Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಸಮಾಜ ಹಾಗೂ ಉತ್ತಮ ಆಡಳಿತಕ್ಕೆ ವಕೀಲರ ಪಾತ್ರ ಅನನ್ಯ-ಫಣೀಂದ್ರ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಮಾಜ ಹಾಗೂ ಉತ್ತಮ ಆಡಳಿತಕ್ಕೆ ವಕೀಲರ ಪಾತ್ರ ಅತೀ ಮುಖ್ಯವಾಗಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹೇಳಿದರು.
ನಗರದ ಜಿಲ್ಲಾ ವಕೀಲರ ಸಂಘದ ಸಭಾಂಗಣಲ್ಲಿ ಕರ್ನಾಟಕ ಲೋಕಾಯುಕ್ತ ಮತ್ತು ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರದ ಕುರಿತು ವಕೀಲರೊಂದಿಗೆ ಸಂವಾದಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ವಕೀಲರಿಗೆ ವಿಶೇಷವಾದ ಗೌರವ ಇದೆ. ಜನರು ತಮಗೆ ಕಷ್ಟ ಬಂದಾಗ, ಅನ್ಯಾಯವಾದಾಗ ಮೊದಲಿಗೆ ಅವರು ನ್ಯಾಯಾಂಗದ ಮೇಲೆ ನಂಬಿಕೆ ಇರಿಸಿ, ವಕೀಲರತ್ತ ಧಾವಿಸುತ್ತಾರೆ. ಹಾಗಾಗಿ ಸಮಾಜ ಹಾಗೂ ಉತ್ತಮ ಆಡಳಿತಕ್ಕೆ ವಕೀಲರ ಪಾತ್ರ ಅನನ್ಯವಾದುದು ಎಂದು ಹೇಳಿದರು.

ಸಮಾಜದಲ್ಲಿ ಎಲ್ಲರೂ ಗೌರವಯುತವಾಗಿ ಜೀವನ ನಡೆಸಲು ಸಂವಿಧಾನ ಅವಕಾಶ ಕಲ್ಪಿಸಿದೆ. ಸಂವಿಧಾನದ ಆಶಯವೂ ಇದಾಗಿದೆ. ನಿಟ್ಟಿನಲ್ಲಿ ಅನ್ಯಾಯಕ್ಕೊಳಗಾದವರಿಗೆ ಕಾನೂನು ರಕ್ಷಣೆ ನೀಡುವ ಮೂಲಕ ನ್ಯಾಯ ದೊರಕಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಮಾತನಾಡಿ, ಶರೀರಕ್ಕೆ ಕಾಯಿಲೆ ಬಂದಾಗ ವೈದ್ಯರ ಬಳಿ ತೆರಳುತ್ತಾರೆ. ಸಾಮಾಜಿಕವಾಗಿ ಕಾಯಿಲೆ ಬಂದಾಗ ವಕೀಲರ ಬಳಿ ಬರುತ್ತಾರೆ. ಹಾಗಾಗಿ ಪ್ರಬುದ್ಧ ಸಮಾಜ , ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ವಕೀಲರ ಪಾತ್ರ ದೊಡ್ಡದಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೋಣ ವಾಸುದೇವ್, ಕರ್ನಾಟಕ ಲೋಕಾಯುಕ್ತ ಅಪರ ನಿಬಂಧಕರಾದ ಜೆ.ವಿ.ವಿಜಯಾನಂದ, ಪೃಥ್ವಿರಾಜ್ ವರ್ಣೇಕರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶ ಕಿರಣ್ ಪಿ.ಎಂ.ಪಾಟೀಲ್, ಕರ್ನಾಟಕ  ಲೋಕಾಯುಕ್ತ ಚಿತ್ರದುರ್ಗ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ, ವಿಶೇಷ ಸಾರ್ವಜನಿಕ ಅಭಿಯೋಜಕ ಬಿ.ಮಲ್ಲೇಶಪ್ಪ, ಜಿಲ್ಲಾ ವಕೀಲರ  ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್ ಸೇರಿದಂತೆ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು, ವಕೀಲರು ಹಾಗೂ ಕಾನೂನು ವಿದ್ಯಾರ್ಥಿಗಳು ಇದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ