Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಅಂತರ್ಯಾಮಿ" ಚಲನಚಿತ್ರ ಶೀಘ್ರದಲ್ಲೇ ತೆರೆಗೆ

Advertisement
ಚಂದ್ರವಳ್ಳಿ ನ್ಯೂಸ್, ತುಮಕೂರು :
ಗುರುರೇಣುಕಾ ಪ್ರೊಡಕ್ಷನ್ ತುಮಕೂರ ಅವರ ಅಂತರ್ಯಾಮಿ ಚಲನಚಿತ್ರ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವದು ಎಂದು ನಿರ್ದೇಶಕ ಕೆ.ಧನಂಜಯ ತಿಳಿಸಿದ್ದಾರೆ. 


    ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ, ವಸ್ತು ವಿ?ಯವಾಗಿದ್ದು, ಇಂದಿನ ಯುವ ಪೀಳಿಗೆ  ಸಾಮಾಜಿಕ ಜಾಲತಾಣದ ಗೀಳಿಗೆ ಹೇಗೆ ಬಲಿಯಾಗುತ್ತಿರುವುದರ ಪರಿಣಾಮ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೇಗೆ ಭಾರತದ ಭವಿ?ದ ಅಭಿವೃದ್ಧಿ ವ್ಯವಸ್ಥೆಗಳಿಗೆ ಮಾರಕವಾಗಿದೆ, ವಿದೇಶಗಳಿಗೆ ಹೇಗೆ ಪೂರಕವಾಗಿದೆ ಎಂಬುದರ ಜೊತೆಗೆ, ಯುವ ಜನತೆ ಜೊತೆಗೆ ಸಾಮಾನ್ಯ ಜನತೆ ಕೂಡ ಹೇಗೆ ಇದರ ಭಾಗವಾಗುತ್ತಿದ್ದಾರೆ, ಇದನ್ನ ನಾಯಕ ಹೇಗೆ ಸರಿ ಪಡಿಸುತ್ತಾನೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ .ಸದ್ಯ ರಾಜ್ಯದ ಎಲ್ಲ ಕಡೆ   ಸಂಚರಿಸಿ ಚಿತ್ರದ ಪ್ರಚಾರ ಕಾರ್ಯ ಕೈಗೊಂಡಿದ್ದೇವೆ. ಚಿತ್ರ ಬಿಡುಗಡೆ ಸಂದರ್ಭದಲ್ಲಿ ಚಿತ್ರತಂಡ ಚಿತ್ರಮಂದಿರಗಳಿಗೆ ಭೇಟಿ ನೀಡಲಿದೆ ಎಂದರು.

    ೨೫ ದಿನಗಳ ಕಾಲ  ತುಮಕೂರು ಸಿದ್ದಗಂಗಾ ಮಠ, ಎಸ್.ಎಸ್.ಆಯ್.ಟಿ ಕಾಲೇಜ್, ಬಂಡೆಮಠ, ಸೋಮವಾರಪೇಟೆ, ಮಾದಾಪುರ, ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಎಲ್ಲ   ವಯಸ್ಸಿನವರಿಗೂ ಚಿತ್ರ ಇಷ್ಟವಾಗಲಿದೆ .ಈ ಮೊದಲು ಚಿತ್ರದ ಶೀರ್ಷಿಕೆಯನ್ನು  ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು ಅನಾವರಣಗೊಳಿಸಿದ್ದರು, ಚಿತ್ರದ ಫಸ್ಟ್‌ಲುಕ್ ಅನ್ನು ಮಾನ್ಯ ಗೃಹಮಂತ್ರಿ ಜಿ ಪರಮೇಶ್ವರ್‌ರವರು ಅನಾವರಣ ಮಾಡಿದ್ದರು ಎಂದು ನಿರ್ಮಾಪಕ ನವೀನ್ ಎನ್.ಜಿ ತಿಳಿಸಿದ್ದಾರೆ.

      ಚಿತ್ರದಲ್ಲಿ ನಾಯಕರಾಗಿ  ಪ್ರಣವ್, ನಾಯಕಿಯಾಗಿ  ಮೋಹಿರ ಆಚಾರ್ಯ, ಮಂಡ್ಯಸಿದ್ದು, ಕಾಮಿಡಿ ಕಿಲಾಡಿ ಉದಯ್, ಕಿಟ್ಟಿ, ಮಂಜಿವಾಮುಗಿಲನ್, ಬೇಬಿ ಹಾನ್ಸಿ, ಬಾಲಕೃ? ಬರಗೂರು, ಹೇಮಾ ಮಾಲಿನಿ, ರೇಣುಕಾಂಬ , ರುದ್ರ ಮುನಿ,ಯೋಗೇಶ ಮೊದಲಾದವರಿದ್ದಾರೆ. ಛಾಯಾಗ್ರಹಣ ಎಸ್.ಬಾಲು, ವಿನಯ್ ಕಾವ್ಯ ಕಾಂತಿಯವರ ಸಾಹಿತ್ಯ , ನಾಲ್ಕು ಹಾಡುಗಳಿದ್ದು, ಪೃಥ್ವಿ ಭಟ್ಮೇಘನಾ ಕುಲಕರ್ಣಿ, ದೇಸಿ ಮೋಹನ್ ರವರು ಹಾಡುಗಳಿಗೆ ಧ್ವನಿ ನೀಡಿದ್ದಾರೆ. 

    ಸಂಗೀತ ದೇಸಿ ಮೋಹನ್      ಸಂಕಲನ  ಅರವಿಂದ್ ರಾಜ್, ನೃತ್ಯ ನಿರ್ದೇಶನ ಬಾಲು ಮಾಸ್ಟರ್, ತಾಂತ್ರಿಕ ಸಲಹೆ ಶ್ರೀಕಾಂತ್ ಶ್ರಾಫ್, ಡಿಆಯ್ ಚೆನೈ ,ಬೆಂಗಳೂರಪಿ.ಆರ್.ಓ ಎಂಜೆಎಸ್‌ಪಿಆರ್, ಪತ್ರಿಕಾ ಸಂಪರ್ಕ ಡಾ.ಪ್ರಭು ಗಂಜಿಹಾಳ,ಡಾ.ವೀರೇಶ ಹಂಡಿಗಿ ಅವರದಿದೆ.

ನಿರ್ದೇಶನ ತಂಡದಲ್ಲಿ ರವಿ  ಶಂಕರ್‌ನಾಗ್, ಶರತ್ ಘಾಟಿ, ಮಂಜುನಾಥ್ ಹೊಸ ರಂಗಾಪುರ, ಮುಕುಂದ, ರಾಣಾ, ವಸಂತ್  ಇದ್ದು, ಕೆ. ಧನಂಜಯ ಕಥೆ, ಚಿತ್ರಕಥೆ, ಸಂಭಾ?ಣೆ ಬರೆದು  ನಿರ್ದೇಶನ ಹೊಣೆ ಹೊತ್ತಿದ್ದಾರೆ.   ನವೀನ್ ಎನ್.ಜಿ ನಿರ್ಮಾಪಕರಾಗಿದ್ದಾರೆ. ಸಧ್ಯದಲ್ಲೇ ಚಿತ್ರವನ್ನು ತೆರೆಗೆ ತರುವುದಾಗಿ ನಿರ್ದೇಶಕರು, ನಿರ್ಮಾಪಕರು ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ