Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತೋಟಗಾರಿಕೆ ಬೆಳೆಗಳಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ತೋಟಗಾರಿಕೆ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಅರ್ಹ ರೈತರಿಂದ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ (ರಾಷ್ಟ್ರೀಯ ತೋಟಗಾರಿಕೆ ಮಿಷನ್) ಅಡಿ ಹೊಸದಾಗಿ ಬಾಳೆ, ದಾಳಿಂಬೆ, ಹುಣಸೆ, ಡ್ರಾಗನ್ ಫ್ರೂಟ್ ಮತ್ತು ಕಾಳುಮೆಣಸು ಬೆಳೆಯಲು, ಕೃಷಿ ಹೊಂಡ ನಿರ್ಮಾಣ, ಪಾಲಿ ಮನೆ, ಪ್ಲಾಸ್ಟಿಕ್ ಮಲ್ಚಿಂಗ್, ಎರೆಹುಳು ಘಟಕ, ಜೇನು ಸಾಕಾಣೆ ಘಟಕ, ಈರುಳ್ಳಿ ಸಂಗ್ರಹಣಾ ಘಟಕ, ಅಣೆಬೆ ಘಟಕಗಳಿಗೆ ಸಹಾಯಧನ ನೀಡಲಾಗುವುದು.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳಾದ ನಿಂಬೆ, ನುಗ್ಗೆ, ಮಾವು, ಸಪೋಟ, ಹುಣಸೆ, ದಾಳಿಂಬೆ, ಗುಲಾಬಿ, ನೇರಳೆ, ಡ್ರಾಗನ್ ಫ್ರೂಟ್, ಕಾಳುಮೆಣಸು, ಕರಿಬೇವು ಮತ್ತು ಬದುಗಳಲ್ಲಿ ತೆಂಗು ಇತ್ಯಾದಿ ಬೆಳೆಗಳನ್ನು (ಅಡಿಕೆ ಮತ್ತು ಬಾಳೆ ಹೊರತುಪಡಿಸಿ) ಹೊಸದಾಗಿ ಬೆಳೆಯಲು ಕಾರ್ಯಕ್ರಮದ ಮಾರ್ಗಸೂಚಿಯನ್ವಯ ಅರ್ಹ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.

 ನಿಗದಿತ ಅರ್ಜಿ ನಮೂನೆಗಳನ್ನು ಚಿತ್ರದುರ್ಗದ ತೋಟಗಾರಿಕೆ ಇಲಾಖೆಯ ಕಚೇರಿಯಿಂದ ಪಡೆಯಬಹುದು. ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಜೂನ್ 15 ಕೊನೆಯ ದಿನಾಂಕವಾಗಿದೆ.

 

ತದನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಈ ಹಿಂದೆ ತೋಟಗಾರಿಕೆ ಇಲಾಖೆಯಿಂದ ಯಾವುದೇ ಸಹಾಯಧನ ಪಡೆಯದೇ ಇರುವ ಫಲಾನುಭವಿಗಳಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ, ಮಹಿಳೆಯರಿಗೆ ಮತ್ತು ಅಂಗವಿಕಲರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!