Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಮಕ್ಕಳಿಗಾಗಿ ವಾರ್ಷಿಕ ಬೇಸಿಗೆ ತರಬೇತಿ ಶಿಬಿರ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: 
ಡೆಬೋರಾ ಫೌಂಡೇಶನ್ ಇಂಡಿಯಾ ವಾರ್ಷಿಕ ಬೇಸಿಗೆ ತರಬೇತಿ ಶಿಬಿರವನ್ನು ಗ್ರಾಮೀಣ ಮಕ್ಕಳಿಗಾಗಿ ನಡೆಸುವ ಶಿಕ್ಷಣ ಮತ್ತು ಚಟುವಟಿಕೆ ಕೇಂದ್ರ (EAC) ಮಕ್ಕಳಿಗಾಗಿ ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

  ಕಾರ್ಯಕ್ರಮದಲ್ಲಿ  ಬಾಗವಹಿಸಿದ ಫೌಂಡೇಶನ್‌ಸಂಯೋಜಕ ಥಾಮಸ್ ಲಾರೆನ್ಸ್  ಮಾತನಾಡಿ, 2019 ರಿಂದ ಡೊಡ್ಡಬಳ್ಳಾಪುರ ತಾಲೂಕಿನ 20 ಹಳ್ಳಿಗಳಲ್ಲಿ ಫೌಂಡೇಶನ್ ಮಾಡಿದ ಕೆಲಸಗಳನ್ನು ವಿವರಿಸಿ,

ಆರೋಗ್ಯ ಶಿಬಿರಗಳು, ನಾಯಕರ ಚಟುವಟಿಕೆಗಳು ಮತ್ತು ನಿರುದ್ಯೋಗಿ ಯುವಕರಿಗೆ ಸೀರೆ ಕಟಿಂಗ್, ಬ್ಯೂಟಿಷಿಯನ್, ನೇಕಾರಿಕೆ ಮತ್ತು ಡ್ರೈವಿಂಗ್ ತರಬೇತಿಯಂತಹ ವೃತ್ತಿಪರ ತರಬೇತಿಗಳನ್ನು ಒಳಗೊಂಡ ಕಾರ್ಯಕ್ರಮಗಳನ್ನು ಹಳ್ಳಿಗಳಲ್ಲಿ ಹೆಚ್ಚು ಹೆಚ್ಚು ಮಾಡುತ್ತಾ ಬಂದಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬ್ಲಾಕ್ ಎಜುಕೇಷನ್ ಆಫೀಸರ್ ಸೌ. ಸೈದಾ ಅನಿಸ್ ಮುಜಾವರ್  ಫೌಂಡೇಶನ್‌ನ  ಮಕ್ಕಳ ರಕ್ಷಣೆ ನೀತಿ ದಾಖಲೆ ಮತ್ತು ಪುಸ್ತಕವನ್ನು ಬಿಡುಗಡೆ ಮಾಡಿ, ಫೌಂಡೇಶನ್ ಮಕ್ಕಳ ಸುರಕ್ಷತೆಗಾಗಿ ತೆಗೆದುಕೊಂಡಿರುವ ಕ್ರಮವನ್ನು ಪ್ರಶಂಸಿಸಿ, ವಿದ್ಯಾರ್ಥಿಗಳು ಶಿಕ್ಷಣದ ಅವಕಾಶಗಳನ್ನು ಬಳಸಿಕೊಂಡು ವೈಯಕ್ತಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಉತ್ತೇಜನ ನೀಡಬೇಕೆಂದು ಸಲಹೆ ನೀಡಿದರು.

ಫೌಂಡೇಶನ್‌ನ ವ್ಯವಸ್ಥಾಪಕ ನಿಲಯಾಧಿಕಾರಿ ಥಾಮಸ್ ರಾಜ್ ಕುಮಾರ್ ಮಾತನಾಡಿ, ಮಕ್ಕಳ ರಕ್ಷಣೆ ನೀತಿ ಭಾರತವು ಅಂಗೀಕರಿಸಿದ ಅಂತಾರಾಷ್ಟ್ರೀಯ ಒಪ್ಪಂದಗಳೊಂದಿಗೆ ಹೊಂದಾಣಿಕೆಯಾಗಿರುವುದಾಗಿ ವಿವರಿಸಿದರು ಮತ್ತು ಮಕ್ಕಳ ಹಕ್ಕುಗಳನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯೆಂದು ಎಂದು ಹೇಳಿದರು.

ಈ ಸಂದರ್ಭದಲ್ಲಿ  ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವುಕಾರ್ಯಕ್ರಮದಲ್ಲಿ ಫೌಂಡೇಶನ್ನಿನ ಡಾ.ಪರಮೇಶ್ವರ್, ಸೋಮಶೇಖರ್, ರಾಜಗೋಪಾಲ್ ಇದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ