LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಡಿ ಸವಾಲುಗಳ ನಡುವೆ ಸೌಹಾರ್ದತೆ, ಸಂಸ್ಕೃತಿ ರಕ್ಷಣೆಗೆ ಚಿಂತಕರ ಕರೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ಗಡಿ ಭಾಗದಲ್ಲಿ ಸವಾಲುಗಳು ನಿರಂತರವಾಗಿದ್ದು
, ಗಡಿನಾಡ ಜನರು ಅತ್ಯಂತ ಸೂಕ್ಷ್ಮತೆಯಿಂದ, ಸಂವೇದನಾಶೀಲರಾಗಿ ಪ್ರೀತಿ, ವಿಶ್ವಾಸ ಹಾಗೂ ಸಹೋದರತೆಯಿಂದ ಬದುಕಿ ಜೀವನವನ್ನು ಸುಂದರಗೊಳಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಘರ್ಷಣೆಗೆ ಅವಕಾಶ ನೀಡಬಾರದು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಸಂಸ್ಕೃತಿ ಚಿಂತಕರಾದ ಸುರೇಶ್ ಎನ್. ಋಗ್ವೇದಿ ತಿಳಿಸಿದರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ರಂಗದೀವಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪುಣಜನೂರು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸವಿನೆನಪಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಗಡಿನಾಡ ಸಾಂಸ್ಕೃತಿಕ ಉತ್ಸವದ ವಿಚಾರ ಸಂಕಿರಣದಲ್ಲಿ 'ಗಡಿ ಪ್ರದೇಶದ ಸವಾಲುಗಳು ಮತ್ತು ಸಾಂಸ್ಕೃತಿಕ ಅನನ್ಯತೆ' ವಿಷಯದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಪ್ರೀತಿ-ವಿಶ್ವಾಸದಿಂದ ಸಮಸ್ಯೆಗಳಿಗೆ ಪರಿಹಾರ:
ತಾಲೂಕು ಕಸಾಪ ಅಧ್ಯಕ್ಷ ಸುರೇಶ್ ಎನ್. ಋಗ್ವೇದಿ ಮಾತನಾಡಿ
, "ಚಾಮರಾಜನಗರ ಜಿಲ್ಲೆಯು ತಮಿಳುನಾಡು ಮತ್ತು ಕೇರಳದ ಸರಹದ್ದಿನಲ್ಲಿದ್ದು, ಇಲ್ಲಿ ಶಿಕ್ಷಣ, ಉದ್ಯೋಗ, ಭೂಮಿ ಹಾಗೂ ಅಭಿವೃದ್ಧಿಯಂತಹ ನಿರಂತರ ಸಮಸ್ಯೆಗಳಿವೆ. ಪರಸ್ಪರ ಸಹಕಾರ, ಪ್ರೀತಿ ಹಾಗೂ ನಂಬಿಕೆಯಿಂದ ಬದುಕಿದಾಗ ಮಾತ್ರ ಸಮಸ್ಯೆಗಳು ಬಗೆಹರಿಯುತ್ತವೆ. ಸಾಂಸ್ಕೃತಿಕ ಭಿನ್ನತೆಯ ನಡುವೆಯೂ ಸಮನ್ವಯತೆ ಕಾಯ್ದುಕೊಂಡು, ಕಲೆ, ಸಾಹಿತ್ಯ, ಸಂಗೀತ, ಜನಪದ ಹಾಗೂ ನೃತ್ಯ ಪರಂಪರೆಯನ್ನು ಉಳಿಸುವ ಮೂಲಕ ಕನ್ನಡಿಗರ ಅಭಿವೃದ್ಧಿಗೆ ಶ್ರಮಿಸುವುದು ನಮ್ಮೆಲ್ಲರ ಕರ್ತವ್ಯ," ಎಂದರು.

ಗಡಿ ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ:
ವಿಚಾರ ಮಂಡನೆ ಮಾಡಿದ ನಂಜನಗೂಡು ಜೆಎಸ್‌ಎಸ್ ಕಾಲೇಜಿನ ಪ್ರಾಚಾರ್ಯ ಹಾಗೂ ಸಾಹಿತಿ ಕೊತ್ತಲವಾಡಿ ಶಿವಕುಮಾರ್
, "ಗಡಿ ಭಾಗದಲ್ಲಿ ಭಾಷೆ, ವೈದ್ಯಕೀಯ, ಶಿಕ್ಷಣ ಮತ್ತು ಸಾಂಸ್ಕೃತಿಕ ಸವಾಲುಗಳಿವೆ. ಸರ್ಕಾರವು ಗಡಿಭಾಗದ ಗ್ರಾಮೀಣ ಜನರಿಗೆ ವಿಶೇಷ ಅರಿವು ಮೂಡಿಸಿ, ಸರಳ ಕಾನೂನುಗಳ ಮೂಲಕ ಅಭಿವೃದ್ಧಿಪಡಿಸಬೇಕು. ಇಂತಹ ಸಾಂಸ್ಕೃತಿಕ ಉತ್ಸವಗಳು ಗಡಿ ಜನರಲ್ಲಿ ಸ್ಪೂರ್ತಿ ತುಂಬಲಿದ್ದು, 'ಕನ್ನಡಿಗರು ನಮ್ಮೊಂದಿಗಿದ್ದಾರೆ' ಎಂಬ ಭಾವನೆ ಮೂಡಿಸುತ್ತವೆ," ಎಂದು ಅಭಿಪ್ರಾಯಪಟ್ಟರು.

ಅರಣ್ಯ ಹಕ್ಕು ಪತ್ರ ನೀಡಿ - ಮಾನವ-ಪ್ರಾಣಿ ಸಂಘರ್ಷ ತಡೆಯಿರಿ:
ಗಡಿ ಭಾಗದ ಹೋರಾಟಗಾರ ಹಾಗೂ ಪರಿಸರವಾದಿ ಪುಣಜನೂರು ದೊರೆಸ್ವಾಮಿ ಮಾತನಾಡಿ
, "ಗಡಿ ಭಾಗದಲ್ಲಿ ಸಾವಿರಾರು ಎಕರೆ ಭೂಮಿ ಅರಣ್ಯ ವ್ಯಾಪ್ತಿಯಲ್ಲಿದ್ದು, ಅಲ್ಲಿನ ನಿವಾಸಿಗಳಿಗೆ ತಕ್ಷಣವೇ ಹಕ್ಕು ಪತ್ರಗಳನ್ನು ನೀಡಿ ನೆಮ್ಮದಿಯ ಬದುಕಿಗೆ ಅನುವು ಮಾಡಿಕೊಡಬೇಕು. ಅರಣ್ಯದಲ್ಲಿ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷವನ್ನು ಕೊನೆಗೊಳಿಸುವ ದಿಕ್ಕಿನಲ್ಲಿ ಎರಡೂ ರಾಜ್ಯಗಳ ಸರ್ಕಾರಗಳು ಚಿಂತಿಸಬೇಕು. ಜನರಿಗೆ ಶಾಶ್ವತ ಹಕ್ಕು ಪತ್ರ ನೀಡಿದಾಗ ಮಾತ್ರ ಇಂತಹ ಸಾಂಸ್ಕೃತಿಕ ಉತ್ಸವಗಳಿಗೆ ನಿಜವಾದ ಅರ್ಥ ಸಿಗುತ್ತದೆ," ಎಂದು ಆಗ್ರಹಿಸಿದರು.

ಈ ಕಾರ್ಯಕ್ರಮದಲ್ಲಿ ರಂಗದೀವಿಗೆ ಸಂಸ್ಥೆಯ ಅಧ್ಯಕ್ಷರಾದ ಕಲೆ ನಟರಾಜು, ರಂಗನಾಥ್ ಹಾಗೂ ರಂಗಭೂಮಿ ಕಲಾವಿದ ಶಿವಶಂಕರ್ ಚಟ್ಟು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜವಳಿ ಉತ್ಪನ್ನ ರಫ್ತುಗೆ ಸರ್ಕಾರ ಉತ್ತೇಜನ:ಆಯುಕ್ತ ಎ.ಬಿ. ಬಸವರಾಜು ಎಂಪಿಆರ್ ಎಸಿಎಸ್ ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತಕಾಮನ್‌ವೆಲ್ತ್‌ಕ್ರೀಡಾಕೂಟದಲ್ಲಿ ಭಾರತಕ್ಕೆ 39 ಪದಕ: ಕ್ರೀಡಾಪಟುಗಳಿಗೆ ಹಾರ್ದಿಕ ಅಭಿನಂದನೆಕಾವೇರಿ ವಿಚಾರದಲ್ಲಿ ಸರ್ಕಾರದ ವಿಫಲತೆ: ಮಳೆಯಿಂದಷ್ಟೇ ರೈತರಿಗೆ ಆಸರೆ—ವಿಪಕ್ಷ ನಾಯಕ ಆರ್‌‌. ಅಶೋಕ್ ವಾಗ್ದಾಳಿನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ, ವೈಫಲ್ಯ: ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಸಂಪುಟ ವಿಸ್ತರಣೆ ಹೈ ಡ್ರಾಮಾ: ಕೊನೆ ಕ್ಷಣದಲ್ಲಿ ಮಂಕಾಳಗೆ ಕೊಕ್, ಎಸ್.ಎಸ್.ಎಂಗೆ ಒಲಿದ ಸಚಿವ ಸ್ಥಾನ!ಕೈ ಸಂಪುಟ ಪುನಾರಚನೆ ಬಿರುಗಾಳಿ: ಸಿದ್ದರಾಮಯ್ಯ ಆಪ್ತರಾಗಿದ್ದ 12 ಹಿರಿಯ ನಾಯಕರಿಗೆ ಕೊಕ್!ಕಾಂಗ್ರೆಸ್‌ಗೆ ಸಂಪುಟ ವಿಸ್ತರಣೆ ಬಿಸಿ: ಜಯಚಂದ್ರ ಬೆಂಬಲಿಗರು, ಕುಂಚಿಟಿಗ ಸಮಾಜ ಆಕ್ರೋಶ – ರಾಜೀನಾಮೆಗೆ ಜಯಚಂದ್ರ ಸಿದ್ಧ?ಕೈ ಸಂಪುಟ ವಿಸ್ತರಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಾಟೀಲ್ ವೇದಗಳನ್ನು ವ್ಯವಸ್ಥಿತವಾಗಿ ವಿಂಗಡಿಸಿದ ಸನಾತನ ಧರ್ಮದ ಪ್ರಸಾರಕ ವೇದವ್ಯಾಸರು: ಎಚ್ ಲಕ್ಷ್ಮೀದೇವಮ್ಮ