Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಕಾರ್ಯಕರ್ತರ ಅಪೂರ್ಣ ಅರ್ಜಿ ಭರ್ತಿಗೆ ಅವಕಾಶ

Advertisement
ಅಂಗನವಾಡಿ ಕಾರ್ಯಕರ್ತರ ಅಪೂರ್ಣ ಅರ್ಜಿ ಭರ್ತಿಗೆ ಅವಕಾಶ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 02 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಸಲ್ಲಿಸಿದ ಅರ್ಜಿಗಳ ಪೈಕಿ 202 ಹಾಗೂ 09 ಅಂಗನವಾಡಿ ಸಹಾಯಕಿಯರ ಹುದ್ದೆ ಸಲ್ಲಿಸಿದ ಅರ್ಜಿಗಳ ಪೈಕಿ 107 ಅರ್ಜಿಗಳು ಅಪೂರ್ಣವಾಗಿವೆ. ಇದೇ ಮಾದರಿಯಲ್ಲಿ ಭರಮಸಾಗರ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 07 ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಸಲ್ಲಿಸಿದ ಅರ್ಜಿಗಳ ಪೈಕಿ 91 ಹಾಗೂ 23 ಅಂಗನವಾಡಿ ಸಹಾಯಕಿಯರ ಹುದ್ದೆ ಸಲ್ಲಿಸಿದ ಅರ್ಜಿಗಳ ಪೈಕಿ 25 ಅರ್ಜಿಗಳು ಅಪೂರ್ಣವಾಗಿವೆ.
ಈ ಹಿನ್ನಲೆಯಲ್ಲಿ ನ.13 ವರೆಗೆ ಈ ಅಪೂರ್ಣ ಅರ್ಜಿಗಳನ್ನು ವೆಬ್‍ಸೈಟ್  https://karnemakaone.kar.nic.in/abcd/     ನಲ್ಲಿ ಪೂರ್ಣಗೊಳಿಸಲು ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.  
ಅಭ್ಯರ್ಥಿಗಳು ಮೊದಲನೇ ಹಂತದಲ್ಲಿ ಅರ್ಜಿ ಮಾಹಿತಿ ತುಂಬಬೇಕು. ಎರಡನೇ ಹಂತದಲ್ಲಿ ಭಾವಚಿತ್ರ ಹಾಗೂ ಸಹಿ ಅಪ್‍ಲೋಡ್ ಮಾಡಬೇಕು. ಮೂರನೇ ಹಂತದಲ್ಲಿ ದಾಖಲಾತಿಗಳನ್ನು ಅಪ್‍ಲೋಡ್ ಮಾಡಬೇಕು. ನಾಲ್ಕನೇ ಹಂತದಲ್ಲಿ ಆಧಾರ್ ಸಂಖ್ಯೆ ನಮೂದಿಸಿ ಇ-ಹಸ್ತಾಕ್ಷರೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸಬೇಕು.
ಆ.4 ರಂದು ಹೊರಡಿಸಿದ ಅಧಿಸೂಚನೆ ಕೊನೆಯ ದಿನಾಂಕಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಮಾತ್ರ ಆಯ್ಕೆ ಸಂದರ್ಭದಲ್ಲಿ ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಯ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಭೇಟಿ ನೀಡುವಂತೆ ಪ್ರಕಟಣೆ ತಿಳಿಸಿದೆ.  
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ