Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ಷರ, ಅನ್ನ, ಆರೋಗ್ಯ ಇವುಗಳು ಸೇವೆಗಾಗಿ ಹುಟ್ಟಿಕೊಂಡಿವೆ-ಕರಿಯಪ್ಪ ಮಾಳಿಗೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ವಾಹನ ಚಾಲನೆ ಮಾಡುವಾಗ ಎಚ್ಚರ ತಪ್ಪಿದರೆ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುವುದುಂಟು. ಅರಿವಿನ ಆಂದೋಲನವಾಗಬೇಕೆಂದು ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಡಾ.ಜೆ.ಕರಿಯಪ್ಪ ಮಾಳಿಗೆ ತಿಳಿಸಿದರು.


ಕಾರ್ಮಿಕ ಸಚಿವ ಸಂತೋಷ್‌ಲಾಡ್‌ರವರ ಹುಟ್ಟುಹಬ್ಬದ ಅಂಗವಾಗಿ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ವತಿಯಿಂದ ಪತ್ರಕರ್ತರ ಭವನದಲ್ಲಿ ಶುಕ್ರವಾರ ನಡೆದ ಆಪತ್ ರಕ್ಷಕ ದಿನಾಚರಣೆ ಹಾಗೂ ಸಾಧಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಒತ್ತಡದಲ್ಲಿ ಎಲ್ಲರೂ ಬದುಕುತ್ತಿರುವುದರಿಂದ ಜೀವನಕ್ಕೆ ಬೇಕಾದ ಅಂಶಗಳನ್ನು ಮರೆಯುತ್ತಿದ್ದಾರೆ. ಅಕ್ಷರ, ಅನ್ನ, ಆರೋಗ್ಯ ಇವುಗಳು ಸೇವೆಗಾಗಿ ಹುಟ್ಟಿಕೊಂಡಿವೆ. ೨೧ ನೇ ಶತಮಾನ ಬದಲಾಗಿರುವುದರಿಂದ ಮನುಷ್ಯನ ಜೀವನ ಶೈಲಿಯು ಬದಲಾವಣೆಗೆ ತಕ್ಕಂತೆ ಹೊಂದಿಕೊಂಡಿದೆ. ಅರಿವಿನ ಕೊರತೆಯಿರುವುದರಿಂದ ಅಪಘಾತಗಳು ದಿನನಿತ್ಯವೂ ಸಂಭವಿಸುತ್ತಿವೆ. ಕಾರ್ಮಿಕ ಸಚಿವ ಸಂತೋಷ್‌ಲಾಡ್‌ರವರು ಸಂಕಷ್ಟದಲ್ಲಿರುವವರ ನೆರವಿಗೆ ಸದಾ ಮುಂದಿರುತ್ತಾರೆ. ಅವಸರದ ವೇಗ ಮುಖ್ಯವಲ್ಲವೆಂದು ಎಲ್ಲರೂ ಆತ್ಮಾವಲೋಕನ ಮಾಡಿಕೊಂಡಾಗ ಆರೋಗ್ಯ ಪೂರ್ಣ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಹೇಳಿದರು.

ಡಾ.ಸೌಮ್ಯ ಸಂದೀಪ್ ಮಾತನಾಡಿ ಸಂತೋಷ್‌ಲಾಡ್‌ರವರ ಹುಟ್ಟುಹಬ್ಬವನ್ನು ಸಂಜೀವಿನಿ ಜೀವ ರಕ್ಷಕ ಟ್ರಸ್ಟ್‌ನವರು ಆಪತ್ ರಕ್ಷಕ್ ದಿನಾಚರಣೆಯನ್ನಾಗಿ ಆಚರಿಸುತ್ತಿರುವುದು ಸಂತೋಷದ ಸಂಗತಿ. ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರಿಕೆಯಿಂದಿರಬೇಕು. ಬೇರೆಯವರಿಗೆ ಸಮಯ ಮೀಸಲಿಡುವವರು ತುಂಬಾ ವಿರಳವಾಗಿರುವ ಇಂದಿನ ಕಾಲದಲ್ಲಿ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್‌ನವರು ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆಯುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಹಿಳಾ ಸಮಾಜದ ಉಪಾಧ್ಯಕ್ಷೆ ಮೋಕ್ಷರುದ್ರಸ್ವಾಮಿ ಮಾತನಾಡುತ್ತ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್‌ನವರ ಸೇವೆ ಚಿತ್ರದುರ್ಗ ಜಿಲ್ಲೆಗೆ ಅತ್ಯವಶ್ಯಕ. ಅಪಘಾತಕ್ಕೀಡಾಗಿ ಅನಾಹುತಗಳು ಸಂಭವಿಸಿದಾಗ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್‌ನವರು ಕೂಡಲೆ ಸ್ಥಳಕ್ಕೆ ಹೋಗಿ ಗಾಯಗೊಂಡವರನ್ನು ಸಕಾಲಕ್ಕೆ ಆಸ್ಪತ್ರೆಗೆ ಸೇರಿಸಿ ಅಮೂಲ್ಯವಾದ ಜೀವ ಉಳಿಸುವ ಕೆಲಸ ಮಾಡುತ್ತಿರುವುದು ನಿಜಕ್ಕೂ ಮೆಚ್ಚುವಂತದ್ದು, ರಸ್ತೆಯಲ್ಲಿ ತಗ್ಗು, ಗುಂಡಿಗಳಿರುವುದು ಕೂಡ ಅಪಘಾತಕ್ಕೆ ಕಾರಣವಾಗಬಹುದು. ಎಲ್ಲಿ ಕಳಪೆ ಕಾಮಗಾರಿಯಾಗುತ್ತದೋ ಅಲ್ಲಿ ಪ್ರತಿಭಟಿಸುವ ಧೈರ್ಯವನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂಆಲಿ ಮಾತನಾಡಿ ಯಾವುದೇ ಒಂದು ಟ್ರಸ್ಟ್‌ನ ಹಿಂದೆ ಅಪಾರವಾದ ಪರಿಶ್ರಮವಿರುತ್ತದೆ. ಹೆದ್ದಾರಿಗಳು ಸೇರಿದಂತೆ ಎಲ್ಲಿಯೇ ಅಪಘಾತಗಳಾದಾಗ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್‌ನವರ ಸೇವೆಯಿರುತ್ತದೆ. ರಕ್ತದಾನದಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವವರ ಪ್ರಾಣ ಉಳಿಸಬಹುದು. ಸಾರ್ವಜನಿಕರು ಟ್ರಸ್ಟ್‌ನ ಜೊತೆ ಕೈಜೋಡಿಸುವಂತೆ ವಿನಂತಿಸಿದರು.

ಸಂಜೀವಿನಿ ಜೀವ ರಕ್ಷಕ ಟ್ರಸ್ಟ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಸೌಮ್ಯ ಮಂಜುನಾಥಸ್ವಾಮಿ ಮಾತನಾಡಿ ಸಮಾಜ ಸೇವೆಯಲ್ಲಿ ತೊಡಗಿರುವವರನ್ನು ಗುರುತಿಸಿ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸನ್ಮಾನಿಸಿ ಬೆನ್ನು ತಟ್ಟುವ ಕೆಲಸ ಮಾಡುತ್ತಿದೆ. ಕಷ್ಟದಲ್ಲಿರುವವರ ನೆರವಿಗೆ ಧಾವಿಸುವ ಸಚಿವ ಸಂತೋಷ್‌ಲಾಡ್‌ರವರ ಮಾನವೀಯ ಗುಣ ಅನನ್ಯವಾದುದು. ಅವರ ಹುಟ್ಟಹಬ್ಬವನ್ನು ರಾಜ್ಯದ ೨೦ ಜಿಲ್ಲೆಗಳಲ್ಲಿ ಆಪತ್ ರಕ್ಷಕ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಸಂಘಟನೆ ಒಬ್ಬರಿಂದ ಆಗುವುದಲ್ಲ. ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.

ದೃಶ್ಯ ಮಾಧ್ಯಮ ವರದಿಗಾರ ಸಿದ್ದರಾಜು ಮಾತನಾಡುತ್ತ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್‌ನವರು ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಪಘಾತಗಳಾದಾಗ ಅಮೂಲ್ಯವಾದ ಜೀವ ಉಳಿಸುವ ನಿಟ್ಟಿನಲ್ಲಿ ಇವರ ಸೇವೆ ದೊಡ್ಡದು. ರಸ್ತೆಯಲ್ಲಿ ವಾಹನಗಳನ್ನು ಅತಿ ಜಾಗರೂಕವಾಗಿ ಚಾಲನೆ ಮಾಡುವುದರಿಂದ ಅಪಘಾತಗಳನ್ನು ಕಡಿಮೆ ಮಾಡಬಹುದು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಅಪಘಾತಗಳಿಂದಾಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸುವಂತೆ ತಿಳಿಸಿದರು.

ಸಂಜೀವಿನಿ ಜೀವ ರಕ್ಷಕ ಟ್ರಸ್ಟ್‌ನ ರಾಜ್ಯಾಧ್ಯಕ್ಷ ಡಿ.ರಂಗಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ ರಾಜ್ಯದ ೨೦ ಜಿಲ್ಲೆಗಳಲ್ಲಿ ಆಪತ್ ರಕ್ಷಕ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ತುರ್ತು ಪರಿಸ್ಥಿತಿ, ಕಷ್ಟದಲ್ಲಿರುವವರ ಜೀವ ಉಳಿಸುವಲ್ಲಿ ಸಚಿವ ಸಂತೋಷ್‌ಲಾಡ್‌ರವರು ನೆರವಿಗೆ ನಿಲ್ಲುತ್ತಾರೆ. ಸಂಜೀವಿನಿ ಜೀವ ರಕ್ಷಕ ಟ್ರಸ್ಟ್‌ಗೆ ಅವರೆ ಬೆನ್ನುಲುಬು ಎಂದು ಹೇಳಿದರು.

ಅಹೋಬಲ ಟಿ.ವಿ.ಎಸ್.ಶೋರೂಂನ ಅರುಣ್‌ಕುಮಾರ್ ವೇದಿಕೆಯಲ್ಲಿದ್ದರು. ವಿವಿಧ ರಂಗಗಳಲ್ಲಿ ಸಾಧನೆಗೈದಿರುವ ೨೫ ಮಂದಿಯನ್ನು ಸನ್ಮಾನಿಸಲಾಯಿತು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ