೆಳಕಿಗೆ ಬಂದಿದೆ. ಆಫ್ರಿಕನ್​ ಹಂದಿ ಜ್ವರ ದೃಢ: ಹಂದಿ ಫಾರ್ಮ್​ನಲ್ಲಿ ಕಳೆದ ಆಗಸ್ಟ್​ 19ರಿಂದ ಇಲ್ಲಿಯವರೆಗೂ 100 ಹಂದಿಗಳು ಸಾವನ್ನಪ್ಪಿವೆ. ಇದರಿಂದ ಎಚ್ಚೆತ್ತ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದರು.


ಹಂದಿಗಳ ರಕ್ತದ ಸ್ಯಾಂಪಲ್ ಅನ್ನು ಭೋಪಾಲ್​ನ ರಾಷ್ಟ್ರೀಯ ಲ್ಯಾಬ್​ಗೆ ಕಳುಹಿಸಲಾಗಿತ್ತು. ಲ್ಯಾಬ್​ ವರದಿಯಲ್ಲಿ ಆಫ್ರಿಕನ್​ ಹಂದಿ ಜ್ವರ ದೃಢಪಟ್ಟಿದೆ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಫಾರಂನಲ್ಲಿರುವ 57 ಹಂದಿಗಳನ್ನು ಸಾಯಿಸಲು ನಿರ್ಧರಿಸಲಾಗಿದೆ.

ಪಶುಪಾಲನಾ, ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ರಂಗಪ್ಪ ಪ್ರತಿಕ್ರಿಯಿಸಿ, ಫಾರ್ಮ್​ನಲ್ಲಿ ಹಂದಿಗಳು ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ಭೇಟಿ ನೀಡಿ ಪರಿಶೀಲಿಸಲಾಗಿತ್ತು. ಹಂದಿ ಜ್ವರ ದೃಢಪಟ್ಟ ಕಾರಣ ಸದ್ಯ ಫಾರ್ಮ್​ನಿಂದ ಹಂದಿಗಳ ಸಾಗಟವನ್ನು ನಿಷೇಧಿಸಲಾಗಿದೆ. ಆಫ್ರಿಕನ್ ಹಂದಿ ಜ್ವರ ಸಾಂಕ್ರಾಮಿಕ ರೋಗ. ದೇಶೀಯ ಮತ್ತು ಕಾಡು ಹಂದಿಗಳಿಗೆ ಈ ರೋಗ ಹರಡುತ್ತದೆ. ರೋಗಕ್ಕೆ ತುತ್ತಾದ ಹಂದಿಗಳು ಸಾವನ್ನಪ್ಪುತ್ತವೆ.

ಈ ಜ್ವರಕ್ಕೆ ನಿರ್ದಿಷ್ಟ ಔಷಧಿ ಮತ್ತು ಚಿಕಿತ್ಸೆ ಇಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಜ್ವರ ದೃಢಪಟ್ಟ ಸ್ಥಳದಿಂದ ಒಂದು ಕಿ.ಮೀ ವ್ಯಾಪ್ತಿಯಲ್ಲಿನ ಹಂದಿಗಳನ್ನು ಕೊಲ್ಲಲಾಗುತ್ತದೆ. ಸೋಂಕಿತ ಹಂದಿಗಳಿಂದ ಮನುಷ್ಯನಿಗೆ ರೋಗ ಹರಡುವುದಿಲ್ಲ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ ಜೂನ್‌ನಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿತ್ತು. ಇದರಿಂದ ಜಿಲ್ಲೆಯ ಜನ ಆತಂಕಗೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು, ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದರು.

ಇಳಕಲ್​ ತಾಲೂಕಿನ ಗೊರಬಾಳ ಗ್ರಾಮದಲ್ಲಿರುವ ಸಾಕಾಣಿಕೆ ಕೇಂದ್ರದಲ್ಲಿ ರೋಗ ಪತ್ತೆಯಾಗಿತ್ತು. ಅನ್ಯರಾಜ್ಯದಿಂದ ಹಂದಿಗಳನ್ನು ಆಮದು ಮಾಡಿಕೊಂಡಿರುವ ವೇಳೆ ರೋಗ ಬಂದಿರುವ ಶಂಕೆ ವ್ಯಕ್ತವಾಗಿದೆ. ಮೇ 22ಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಹಂದಿಗಳ ರಕ್ತದ ಮಾದರಿಯನ್ನು ಭೋಪಾಲ್​ನ ಲ್ಯಾಬೊರೇಟರಿಗೆ ಕಳುಹಿಸಿ ಪರೀಕ್ಷಿಸಿದ್ದರು ಎಂದು ತಿಳಿಸಿದರು.

ಆಫ್ರಿಕನ್ ಹಂದಿ ಜ್ವರ ಇರುವುದು ಪರೀಕ್ಷಾ ವರದಿಯಲ್ಲಿ ದೃಢಪಟ್ಟಿತ್ತು. ಹೀಗಾಗಿ ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಮೂರು ರ‍್ಯಾಪಿಡ್ ಟೀಮ್​ಗಳನ್ನು ಕಾರ್ಯಾಚರಣೆಗೆ ಇಳಿಸಿದ್ದರು.
0-1 ಕಿ.ಮೀ ವರೆಗೆ ರೋಗ ಪೀಡಿತ ವಲಯ ಹಾಗೂ 1-10 ಕಿ.ಮೀ ವರೆಗೆ ಜಾಗೃತ ವಲಯ ಎಂದು ಘೋಷಿಸಿದ್ದರು. ರೋಗ ಹರಡಿರುವ ಹಂದಿಗಳನ್ನು ಜೀವಂತ ಸಮಾಧಿ ಮಾಡಲಾಗಿತ್ತು ಎನ್ನಲಾಗಿದೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ