Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏರ್ ಇಂಡಿಯಾ ವಿಮಾನ ಅಪಘಾತದ ಸಾವಿನ ಸಂಖ್ಯೆ 265

Advertisement
ಚಂದ್ರವಳ್ಳಿ ನ್ಯೂಸ್, ಅಹಮದಾಬಾದ್‌:
ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ AI 171 ವಿಮಾನ ಅಪಘಾತದ ಸ್ಥಳಕ್ಕೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಮಾನ ಪತನದಲ್ಲಿ ಒಟ್ಟು 265 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮೋದಿ ಅವರು ಇಲ್ಲಿನ ನಾಗರಿಕ ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಮೋದಿ ಅವರ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ನಂತರ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿದೆ. ವಿಮಾನ ದುರಂತದಿಂದ ನಾವೆಲ್ಲರೂ ತೀವ್ರ ಆಘಾತಗೊಂಡಿದ್ದೇವೆ. ಇಷ್ಟೊಂದು ಹಠಾತ್ ಮತ್ತು ಹೃದಯವಿದ್ರಾವಕ ರೀತಿಯಲ್ಲಿ ಹಲವಾರು ಜೀವಗಳನ್ನು ಕಳೆದುಕೊಂಡಿರುವುದು ಪದಗಳಿಗೆ ನಿಲುಕದಷ್ಟು ದೊಡ್ಡ ದುರಂತ. ಎಲ್ಲಾ ದುಃಖಿತ ಕುಟುಂಬಗಳಿಗೆ ಸಂತಾಪಗಳು ಎಂದು ಮೋದಿ ಅವರು ಬರೆದುಕೊಂಡಿದ್ದಾರೆ.
ವಿಮಾನ ಅಪಘಾತದಲ್ಲಿ ತಮ್ಮವರನ್ನು ಕಳೆದುಕೊಂಡವರ ನೋವು ನಮಗೆ ಅರ್ಥವಾಗುತ್ತದೆ. ವರ್ಷಗಳವರೆಗೆ ಈ ಆಘಾತ ನಮ್ಮನ್ನು ಕಾಡಲಿದೆ ಎಂದಿದ್ದಾರೆ.


ಗುರುವಾರ ಮಧ್ಯಾಹ್ನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಮೇಘನಿನಗರ ಪ್ರದೇಶದ ಬಿಜೆ ವೈದ್ಯಕೀಯ ಕಾಲೇಜಿನ ಸಂಕೀರ್ಣಕ್ಕೆ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನ (AI171) ಅಪ್ಪಳಿಸಿದ ಸ್ಥಳದಲ್ಲಿ  ಪ್ರಧಾನಿ ಸುಮಾರು 20 ನಿಮಿಷಗಳ ಕಾಲ ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಮತ್ತು ಗುಜರಾತ್ ಗೃಹ ಸಚಿವ ಹರ್ಷ ಸಾಂಘವಿ ಅವರು ವಿಮಾನ ಕಾಲೇಜು ಹಾಸ್ಟೆಲ್ ಹೇಗೆ ಅಪ್ಪಳಿಸಿತು ಎಂಬುದರ ಬಗ್ಗೆ ಮೋದಿಗೆ ವಿವರಿಸಿದರು.

ನಂತರ ಪ್ರಧಾನಿಯವರು ನಗರದ ಸಿವಿಲ್ ಆಸ್ಪತ್ರೆಗೆ ತೆರಳಿ ಅಪಘಾತದಲ್ಲಿ ಗಾಯಗೊಂಡವರನ್ನು ಭೇಟಿಯಾದರು. ಅಪಘಾತದಲ್ಲಿ ಪವಾಡ ಸದೃಶವಾಗಿ ಬದುಕುಳಿದ ಏಕೈಕ ಪ್ರಯಾಣಿಕ ವಿಶ್ವಶ್‌ ಕುಮಾರ್ ರಮೇಶ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.


ಅಲ್ಲದೆ 25 ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಯ ಸಿ7 ವಾರ್ಡ್‌ಗೆ ಅವರು ಭೇಟಿ ನೀಡಿ ವೈದ್ಯರೊಂದಿಗೆ ಸಂವಾದ ನಡೆಸಿದರು. ಮೋದಿ ಅವರು ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಗುಜ್‌ಸೈಲ್ ಕಚೇರಿಯಲ್ಲಿ ರಾಜ್ಯ ಮತ್ತು ನಾಗರಿಕ ವಿಮಾನಯಾನ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಪೊಲೀಸ್ ಉಪ ಆಯುಕ್ತ ಕಾನನ್ ದೇಸಾಯಿ ಅವರು ಅಪಘಾತದ ಸ್ಥಳವನ್ನು ತೆರವುಗೊಳಿಸುವ ಕಾರ್ಯಾಚರಣೆ ರಾತ್ರಿಯಿಡೀ ಮುಂದುವರೆದಿದ್ದು, ಕೆಲವು ಅವಶೇಷಗಳನ್ನು ಇನ್ನೂ ತೆಗೆದುಹಾಕಬೇಕಾಗಿದೆ ಎಂದು ಹೇಳಿದರು. ಶವಗಳು ಗುರುತಿಸಲಾಗದಷ್ಟು ಸುಟ್ಟುಹೋಗಿವೆ ಎಂದು ಅವರು ತಿಳಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ