Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಮಾಜಿಕ ಸುಧಾರಣೆಗೆ ಅಂಬೇಡ್ಕರ್ ಪಾತ್ರ ಅಪಾರ-ನರಸಿಂಹಮೂರ್ತಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಪ್ರಪಂಚದಲ್ಲೆ ಅತಿ ದೊಡ್ಡ ಸಂವಿಧಾನ ಹೊಂದಿರುವ ದೇಶ ಭಾರತವಾದರೆ
ಚಿಕ್ಕ ಸಂವಿಧಾನವನ್ನು ಅಮೇರಿಕ ಹೊಂದಿದೆ ಎಂದು ಬೆಂಗಳೂರಿನ ಆದರ್ಶ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಿ.ಎನ್.ನರಸಿಂಹಮೂರ್ತಿ ತಿಳಿಸಿದರು.

 ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದಲ್ಲಿರುವ  ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು  ವತಿಯಿಂದ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

 ಭಾರತದ ಸಂವಿಧಾನ ರೂಪಿಸುವ ಜವಾಬ್ಧಾರಿಯನ್ನು ಹೊತ್ತು ಅಪಾರವಾದ ಶ್ರಮವಹಿಸಿದ ಡಾ.ಬಿ.ಆರ್. ಅಂಬೇಡ್ಕರ್, ಭಾರತದ  ಸಾಮಾಜಿಕ ಸುಧಾರಣೆಗಾಗಿ ನಿರಂತರ ಹೋರಾಟ ನಡೆಸಿದರು. 

ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ ಮಾಡುತ್ತಿದ್ದ ಅಂಬೇಡ್ಕರ್  ಅವರಿಗೆ ಸಮಸಮಾಜ ನಿರ್ಮಾಣ ಮಾಡುವುದು ಮುಖ್ಯ ಗುರಿಯಾಗಿತ್ತು ಎಂದರು.

ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಶಿವಶಂಕರ್ ಮಾತನಾಡಿ, ವಿದ್ಯೆಯ ಮಹತ್ವವ ಅರಿತಿದ್ದ  ಡಾ.ಬಿ.ಅರ್.ಅಂಬೇಡ್ಕರ್ ಅವರುಅನಕ್ಷರತೆ ಮತ್ತು ಅಜ್ಞಾನವನ್ನು ಮುಕ್ತಗೊಳಿಸಲು ಶಿಕ್ಷಣ ಅತಿ ಅಗತ್ಯವೆಂದರು. 

ಶಿಕ್ಷಣದಿಂದ ಮಾತ್ರ ಶೋಷಣೆಗೆ ಒಳಗಾದವರನ್ನು ಸಾಮಾಜಿಕ ಅನ್ಯಾಯದಿಂದ ಮುಕ್ತ ಗೊಳಿಸಲು ಸಾಧ್ಯವಾಗುತ್ತದೆ. ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯ ಪಡೆಯಲು ಜನರಿಗೆ ಶಿಕ್ಷಣ  ಸಹಕಾರಿ ಆಗುತ್ತದೆ ಎಂದು ಅಂಬೇಡ್ಕರ್ ಪ್ರತಿಪಾದಿಸಿದ್ದಾರೆ ಎಂದರು.

ಕನಸವಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಮಂಜುನಾಥ್ ಮಾತನಾಡಿ, ಬುದ್ಧ, ಬಸವಣ್ಣ ಅವರ ಆಶಯದಂತೆ ತಾರತಮ್ಯಗಳಿಂದ ಮುಕ್ತವಾದ ಸಮಾಜ ಸ್ಥಾಪಿಸುವುದು ಡಾ. ಅಂಬೇಡ್ಕರ್  ಅವರ ಗುರಿ ಯಾಗಿತ್ತು. ಸಮಾಜದಲ್ಲಿರುವ ಶೋಷಣೆ, ದಬ್ಬಾಳಿಕೆ ಮತ್ತು ತಾರತಮ್ಯದ ವಿರುದ್ಧ ಹೋರಾಟ ನಿರಂತರವಾಗಿತ್ತು. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರಜಾಪ್ರಭುತ್ವ, ಸಮಾನತೆ ಮತ್ತು ನ್ಯಾಯದ ಪರವಾದ ವಿಚಾರಗಳನ್ನು ಸೇರಿಸಿದರು. ಇದ್ದರಿಂದಾಗಿ ವಿಶ್ವದಲ್ಲಿ ನಮ್ಮ ಭಾರತ ಸಂವಿಧಾನಕ್ಕೆ ವಿಶೇಷ ಗೌರವ, ಘನತೆ, ಕೀರ್ತಿ ದೊರಕಿದೆ ಎಂದರು.

ಇದೇ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಡಾ.ಬಿ.ಆರ್. ಅಂಬೇಡ್ಕರ್ ಓದು  ಕಾರ್ಯಕ್ರಮ ಪ್ರಯುಕ್ತ ನಡೆದ ವಿಶೇಷ ಉಪನ್ಯಾಸವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಪ್ರಬಂಧ, ಅಶು ಭಾಷಣ ಹಾಗೂ ಕವನ ವಾಚನ  ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳ ವಿತರಣೆ ಮಾಡಲಾಯಿತು.

   ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಎನ್.ಮಹೇಶ್, ಹಣಬೆ  ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ಓ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಸಿ.ಅಣ್ಣಯ್ಯ, ಕಲಾವಿದ ದರ್ಗಾ ಜೋಗಿಹಳ್ಳಿ ಮಲ್ಲೇಶ್ ಮುಂತಾದವರು ಭಾಗವಹಿಸಿದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ