ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ (ASSK) ಸಂಘಟನೆಯ ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ಸಂತೋಷ್ ರವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನೆಯ ಸ್ಥಾಪಕ ಅಧ್ಯಕ್ಷ ಸಂದೇಶ್ ರವರು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಮ್ಮ ಸಂಘಟನೆ ಅರುಣ್ ಕುಮಾರ್ ನೇತೃತ್ವದಲ್ಲಿ ಉತ್ತಮ ಸಂಘಟನೆಯಾಗಿ ಹೊರ ಹೊಮ್ಮಿದೆ. ಸಂಘಟನೆಯಲ್ಲಿ ಯುವಕರು ಹೆಚ್ಚಾಗಿ ತೊಡಗಿಸಿಕೊಳ್ಳುವ ದೃಷ್ಟಿಯಿಂದ ಜಿಲ್ಲಾಧ್ಯಕ್ಷ ಬೆಟ್ಟೇನಹಳ್ಳಿ ಮುನಿರಾಜ್ ಹಾಗೂ ತಾಲೂಕು ಅಧ್ಯಕ್ಷರಾದ ಅರುಣ್ ಕುಮಾರ್ ಮಾರ್ಗದರ್ಶನದಲ್ಲಿ ತಾಲೂಕಿನಲ್ಲಿ ಯುವ ಘಟಕ ರಚಣೆಯಾಗಿದ್ದು ಸಾಮಾಜಿಕ ಸೇವೆ ಹಾಗೂ ದಲಿತ ಪ್ರಗತಿ ಚಿಂತನೆಯ ಯುವ ಮುಖಂಡ ಸಂತೋಷ್ ರನ್ನು ತಾಲೂಕು ಯುವ ಘಟಕಕ್ಕೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಯುವ ಘಟಕಕ್ಕೆ ನೂತನವಾಗಿ ಆಯ್ಕೆಯಾದ ಸಂತೋಷ್ ಪತ್ರಿಕೆಯೊಂದಿಗೆ ಮಾತನಾಡಿ ಅಂಬೇಡ್ಕರ್ ಸೇವಾ ಸಮಿತಿ ಸಾಮಾಜಿಕ ಚಿಂತನೆ ಹಾಗೂ ದಲಿತ ಪರ ಸಂಘಟನೆಯಾಗಿದ್ದು ನನ್ನನ್ನು ಯುವ ಘಟಕಕ್ಕೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸಂತಸ ತಂದಿದೆ. ಇದಕ್ಕಾಗಿ ಸಂಸ್ಥಾಪಕ ಅಧ್ಯಕ್ಷ ಸಂದೇಶ್, ಜಿಲ್ಲಾಧ್ಯಕ್ಷ ಬೆಟ್ಟೇನಹಳ್ಳಿ ಮುನಿರಾಜ್ ಹಾಗೂ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ರವರಿಗೆ ಅಭಾರಿಯಾಗಿದ್ದೇನೆ. ಅವರ ಆಶಯದಂತೆ ಮುಂಬರುವ ದಿನಗಳಲ್ಲಿ ಯುವಕರನ್ನು ಸಂಘಟಿಸಿ ತಾಲ್ಲೂಕಿನಲ್ಲಿ ಸಂಘಟನೆಯನ್ನು ಬಲಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಯುವ ಘಟಕಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂತೋಷ್ ರವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಬೆಟ್ಟೇನಹಳ್ಳಿ ಮುನಿರಾಜ್ ಹಾಗೂ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾದ ಅರುಣ್ ಕುಮಾರ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.



