Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದೂ ಸಮಾಜೋತ್ಸವ : ಬೃಹತ್ ಶೋಭಯಾತ್ರೆಗೆ ಸಕಲ ಸಿದ್ಧತೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ  :
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಖ
SS) ಶತಮಾನೋತ್ಸವ ಅಂಗವಾಗಿ ತಾಲ್ಲೂಕಿನ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಹಾಗೂ ಇತರೆ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜ.೨೮ ಮತ್ತು ಜ. ೨೯ ತಾರೀಕಿನಂದು ಹಿಂದೂ ಸಮಾಜ್ಯೋತ್ಸವ   ಆಯೋಜನೆ ಮಾಡಲಾಗಿದೆ ಎಂದು ಹಿಂದೂ ಸಂಘಟನೆಯ ಮುಖಂಡರಾದ ಮುನಿರಾಮೆ ಗೌಡ ತಿಳಿಸಿದರು.

ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹಂಪಿ ಹೇಮಕೂಟ ಗಾಯತ್ರಿ ಪೀಠ ಮಹಾಸಂಸ್ಥಾನ ಮತ್ತು ದೇವಾಂಗ ಜಗದ್ಗುರು ಶ್ರೀ ಶ್ರೀ ದಯಾನಂದಪುರಿ ಮಹಾಸ್ವಾಮೀಜಿ , ತಪಸೀಹಳ್ಳಿಪುಷ್ಪಾಂಡಜ ಮಹರ್ಷಿ ಆಶ್ರಮದಶ್ರೀ ದಿವ್ಯ ಜ್ಞಾನಾನಂದಗಿರಿ ಸ್ವಾಮೀಜಿ ವಹಿಸಲಿದ್ದಾರೆ. ವೇದಿಕೆಯಲ್ಲಿ ದಿಕ್ಕೂಚಿ ಭಾಷಣ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್  ಮಂಗೇಶ್ ಬೇಂಡೆ  ಮಾಡಲಿದ್ದಾರೆ.  ಹಿಂದೂ ಸಮಾಜೋತ್ಸವ ಕಾರ್ಯಕ್ರಮವು  ಕೇವಲ ಒಂದು ಧಾರ್ಮಿಕ ಉತ್ಸವವಲ್ಲ. ಸಮಾಜದ ಏಕತೆ, ಸಂಸ್ಕೃತಿ ಉಳಿವು ಮತ್ತು ಧಾರ್ಮಿಕ ಜಾಗೃತಿಯ ಪ್ರತೀಕವಾಗಿದೆ. ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವೀಗೊಳಿಸಬೇಕೆಂದು ಮನವಿ ಮಾಡಿದರು.

ಹಿಂದೂ ಸಮಾಜ್ಯೋತ್ಸವ ಸಮಿತಿ ಅಧ್ಯಕ್ಷರಾದ ಮುನಿರಾಮೇಗೌಡ ಮಾತನಾಡಿ ಗುರುವಾರ  (ಜ.೨೯)ಬೆಳಿಗ್ಗೆ ೮:೦೦ ಕ್ಕೆ ತಾಲ್ಲೂಕಿನ ಎಲ್ಲಾ ಶಕ್ತಿ ದೇವತೆಗಳ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದ್ದು ನಂತರ ಸುದರ್ಶನ ಹೋಮ, ಎಲ್ಲಾ ಭಜನಾ ಮಂಡಳಿಗಳಿಂದ "ಭಕ್ತಿ ಪಾರಾಯಣ"  ನಡೆಯಲಿದೆ ಎಂದರು.

ಜ. ೨೮ ರಂದು ಸಂಜೆ ೪.೦೦ಕ್ಕೆ ಬೈಕ್ ರ್ಯಾಲಿ-
 ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಿಂದ ಡಿ.ಕ್ರಾಸ್, ಎಲ್.ಐ.ಸಿ. ರಸ್ತೆ, ಗಾಂಧಿ ಸರ್ಕಲ್ ಸೌಂದರ್ಯಮಹಲ್ ಸರ್ಕಲ್, ಬಸ್ ಸ್ಟ್ಯಾಂಡ್, ಲಕ್ಷ್ಮೀ ಟಾಕೀಸ್, ಶ್ರೀಕಂಠೇಶ್ವರ ದೇವಸ್ಥಾನ, ಅರಳುಮಲ್ಲಿಗೆ ಸರ್ಕಲ್, ಕೆ.ಸಿ.ಪಿ. ಸರ್ಕಲ್, ಕೊಂಗಾಡಿಯಪ್ಪ ಕಾಲೇಜು ರಸ್ತೆ, ಮುಗವಾಳಪ್ಪ ಸರ್ಕಲ್.ತಾಲ್ಲೂಕು ಆಫೀಸ್ ಸರ್ಕಲ್ ನಂತರ ಭಗತ್‌ಸಿಂಗ್ ಕ್ರೀಡಾಂಗಣ ತಲುಪುವುದು.


ಜ. ೨೯ಕ್ಕೆ ಬೃಹತ್ ಶ್ರೀ ರಾಮ ಶೋಭಾಯಾತ್ರೆ
ಮಧ್ಯಾಹ್ನ ೨:೩೦ಕ್ಕೆ ನಗರದ ನೆಲದಾಂಜನೇಯ ದೇವಾಲಯದಿಂದ ಭಗತ್ ಸಿಂಗ್ ಕ್ರೀಡಾಂಗಣದವರೆಗೂ ಬೃಹತ್ ಶ್ರೀ ರಾಮ ಶೋಭಾಯಾತ್ರೆ ನಡೆಯಲಿದ್ದು ಎಲ್ಲಾ ಹಿಂದೂ ಭಾಂದವರು ಭಾಗವಹಿಸಬೇಕೆಂದು ಹಿಂದೂ ಮುಖಂಡರು ವಿನಂತಿಸಿದರು.


ವಿಶಾಲ ಜನಜಾಗೃತಿ ಸಭೆಯ ಮೂಲಕ ಹಿಂದೂಗಳೆಲ್ಲ ನಾವು ಸೋದರರೆಂಬ ಭಾವನೆಯನ್ನುಅಭಿವ್ಯಕ್ತಿಗೊಳಿಸಬಹುದಾಗಿದೆ.ಈ ಹಿಂದೂ ಸಮ್ಮೇಳನದಲ್ಲಿ  ಸಾವಿರ ಸಾವಿರಾರು  ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದ್ದು.ಹಿಂದೂ ಶಕ್ತಿಯ ಅರಿವು ಮೂಡಿಸಲು ಒಟ್ಟಾಗಿ ಸೇರಿ ಬೆಂಬಲಿಸಬೇಕೆಂದು ಮನವಿ ಮಾಡಿದರು.

ಈ ವೇಳೆ ಹಿಂದೂ ಸಮಾಜ್ಯೋತ್ಸವ ಸಮಿತಿಯ ಪ್ರಮುಖರಾದ  ಕೆ. ಎಂ. ಹನುಮಂತರಾಯಪ್ಪ, ಜೋ. ನಾ. ಮಲ್ಲಿಕಾರ್ಜುನ್, ಬಿ. ಜಿ. ಶ್ರೀನಿವಾಸ್, ರವಿಕುಮಾರ್ ಮಹಿಳಾ ಮುಖಂಡರಾದ ವತ್ಸಲ, ದಾಕ್ಷಾಯಿಣಿ, ವಾಣಿ, ಅಂಬಿಕಾ, ಉಮಾ ಮಹೇಶ್ವರಿ, ಮಂಜುಳಾ, ಯಶೋದಾ ಸೇರಿದಂತೆ ಹಲವರು ಹಾಜರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ