Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಕಲಚೇತನರಿಗೆ ವಿವಿಧ ಯೋಜನೆ : ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯು 2025-26 ನೇ ಸಾಲಿನಲ್ಲಿ ವಿವಿಧ ಸೌಲಭ್ಯಗಳ ಮಂಜೂರಾತಿಗಾಗಿ, ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.


ಜಿಲ್ಲೆಯ ಅರ್ಹ ವಿಕಲಚೇತನರಿಗೆ ಶುಲ್ಕ ಮರುಪಾವತಿ, ವಿವಾಹ ಪ್ರೊತ್ಸಾಹ ಧನ, ನಿರಾಮಯ ಯೋಜನೆಗಾಗಿ ಅರ್ಜಿ ಆಹ್ವಾನಿಸಿದ್ದು, ವಿಕಲಚೇತನರು ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಆಧಾರ್ ಲಿಂಕ್ ಮಾಡಿಸಿರುವ ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ವೈದ್ಯಕೀಯ ಪ್ರಮಾಣಪತ್ರ, ವಿಕಲಚೇತನರ ವಿಶಿಷ್ಟ ಗುರುತಿ ಚೀಟಿ,

ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ರೇಷನ್ ಕಾರ್ಡ್, ನಿವಾಸಿ ದೃಢೀಕರಣ ಪತ್ರ ಸಲ್ಲಿಸಬೇಕು.  ಶುಲ್ಕ ಮರುಪಾವತಿ ಯೋಜನೆಗೆ ಹಿಂದಿನ ತರಗತಿಯಲ್ಲಿ ತೇರ್ಗಡೆಯಾದ ಅಂಕಪಟ್ಟಿ, ಪ್ರಸ್ತುತ ವ್ಯಾಸಂಗದ ದೃಢೀಕರಣ ಪತ್ರ, ಕಾಲೇಜಿಗೆ ಶುಲ್ಕ ಪಾವತಿ ಮಾಡಿದ ಮೂಲ ರಸೀದಿ ಸಲ್ಲಿಸಬೇಕು.

 ವಿವಾಹ ಪ್ರೋತ್ಸಾಹಧನ ಯೋಜನೆಗೆ ವಿವಾಹ ನೊಂದಣಾಧಿಕಾರಿಗಳಿಂದ ಪಡೆದ ನೊಂದಣಿ ಪ್ರಮಾಣ ಪತ್ರ, ಗೆಜೆಟೆಡ್ ಅಧಿಕಾರಿಗಳ ಸಹಿ, ಜನನ ಪ್ರಮಾಣ ಪತ್ರ, ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನವಾಗಿರುತ್ತದೆ.  

ಅರ್ಜಿ ನಮೂನೆಯನ್ನು  www.dwdsc.kar.nic.in ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು.  ಅಥವಾ ತಾ.ಪಂ. ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ, ನಗರ ವ್ಯಾಪ್ತಿಯಲ್ಲಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿ ಪಡೆಯಬಹುದು.


ಹೆಚ್ಚಿನ ಮಾಹಿತಿಗೆ ಚಿತ್ರದುರ್ಗ- 9880821934, ಚಳ್ಳಕೆರೆ-9611266930, ಹಿರಿಯೂರು-9902888901, ಹೊಳಲ್ಕೆರೆ-9740030227, ಹೊಸದುರ್ಗ-9741829990 ಮತ್ತು ಮೊಳಕಾಲ್ಮೂರು-9742725576 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ