Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಂಪಿ ಉತ್ಸವದಲ್ಲಿ ಆಕರ್ಷಕ ಶ್ವಾನ ಪ್ರದರ್ಶನ

Advertisement
ಚಂದ್ರವಳ್ಳಿ ನ್ಯೂಸ್, ವಿಜಯನಗರ(ಹೊಸಪೇಟೆ):
ಹಂಪಿ ಉತ್ಸವದ ಕೊನೆ ದಿನವಾದ ಭಾನುವಾರ ಜಿಲ್ಲಾಡಳಿತ
, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಕಮಲಾಪುರದ ಹಂಪಿ ವಿಶ್ವ ಪಾರಂಪರಿಕ ತಾಣ ನಿರ್ವಹಣಾ ಪ್ರಾಧಿಕಾರದ (ಹವಾಮಾ) ಕಚೇರಿ ಹಿಂಭಾಗದಲ್ಲಿ ಹಮ್ಮಿಕೊಂಡಿದ್ದ ಶ್ವಾನಪ್ರದರ್ಶನವು ಜನಾಕರ್ಷಣೀಯವಾಗಿತ್ತು.

ಮೊದಲಿಗೆ ವಿಜಯನಗರ ಜಿಲ್ಲಾ ಪೊಲೀಸ್ ಶ್ವಾನದಳದ (ಲ್ಯಾಬ್ರಡರ್ ತಳಿಯ) ಕರ್ತವ್ಯದ ಕರಾಮತ್ತ್ತು ಪ್ರದರ್ಶಿಸಿದವು. ಅಪರಾಧ ಪ್ರಕರಣಗಳ ಪತ್ತೆ ಮತ್ತು ಬಾಂಬ್ ಪರಿಶೀಲನೆ ಕರ್ತವ್ಯ ನಿರ್ವಹಿಸಿದ ಇವುಗಳ ಚಾಣಾಕ್ಷತೆಯನ್ನು ಕಣ್ತುಂಬಿಕೊAಡ ಜನರು ಜಾಣ್ಮೆಗೆ ಮಾರುಹೋದರು. ತರಬೇತುದಾರರ ಆಜ್ಞೆಯಂತೆ ನಡೆಯುವ ಈ ಶ್ವಾನಗಳು ನಿಂತಲ್ಲೇ ನಿಲ್ಲುವುದು, ಕೂರುವುದು, ಓಡಾಡುವುದು ಕಂಡ ಜನರು ಆಶ್ಚರ್ಯ ಚಕಿತರಾದರು.

21 ಜಾತಿಯ 65 ಶ್ವಾನಗಳು ಭಾಗಿ:
ಈ ಬಾರಿಯ ಹಂಪಿ ಉತ್ಸವದಲ್ಲಿ 21 ವಿವಿಧ ಜಾತಿಯ ದೇಶಿ ಹಾಗೂ ವಿದೇಶಿ ತಳಿಗಳ 65 ಶ್ವಾನಗಳು ತಮ್ಮ ಮಾಲೀಕರೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಅದರಲ್ಲಿ 48 ಶ್ವಾನಗಳು 1 ವರ್ಷದೊಳಗಿನವು (ಅಡಲ್ಟ್ ವರ್ಗ), ಅದೇರೀತಿಯಾಗಿ 17 ಶ್ವಾನ 6 ತಿಂಗಳಿನವು (ಪಪ್ಪಿ ವರ್ಗ) ಇದ್ದವು.

ವಿವಿಧ ಜಾತಿಗೆ ಸೇರಿದ ಶ್ವಾನ:
ಅತಿ ಎತ್ತರ, ದೊಡ್ಡ ಹಾಗೂ ನೀಳ ಕಾಯದ ಗ್ರೇಟ್ ಡೆನ್, ಚಿಕ್ಕದಾದ ಸಿಟ್ಸ್ ಹಾಗೂ ಪಮೋರಿಯನ್, ಬೇಟೆಗೆ ಹೆಸರಾದ ಮುಧೋಳ, ಕುಟುಂಬಕ್ಕೆ ಪ್ರಿಯವಾದ ಗೋಲ್ಡನ್ ರಿಟೈವರ್, ಶೀತ ವಲಯದಲ್ಲಿ ಮಾನವ ಅತ್ಯಂತ ಉಪಯುಕ್ತ ಸಂಗಾತಿ ಎನಿಸಿದ ಸೈಬಿರಿಯನ್ ಹಸ್ಕಿ, ಯುದ್ಧಕ್ಕೆ ಹೆಸರುವಾಸಿಯಾದ ಜರ್ಮನ್ ಶಫರ್ಡ್, ಮಾಲೀಕನಿಗೆ ಅತ್ಯಂತ ನಿಷ್ಠೆಯಿಂದಿರುವ ಡಾಬರ್ ಮನ್, ಭಾರತದಲ್ಲಿ ಜನಪ್ರಿಯ ಹೊಂದಿರುವ ಲ್ಯಾಬ್ರಡಾರ್, ಅಮೇರಿಕಾದ ಬುಲ್ಲಿ, ಬೇಗಲೆ, ಡ್ಯಾಷ್‌ಹಂಡ್, ಪಗ್, ರೊಟ್‌ವೀಲರ್, ಬಾಕ್ಸರ್, ಪೊಮೆರೇನಿಯನ್, ಚೌ ಚೌ, ಶಿಹ್ ತ್ಸು ಬುಲ್ಲಿ, ಕೇನ್ ಕೊರ್ಸೊ, ಕಾಕರ್ ಸ್ಪೈನಿಯಲ್, ಕಾಕರ್, ಗ್ರೇಟ್ ಡೇನ್, ಟಾಯ್ ಪೋಮ್, ಬೆಲ್ಜಿಯನ್ ಮಾಲಿನೋಸಿಸ್ ಸೇರಿ ಅನೇಕ ತಳಿಗಳ ಶ್ವಾನಗಳು ಸ್ಪರ್ಧೆಯ ವಿಶೇಷ ಎನಿಸಿದವು.

ತಳಿಗಳವಾರು ಮೊದಲು ಸ್ಪರ್ಧೆ ನಡೆಸಿ ಶ್ವಾನಗಳನ್ನು ಆಯ್ಕೆ ಮಾಡಲಾಯಿತು. ತಳಿವಾರು ಪ್ರಥಮ ಸ್ಥಾನ ಪಡೆದ ಶ್ವಾನಗಳನ್ನು ಕೊನೆ ಹಂತ ಸ್ಪರ್ಧೆಗೆ ಆಯ್ಕೆ ಮಾಡಲಾಯಿತು. ಸ್ಪರ್ಧೆಯು ಸಹ ಅತ್ಯಂತ ತುರುಸಿನಿಂದ ಕೂಡಿತ್ತು.

ಚಾಂಪಿಯನ್ ಆಪ್ ಚಾಂಪಿಯನ್ ಪಟ್ಟ ಪಡೆದ ಮುಧೋಳ್ ಶ್ವಾನ:
ಹಂಪಿ ಉತ್ಸವ-2025ರ ಶ್ವಾನ ಪ್ರದರ್ಶನದಲ್ಲಿ ಗದಗದ ನೀಲಕಂಠ ಅವರ ಮುಧೋಳ್ ತಳಿಗೆ ಸೇರಿದ ಶ್ವಾನ ಚಾಂಪಿಯನ್ ಆಫ್ ಚಾಂಪಿಯನ್ ಪಟ್ಟ ಅಲಂಕರಿಸಿತು. ಪ್ರಥಮ ಸ್ಥಾನ ಪಡೆದ ಈ ಶ್ವಾನ ರೂ.10,000 ನಗದು ಪುರಸ್ಕಾರ ಮತ್ತು ಪದಕ ಪಡೆಯಿತು.

ಮರಿಯಮ್ಮನಹಳ್ಳಿಯ ಸತೀಶ್ ಚಿದ್ರಿಯವರ ಡಾಬರ್ ಮನ್ ಶ್ವಾನ ದ್ವೀತಿಯ ಸ್ಥಾನ ಪಡೆಯುವುದರೊಂದಿಗೆ ರೂ.7,500 ನಗದು ಬಹುಮಾನ ಹಾಗೂ ಪದಕಕ್ಕೆ ಪಾತ್ರವಾಯಿತು.ಇನ್ನೂ ಕೊಟ್ಟೂರಿನ ಕೆ.ಪಿ.ಶಿವಕುಮಾರ್ ಅವರ ಲ್ಯಾಬ್ರಡಾರ್ ಶ್ವಾನ ತೃತೀಯ ಸ್ಥಾನ ಪಡೆದು ರೂ. 5000 ನಗದು ಮತ್ತು ಪದಕ ತನ್ನದಾಗಿಸಿಕೊಂಡಿತು. ಶ್ವಾನ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅವರು ಚಾಲನೆ ನೀಡಿದರು.

ಬೆಂಗಳೂರು ಪಶು ವೈದ್ಯಕೀಯ ಕಾಲೇಜಿನ ಪ್ರೊಫೆಸರ್ ಡಾ.ಬಸವರಾಜ್ ಬಾಳಣ್ಣನವರ್, ಹಾಸನ ಪಶು ವೈದ್ಯಕೀಯ ಕಾಲೇಜಿನ ಫೋಫೆಸರ್ ಡಾ.ಮಂಜುನಾಥ ಅವರು ಶ್ವಾನ ಪ್ರದರ್ಶನ ಸ್ಪರ್ಧೆಯ ನಿರ್ಣಾಯಕರಾಗಿ ಕಾರ್ಯನಿರ್ವಹಿಸಿದರು.

ಮೂಲ ಜಾತಿ ತಳಿ, ದೇಹದಾರ್ಡ್ಯತೆ, ಚುರುಕುತನ, ಚಾತುರ್ಯತೆ ಹಾಗೂ ಮಾಲೀಕರೊಂದಿಗೆ ಅವಿನಾಭಾವ ಸಂಬAಧದ ಆಧಾರದ ಮೇಲೆ ವಿಜೇತ ಶ್ವಾನಗಳನ್ನು ಆಯ್ಕೆ ಮಾಡಲಾಯಿತು. ಭಾಗವಹಿಸಿದ ಎಲ್ಲಾ ಶ್ವಾನಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.



ಈ ವೇಳೆ ಪಶುಸೇವೆ ಮತ್ತು ಪಶು ವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ.ಪೋಮ್ ಸಿಂಗ್ ನಾಯ್ಕ್, ಸಹಾಯಕ ನಿರ್ದೇಶಕ ಡಾ.ಆಕ್ತರ್, ಇಲಾಖೆಯ ಇತರೆ ಅಧಿಕಾರಿಗಳಾದ ಡಾ.ಮಲ್ಲಿಕಾರ್ಜುನ, ಡಾ.ಯುಗಂಧರ್ ಮಾನ್ವಿ, ಡಾ.ಸಂತೋಷ್, ಡಾ.ಸತೀಶ್, ಚಿದಾನಂದಪ್ಪ.ಬಿ, ಇಲಾಖೆಯ ಸಿಬ್ಬಂದಿ ಮಂಗಳ ಗೌರಮ್ಮ, ಪದ್ಮಜ, ಶೋಭಾ, ವಿಜಯ ಲಕ್ಷ್ಮೀ, ಶಾಂತಕುಮಾರಿ, ಚಂದನಾ ಸೇರಿದಂತೆ ಸಾರ್ವಜನಿಕರು ಹಾಗೂ ಇತರರು ಇದ್ದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ