Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಮುಖ್ಯ ಧ್ಯೇಯ-ಸಿಎಂ ಡಿಕೆಶಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಮುಖ್ಯ ಧ್ಯೇಯವಾಗಿದ್ದು, ಆ ನಿಟ್ಟಿನಲ್ಲಿ ಹೊಸ ವೇಗ ನೀಡುವ ಸಂಕಲ್ಪದೊಂದಿಗೆ ಮೊದಲ ಸಚಿವ ಸಂಪುಟ ಸಭೆಯಲ್ಲೇ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

​ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಹೇಳಿರುವ ಅವರು, ಸಂಪುಟ ಸಭೆಯಲ್ಲಿ ಕೈಗೊಂಡಿರುವ ಪ್ರಮುಖ ತೀರ್ಮಾನಗಳ ವಿವರಗಳನ್ನು ಹಂಚಿಕೊಂಡಿದ್ದಾರೆ.

​ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಧಾರಗಳು:
​ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನಾಡಿನ ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಪಾಸ್ ಯೋಜನೆಯನ್ನು ಘೋಷಿಸಲಾಗಿದೆ.

​ಉದ್ಯೋಗ ಸೃಷ್ಟಿ ಮತ್ತು 'ಯುವ ಉದ್ಯೋಗ ಸೇತು': ರಾಜ್ಯದಲ್ಲಿ ಖಾಲಿ ಇರುವ 56,000 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಲಾಗುವುದು ಹಾಗೂ ನಮ್ಮ ಯುವಕರನ್ನು ಜಾಗತಿಕ ಮಟ್ಟದ ಉದ್ಯೋಗ ಮಾರುಕಟ್ಟೆಗೆ ಸಜ್ಜುಗೊಳಿಸಲು 'ಯುವ ಉದ್ಯೋಗ ಸೇತು' ಎಂಬ ವಿಶೇಷ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.

​'ಭಾರತ ಜೋಡೋ ಯುವಕ ಸಂಘ'ಗಳ ಸ್ಥಾಪನೆ: ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶಗಳ ಸಬಲೀಕರಣಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ನಗರ ವಾರ್ಡ್‌ಗಳಲ್ಲಿ ಒಟ್ಟು 10 ಸಾವಿರ 'ಭಾರತ ಜೋಡೋ ಯುವಕ ಸಂಘ'ಗಳನ್ನು ರಚಿಸಲಾಗುವುದು. ಈ ಪ್ರತಿಯೊಂದು ಸಂಘಕ್ಕೂ ತಲಾ 10 ಲಕ್ಷ ರೂ. ಅನುದಾನ ನೀಡಲಾಗುವುದು.

​ಬೆಂಗಳೂರು ವಾಸಿಗಳಿಗೆ ಒಸಿ-ಸಿಸಿ ವಿನಾಯಿತಿ: ಬೆಂಗಳೂರಿನ ವಸತಿ ಕಟ್ಟಡಗಳ ಮಾಲೀಕರಿಗೆ ದೊಡ್ಡ ರಿಲೀಫ್ ನೀಡಲಾಗಿದ್ದು, ಒಸಿ-ಸಿಸಿ ನಿಯಮದಿಂದ ಒಂದು ಬಾರಿಗೆ ಅನ್ವಯವಾಗುವಂತೆ ರಾಜ್ಯದ ಎಲ್ಲ ಭಾಗಗಳಿಗೂ ವಿನಾಯಿತಿ ಘೋಷಿಸಲಾಗಿದೆ.

​'ಬಿ' ಖಾತೆ ಜಮೀನುಗಳು '' ಖಾತೆಗೆ ಪರಿವರ್ತನೆ: ರಾಜ್ಯಾದ್ಯಂತ ಇರುವ 'ಬಿ' ಖಾತೆ ಆಸ್ತಿಗಳನ್ನು '' ಖಾತೆಯಾಗಿ ಪರಿವರ್ತಿಸಲು ಬೃಹತ್ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು.

​ಬೆಂಗಳೂರು ರಸ್ತೆಗಳ ಸುಧಾರಣೆ: ರಾಜಧಾನಿ ಬೆಂಗಳೂರಿನ ರಸ್ತೆಗಳ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಮತ್ತು ಗುಂಡಿ ಮುಕ್ತಗೊಳಿಸಲು 2,000 ಕೋಟಿ ರೂ. ವಿಶೇಷ ಅನುದಾನವನ್ನು ಮಂಜೂರು ಮಾಡಲಾಗಿದೆ.

​"ಜನರಿಗೆ ಕೊಟ್ಟ ಮಾತಿನಂತೆ ಸಾರ್ವತ್ರಿಕ ಪ್ರಗತಿ ಹಾಗೂ ಯುವ ಸಬಲೀಕರಣಕ್ಕೆ ನಮ್ಮ ಸರ್ಕಾರ ಮೊದಲ ಆದ್ಯತೆ ನೀಡಿದೆ. ಈ ಎಲ್ಲಾ ನಿರ್ಧಾರಗಳು ರಾಜ್ಯದ ಅಭಿವೃದ್ಧಿಗೆ ಹೊಸ ದಿಕ್ಸೂಚಿಯಾಗಲಿವೆ."
ಡಿ.ಕೆ. ಶಿವಕುಮಾರ್.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮದ್ದೂ ಒಂದು ಯುಗವಿತ್ತು; ಆರು ವರ್ಷದ ನಂತರ ನಾವು ಸ್ವತಃ ಶಾಲೆಗೆ ಹೋಗುತ್ತಿದ್ದೆವು ಬಸ್ಸಿನಲ್ಲಿ ಬಿಡಿಸುವ ಪದ್ಧತಿ ಇರಲಿಲ್ಲ.ಟೆಕ್ಸಾಸ್‌ನಲ್ಲಿ ಭಾರತದ ರಾಷ್ಟ್ರಧ್ವಜಕ್ಕೆ ಅಪಚಾರ: ವಿಶ್ವದಾದ್ಯಂತ ಭಾರತೀಯರ ತೀವ್ರ ಆಕ್ರೋಶಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿ.ಕೆ. ಶಿವಕುಮಾರ್: ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್!ಕಾರ್ಮಿಕರ ಪರ ಹೈಕೋರ್ಟ್ ಮಹತ್ವದ ತೀರ್ಪು: ವಜಾಗೊಂಡಿದ್ದ 84 ಮಂದಿಗೆ ತಲಾ 3 ಲಕ್ಷ ಪರಿಹಾರ ನೀಡಲು ಆದೇಶ!ಆಡಳಿತ ಸುಧಾರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಮಾಸ್ಟರ್ ಪ್ಲಾನ್: ಎರಡು ಹೊಸ ಸಚಿವಾಲಯಗಳ ರಚನೆ, ರೌಡಿ ನಿಗ್ರಹಕ್ಕೆ ವಿಶೇಷ ಸ್ಕ್ವಾಡ್!"ಪಕ್ಷ ಕಟ್ಟುವವರು ನನ್ನೊಂದಿಗೆ ಬನ್ನಿ, ಅಧಿಕಾರ ಬೇಕಾದವರು ಡಿಕೆಶಿ ಜೊತೆ ಹೋಗಿ!": ಬಿ.ಕೆ. ಹರಿಪ್ರಸಾದ್ ಬ್ಯಾಟಿಂಗ್ಸೌರಶಕ್ತಿ ಉತ್ಪಾದನೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿ ವಿಶ್ವದಲ್ಲೇ ೨ನೇ ಸ್ಥಾನಕ್ಕೆ ಜಿಗಿದ ಭಾರತ!ಮತದಾರರ ಪಟ್ಟಿ ಪರಿಷ್ಕರಣೆ, ತಕ್ಷಣದ ಹೆಲ್ಪ್ ಡೆಸ್ಕ್ ಸ್ಥಾಪನೆ; ಸಿಎಂ ಡಿ.ಕೆ.ಶಿ ಕಟ್ಟುನಿಟ್ಟಿನ ಆದೇಶಇಲಾಖೆಗಳಲ್ಲಿ ಬಾಕಿ ಉಳಿದಿರುವ ಕೆಲಸಗಳನ್ನು ಮುಂದಿನ 25 ದಿನಗಳೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು- ಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ಅವರಿಗೆ ಸಿದ್ದಗಂಗಾ ಮಠದ ಸ್ವಾಮೀಜಿ ಆಶೀರ್ವಾದ: ಸಮಾಜಮುಖಿ ಕಾರ್ಯಗಳಿಗೆ ಶ್ಲಾಘನೆ