ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಪದವಿ ಪೂರ್ವ ಹಾಗೂ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾನಸಿಕ, ಭಾವನಾತ್ಮಕ ಸಂಬಂಧಿತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮಾರ್ಗದರ್ಶನ ನೀಡುವ ಸಲುವಾಗಿ ‘ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ’ (Academic Resource Person for Mental Health) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 24 ಅರ್ಜಿ ಸಲ್ಲಿಸಲು ಕೊನೆಯ ದಿನ.
2026-27ನೇ ಸಾಲಿಗೆ ಜಿಲ್ಲೆಯ ಆರು ಬ್ಲಾಕ್ಗಳ ಸಂಪನ್ಮೂಲ ಕೇಂದ್ರಗಳಿಗೆ ತಲಾ ಒಬ್ಬರಂತೆ ಸಮಾಲೋಚಕರನ್ನು (Consultant) ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಅಭ್ಯರ್ಥಿಗಳು ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ ಅಥವಾ ಕೌನ್ಸೆಲಿಂಗ್ ಮನೋವಿಜ್ಞಾನ ವಿಷಯಗಳಲ್ಲಿ ಎಂ.ಎ ಅಥವಾ ಎಂ.ಎಸ್ಸಿ ಪದವಿ ಹೊಂದಿರಬೇಕು. ಜೊತೆಗೆ ಶಾಲೆ ಅಥವಾ ಸಮುದಾಯ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷದ ಸೇವಾ ಅನುಭವ ಹೊಂದಿರಬೇಕು. ಕನ್ನಡ, ಇಂಗ್ಲಿμï ಹಾಗೂ ಮೂಲಭೂತ ಕಂಪ್ಯೂಟರ್ ಜ್ಞಾನ ಇರುವುದು ಕಡ್ಡಾಯ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ 2026ರ ಆಗಸ್ಟ್ 24, ಸಂಜೆ 5 ಗಂಟೆಯೊಳಗೆ ಖುದ್ದಾಗಿ ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಕಚೇರಿಗೆ ಸಲ್ಲಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ವೇಳೆಯಲ್ಲಿ ನೇರವಾಗಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.



