Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರ ಸಚಿವಾಲಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಡಿ 2024-25 ನೇ ಸಾಲಿಗೆ ಒಂದು ವರ್ಷದ ಅವಧಿಗೆ 5 ಅಪ್ರೆಂಟಿಸ್ ಟ್ರೈನಿಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. 

ಅರ್ಜಿ ಸಲ್ಲಿಸ ಬಯಸುವ ಅರ್ಹ ಅಭ್ಯರ್ಥಿಗಳು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಡಿಪ್ಲೊಮಾ ಪಡೆದಿರಬೇಕು. ನಿಗದಿತ ಶಿಕ್ಷಣಾರ್ಹತೆಯನ್ನು 2022 ಮೇ ತಿಂಗಳ ನಂತರ ಪಡೆದವರು ಮಾತ್ರ ತರಬೇತಿಗೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳನ್ನು ಅವರು ಗಳಿಸಿದ ಅಂಕಗಳ (ಮೆರಿಟ್) ಹಾಗೂ ಮೀಸಲಾತಿಯ ಆಧಾರದ ಮೇಲೆ ನಿಯಮಾನುಸಾರ ಆಯ್ಕೆ ಮಾಡಲಾಗುವುದು.

ಈಗಾಗಲೇ ಅಪ್ರೆಂಟಿಸ್ ತರಬೇತಿ ಪಡೆದವರಾಗಿದ್ದರೆ ಅಂತಹವರು ಅರ್ಜಿಗಳನ್ನು ಸಲ್ಲಿಸುವಂತಿಲ್ಲ. ಆಯ್ಕೆಯಾದವರಿಗೆ ಮಾಹೆಯಾನ 8 ಸಾವಿರ (ರೂ. 4000/- ಗಳನ್ನು ರಾಜ್ಯಸರ್ಕಾರದಿಂದ ಹಾಗೂ ರೂ. 4000/-ಗಳನ್ನು ಅಪ್ರೆಂಟಿಸ್ ಬೋರ್ಡ್ ಅವರಿಂದ ನೇರವಾಗಿ ಅಪ್ರೆಂಟಿಸ್ ಟ್ರೈನಿಗಳ ಖಾತೆಗೆ ಡಿಬಿಟಿ ಮೂಲಕ ಜಮೆ ಮಾಡಲಾಗುವುದು) ಗಳನ್ನು ಪಾವತಿಸಲಾಗುವುದು.

ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, -ಮೇಲ್ ಐಡಿ ಮುಂತಾದ ವಿವರಗಳೊಂದಿಗೆ ಪ್ರಧಾನ ಮುಖ್ಯ ಗ್ರಂಥಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಉಪಕಾರ್ಯದರ್ಶಿ, ಸಚಿವಾಲಯ ಗ್ರಂಥಾಲಯ ಕೊಠಡಿ ಸಂಖ್ಯೆ 11, ನೆಲಮಹಡಿ, ವಿಧಾನಸೌಧ, ಬೆಂಗಳೂರು-560001 ಇವರಿಗೆ ಫೆಬ್ರವರಿ 12 ಒಳಗಾಗಿ ಸಲ್ಲಿಸತಕ್ಕದ್ದು.

ಅರ್ಜಿಯೊಂದಿಗೆ ದೃಢೀಕರಿಸಲಾಗಿರುವ ಎಸ್ಎಸ್ಎಲ್ಸಿ. ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಡಿಪ್ಲೊಮಾ ಹೊಂದಿರುವ ಬಗ್ಗೆ ಪ್ರಮಾಣಪತ್ರ/ತಾತ್ಕಾಲಿಕ ಪ್ರಮಾಣಪತ್ರ (Provisional Certificate) ಗಳನ್ನು ಕಡ್ಡಾಯವಾಗಿ ಲಗತ್ತಿಸುವುದು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 080-22033462/3011 ಅಥವಾ -ಮೇಲ್ ವಿಳಾಸ [email protected]  ನ್ನು ಸಂಪರ್ಕಿಸಬಹುದು ಎಂದು ಸಚಿವಾಲಯ ಗ್ರಂಥಾಲಯದ ಪದನಿಮಿತ್ತ ಸರ್ಕಾರದ ಉಪಕಾರ್ಯದರ್ಶಿ ಹಾಗೂ ಪ್ರಧಾನ ಮುಖ್ಯ ಗ್ರಂಥಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ