Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

(ಅ)ಹಿಂದ ನಿಗಮಗಳ ಅನುದಾನ ಖೋತಾ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
(
ಅ)ಹಿಂದ ನಿಗಮಗಳ ಅನುದಾನ ಖೋತಾ; ಡೋಂಗಿ ಸಮಾಜವಾದಿಗಳ ಸಾಮಾಜಿಕ ನ್ಯಾಯ ಭಾಷಣಕ್ಕೆ ಮಾತ್ರ ಸೀಮಿತ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ನವರೇ, ತಮ್ಮ ಸರ್ಕಾರ ಬಂದಾಗಿನಿಂದ ಕಳೆದ ಎರಡು ವರ್ಷಗಳಲ್ಲಿ ಹಿಂದುಳಿದ ಸಮುದಾಯಗಳಿಗೆ ಮಾಡಿರುವ ದೊಡ್ಡ ಉಪಕಾರದ ಬಗ್ಗೆ ಇಂದಿನ ಪತ್ರಿಕೆಗಳು ಹಾಡಿ ಹೊಗಳಿವೆ ಓದಿಕೊಳ್ಳಿ ಎಂದು ಅವರು ತಾಕೀತು ಮಾಡಿದ್ದಾರೆ.


ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅನುದಾನದಲ್ಲಿ 90 ಕೋಟಿ ಅನುದಾನ ಕಡಿತ, ವಿಶ್ವಕರ್ಮ ನಿಗಮಕ್ಕೆ 12 ಕೋಟಿ ಅನುದಾನ ಕಡಿತ, ಉಪ್ಪಾರ ನಿಗಮಕ್ಕೆ 7 ಕೋಟಿ ಅನುದಾನ ಕಡಿತ, ಅಂಬಿಗರ ಚೌಡಯ್ಯ ನಿಗಮಕ್ಕೆ 16 ಕೋಟಿ ಕಡಿತ, ಸವಿತಾ ಸಮಾಜಕ್ಕೆ 5 ಕೋಟಿ ಅನುದಾನ ಕಡಿತ ಮಾಡುವ ಮೂಲಕ ಹಿಂದುಳಿದ ವರ್ಗಗಳ ನಿಗಮಗಳಿಗೆ ಸಿದ್ದರಾಮಯ್ಯ ದ್ರೋಹ ಎಸಗಿದ್ದಾರೆಂದು ಅಶೋಕ್ ಟೀಕಿಸಿದ್ದಾರೆ.

ಒಂದು ಕಡೆ ಹಿಂದುಳಿದ ವರ್ಗಗಳ ವಿವಿಧ ಅಭಿವೃದ್ಧಿ ನಿಗಮಗಳಿಗೆ ನೂರಾರು ಕೋಟಿ ಅನುದಾನ ಕಡಿತ ಮಾಡಿದ್ದೀರಿ, ಮತ್ತೊಂದು ಕಡೆ ಮೀಸಲಿಟ್ಟಿರುವ ಹಣವನ್ನು ಸರಿಯಾಗಿ ಖರ್ಚು ಮಾಡಿಲ್ಲ. ಇದೇನಾ ಸ್ವಾಮಿ ನಿಮ್ಮ ಸಾಮಾಜಿಕ ನ್ಯಾಯ? ನಾಚಿಕೆಯಾಗಬೇಕು ನಿಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ.

ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ವಿನಿಯೋಗವಾಗಬೇಕಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಹಣವನ್ನ ಲಪಟಾಯಿಸಿದ್ದಾಯ್ತು. SCSP/TSP ಹಣದಲ್ಲಿ ಪ್ರತಿ ವರ್ಷ ಬರೋಬ್ಬರಿ 15,000 ಕೋಟಿ ರೂಪಾಯಿ ಹಣವನ್ನ ಬೇರೆಡೆ ವರ್ಗಾಯಿಸಿ ದುರ್ಬಳಕೆ ಮಾಡಿದ್ದಾಯ್ತು. ಈಗ ಹಿಂದುಳಿದ ಸಮುದಾಯಗಳ ಅಭಿವೃದ್ಧಿ ನಿಗಮಗಳ ಕಥೆ ನೋಡಿದರೆ ಪ್ರತಿ ವರ್ಷ ನೂರಾರು ಕೋಟಿ ಅನುದಾನ ಕಡಿತವಾಗಿದೆ.

ಸಿಎಂ ಸಿದ್ದರಾಮಯ್ಯ ನವರೇ, ತಾವು ಮತ್ತು ತಮ್ಮ ಪಟಾಲಂ ಇನ್ನು ಮುಂದೆ ಎಂದಿಗೂ ಸಾಮಾಜಿಕ ನ್ಯಾಯದ ಬಗ್ಗೆ ಬುರುಡೆ ಭಾಷಣ ಮಾಡಿ ಬುದ್ಧ, ಬಸವ, ಅಂಬೇಡ್ಕರರಿಗೆ ಅವಮಾನ ಮಾಡಬೇಡಿ. ದಲಿತರು, ಹಿಂದುಳಿದ ವರ್ಗಗಳ ಜನರನ್ನು ವೋಟ್ ಬ್ಯಾಂಕ್ ಮಾಡಿಕೊಂಡು ಮೋಸ ಮಾಡಬೇಡಿ ಎಂದು ಅಶೋಕ್ ತಾಕೀತು ಮಾಡಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ