Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ, ಮುಂದಿನ ಸಿಎಂ ಡಿಕೆಶಿ!

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆಯ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ.

​ಭಾವುಕ ಕ್ಷಣಗಳಿಗೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್:
​ಗುರುವಾರ ಬೆಳಗ್ಗೆ ಸಚಿವರೊಂದಿಗೆ ಮುಖ್ಯಮಂತ್ರಿಗಳು ಹಮ್ಮಿಕೊಂಡಿದ್ದ ಸುಮಾರು ಎರಡು ಗಂಟೆಗಳ ಸುದೀರ್ಘ ಉಪಹಾರ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಹೊರಬಿದ್ದಿದೆ. ಸಭೆಗೆ ಆಗಮಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರಲ್ಲದೆ, ಇಬ್ಬರೂ ನಾಯಕರು ಪರಸ್ಪರ ಆಲಂಗಿಸಿಕೊಂಡಿದ್ದು ಸಭೆಯಲ್ಲಿದ್ದವರ ಗಮನ ಸೆಳೆಯಿತು.

​ ಗುರುವಾರ ಮಧ್ಯಾಹ್ನ 3ಕ್ಕೆ ರಾಜೀನಾಮೆ ಸಲ್ಲಿಕೆ:
​ಸಭೆಯ ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ಇಂದು ಮಧ್ಯಾಹ್ನ 3 ಗಂಟೆಗೆ ಲೋಕಭವನಕ್ಕೆ ತೆರಳಿ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದರು. ಒಂದು ವೇಳೆ ರಾಜ್ಯಪಾಲರು ಲಭ್ಯವಿಲ್ಲದಿದ್ದರೆ, ಅವರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಹಸ್ತಾಂತರಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

​ಭಾವುಕರಾದ ಸಿದ್ದರಾಮಯ್ಯ:
"ನನ್ನ ಅಧಿಕಾರಾವಧಿಯಲ್ಲಿ ಮಾಡಿರುವ ಕೆಲಸಗಳ ಬಗ್ಗೆ ನನಗೆ ಸಂಪೂರ್ಣ ತೃಪ್ತಿಯಿದೆ. ಘೋಷಿಸಿದ ಎಲ್ಲಾ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿದ್ದೇವೆ. ಮುಂದೆಯೂ ಜನರಿಗೆ ಒಳ್ಳೆಯ ಯೋಜನೆಗಳನ್ನು ತಲುಪಿಸುವ ಕೆಲಸ ಮುಂದುವರಿಯಲಿ. ಹಾಗೆಯೇ ವಿರೋಧ ಪಕ್ಷವಾದ ಬಿಜೆಪಿಯ ತಂತ್ರಗಳ ಬಗ್ಗೆ ಸದಾ ಜಾಗರೂಕರಾಗಿರಿ."

​ಎಲ್ಲರ ಸಹಕಾರ ಕೋರಿದ ಡಿ.ಕೆ. ಶಿವಕುಮಾರ್:
​ಮುಂದಿನ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಳ್ಳಲಿರುವ ಡಿ.ಕೆ. ಶಿವಕುಮಾರ್ ಅವರು, ಸಿದ್ದರಾಮಯ್ಯ ಅವರ ಆಡಳಿತ ವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. "ನಾನು ಪಕ್ಷದ ಅಧ್ಯಕ್ಷನಾಗಿ ಇಷ್ಟರಮಟ್ಟಿಗೆ ಬೆಳೆಯಲು ನಿಮ್ಮೆಲ್ಲರ ಸಹಕಾರ ಕಾರಣ. ಮುಂದಿನ ದಿನಗಳಲ್ಲೂ ಇದೇ ರೀತಿಯ ಬೆಂಬಲ ಮತ್ತು ಸಹಕಾರ ನನ್ನೊಂದಿಗಿರಲಿ" ಎಂದು ಸಚಿವ ಸಂಪುಟದ ಸಹೋದ್ಯೋಗಿಗಳಲ್ಲಿ ಮನವಿ ಮಾಡಿದರು.

​‘ಒಗ್ಗಟ್ಟೇ ನಮ್ಮ ಶಕ್ತಿ’: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್
​ನಾಯಕತ್ವ ಬದಲಾವಣೆಯ ಈ ಮಹತ್ವದ ಘಟನೆಯ ಬೆನ್ನಲ್ಲೇ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಪರಸ್ಪರ ಆಲಂಗಿಸಿಕೊಂಡಿರುವ ಅಪರೂಪದ ಚಿತ್ರಗಳನ್ನು ಕಾಂಗ್ರೆಸ್ ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. "ಅಂದು, ಇಂದು, ಎಂದೆಂದೂ... ಒಗ್ಗಟ್ಟೇ ನಮ್ಮ ಶಕ್ತಿ! ಎಂದೆಂದಿಗೂ ಜನಸೇವೆಯೇ ನಮ್ಮ ಬದ್ಧತೆ" ಎಂಬ ಶೀರ್ಷಿಕೆಯಡಿ ಹಂಚಿಕೊಳ್ಳಲಾದ ಈ ಪೋಸ್ಟ್ ಈಗ ರಾಜಕೀಯ ವಲಯದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ ಎಂಬ ಸಂದೇಶ ರವಾನಿಸಲು ಕಾಂಗ್ರೆಸ್ ಯಶಸ್ವಿಯಾಗಿದೆ.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭೀಕರ ರಸ್ತೆ ಅಪಘಾತ, ಮಾಜಿ ನಗರಸಭಾ ಸದಸ್ಯ ಸೇರಿ ಐದು ಜನ ಸ್ಥಳದಲ್ಲೇ ಸಾವು!'ನುಡಿದಂತೆ ನಡೆಯದ ಸಿಎಂ, ಗ್ಯಾರಂಟಿಗಳಿಗೆ ಎಸ್ಸಿಪಿ/ಟಿಎಸ್ಪಿ ಹಣ ಬಳಕೆ': ಸಿದ್ದರಾಮಯ್ಯ ವಿರುದ್ಧ ಪತ್ರಕರ್ತ ಜಡೇಕುಂಟೆ ಮಂಜುನಾಥ್ ಆಕ್ರೋಶದ ಪತ್ರಕೆ. ಹೆಚ್. ಮುನಿಯಪ್ಪನವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು:ಆರ್. ವಿ. ಮಹೇಶ್ನೀರಿಗಾಗಿ ಕಲ್ಪಳ್ಳಿ ಭಾಗದ ಜನರ ಕೂಗು: ಜೂನ್ 1 ರಂದು ಬೃಹತ್ ಪ್ರತಿಭಟನಾ ರ‍್ಯಾಲಿವಾಣಿವಿಲಾಸ ಸಾಗರದ ನೀರು ಪೋಲು: ಮಳೆಗಾಲದಲ್ಲೂ ಚೆಕ್ ಡ್ಯಾಂಗಳಿಗೆ ನೀರು ಹರಿಸುತ್ತಿರುವುದಕ್ಕೆ ಸಾರ್ವಜನಿಕರ ಆಕ್ರೋಶ – ಜಿಲ್ಲಾಧಿಕಾರಿಗಳಿಗೆ ಪತ್ರಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಕೆಪಿಸಿಸಿ ಸಮಿತಿಯ ಉಪಾಧ್ಯಕ್ಷರಾದ ಆರ್. ಮಂಜುನಾಥ್ ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ!ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ತೆರೆಮರೆ ಕಸರತ್ತು: 'ಟ್ರಬಲ್ ಶೂಟರ್' ಡಿಕೆಶಿಗೆ ಒಲಿಯಲಿದೆಯೇ ಸಿಎಂ ಪಟ್ಟ?ಕೊನೆ ಕ್ಷಣದಲ್ಲಿ ಆಪ್ತರ ವರ್ಗಾವಣೆ: ಸಿದ್ದರಾಮಯ್ಯ 'ಬಿಗ್ ಮೂವ್':"ಸಂವಿಧಾನ ಇಲ್ಲದಿದ್ದರೆ ನಾನು ಕುರಿ ಮೇಯಿಸುತ್ತಿದ್ದೆ": ವಿದಾಯದ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಭಾವುಕ! ರಾಷ್ಟ್ರ ರಾಜಕಾರಣದ ಆಫರ್ ನಿರಾಕರಣೆ