Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಕೀಲರಿಗೆ ವಸತಿ ನಿವೇಶನ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಭೂಮಿ ಕೊಡಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಕೀಲ ವೃತ್ತಿ ಆರಂಭಿಸುವ ಯುವ ವಕೀಲರು ಟ್ರಯಲ್‌ ಕೋರ್ಟ್‌ನಲ್ಲಿ ವೃತ್ತಿ ಜೀವನ ಆರಂಭಿಸುವುದು ಉತ್ತಮ
, ಏಕೆಂದರೆ ಇಲ್ಲಿ  ಸಿಗುವ ಉತ್ತಮವಾದ ವೃತ್ತಿ ಅನುಭವ ಎಲ್ಲಿಯೂ ಸಿಗಲಾರದು ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಸಲಹೆ ನೀಡಿದರು.

ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಉಪಮುಖ್ಯಮಂತ್ರಿ ಗಳಾದ ಡಿ ಕೆ ಶಿವಕುಮಾರ್ ಅವರೊಂದಿಗೆ ಶನಿವಾರ ನ್ಯಾಯಮಿತ್ರ ಸಹಕಾರಿ ಸಂಘದ ಬೆಳ್ಳಿ ಮಹೋತ್ಸವ ಕಾರ್ಯಕ್ರಮವನ್ನು  ಉದ್ಘಾಟಿಸಿ ಅವರು ಮಾತನಾಡಿದರು. "ಬೆಳ್ಳಿ‌ ಮಹೋತ್ಸವವು ಸ್ಥಿರತೆ, ಬಾಂಧವ್ಯ, ಬದ್ಧತೆ ಮತ್ತು ಸಾಧನೆಯ ಪ್ರತೀಕವಾಗಿದೆ" ಎಂದು ಹೇಳಿದರು.

"ನನ್ನ ವೃತ್ತಿ ಜೀವನ ಆರಂಭ ಆಗಿದ್ದು ವಕೀಲರ ಸಹಕಾರಿ ಸಂಘದಲ್ಲಿ. ನನ್ನ ಎಲ್ಲಾ ಸಾಧನೆಯೂ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ನ ಸಹಕಾರಿ ಬ್ಯಾಂಕ್‌ಗೆ ಸಲ್ಲುತ್ತದೆ" ಎಂದರು.


"ವಕೀಲ ವೃತ್ತಿ ಆರಂಭಿಸುವವರಿಗೆ ಟ್ರಯಲ್ ಕೋರ್ಟ್‌ನಲ್ಲಿ ನಿಮ್ಮ ವೃತ್ತಿ ಆರಂಭಿಸಿ ಎಂದು ನಾನು ಸಲಹೆ ನೀಡುತ್ತೇನೆ. ಏಕೆಂದರೆ ಇಲ್ಲಿ  ಸಿಗುವ ಉತ್ತಮವಾದ ವೃತ್ತಿ ಅನುಭವ ಎಲ್ಲಿಯೂ ಸಿಗಲಾರದು. ವಕೀಲರು ಸಮಾಜ ಬದಲಾಯಿಸುವ ವೈದ್ಯರಿದ್ದಂತೆ. ಸಮಾಜ ಮತ್ತು ದೇಶವನ್ನೇ ಬದಲಾಯಿಸುವ ಶಕ್ತಿ‌ ಮತ್ತು ಸಾಮರ್ಥ್ಯ ವಕೀಲರಿಗೆ ಇದೆ" ಎಂದು ತಾವು ವಕೀರಾಗಲು ಕಾರಣವಾದ ಹಿನ್ನಲೆಯನ್ನು ಹಂಚಿಕೊಂಡರು.

"ವಕೀಲರಿಗಾಗಿ ವಸತಿ ನಿವೇಶನಗಳನ್ನು ದೊಡ್ಡ ಪ್ರಮಾಣದಲ್ಲಿ (ಬಲ್ಕ್) ಮಂಜೂರು ಮಾಡುವಂತೆ ಮತ್ತು ವಕೀಲರಿಗೆ ಒಂದು ಸಮುದಾಯ ಭವನ ನಿರ್ಮಾಣ ಮಾಡಲು ಅಗತ್ಯ ಇರುವ ಭೂಮಿ ನೀಡುವಂತೆ" ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಂ.ಆರ್. ಅರವಿಂದ ಕುಮಾರ್ ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ಗೌರವಾನ್ವಿತ ಅತಿಥಿಗಳಾಗಿ, ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ವಿಶೇಷ ಆಹ್ವಾನಿತರಾಗಿ ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್‌ನ ಅಧ್ಯಕ್ಷ ಎಂ.ಎಸ್. ಶೇಖರಪ್ಪ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಮತ್ತು ಕಾರ್ಯದರ್ಶಿ ಪ್ರವೀಣ್ ಗೌಡ

ಬೆಂಗಳೂರು ವಕೀಲರ ಸಹಕಾರಿ ಸಂಘದ ಅಧ್ಯಕ್ಷ  ನಂಜಪ್ಪ ಕಲ್ಲೇಗೌಡ ಮತ್ತು ವಕೀಲರ ಸಂಘದ ಸಾಹಿತ್ಯ ಒಕ್ಕೂಟದ ಅಧ್ಯಕ್ಷ ಮಂಜುನಾಥ ಬಿ. ಗೌಡ ಅವರು ಉಪಸ್ಥಿತಿತರಿದ್ದರು. ನ್ಯಾಯಮಿತ್ರ ಸಹಕಾರಿ ಸಂಘದ ಅಧ್ಯಕ್ಷ ಎಸ್. ಯತಿರಾಜ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ