Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೂಕ್ಷ್ಮ ಹನಿ ನೀರಾವರಿ ಸೌಲಭ್ಯಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

Advertisement
ಸೂಕ್ಷ್ಮ ಹನಿ ನೀರಾವರಿ ಸೌಲಭ್ಯಕ್ಕಾಗಿ ರೈತರಿಂದ ಅರ್ಜಿ ಆಹ್ವಾನ
ಚಂದ್ರವಳ್ಳಿ ನ್ಯೂಸ್, ತುಮಕೂರು: ತೋಟಗಾರಿಕಾ ಇಲಾಖೆಯು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅಡಿಕೆ ಬೆಳೆ ಹೊರತು ಪಡಿಸಿ ೨೦೨೪-೨೫ನೇ ಸಾಲಿಗಾಗಿ ಇತರೆ ತೋಟಗಾರಿಕೆ ಬೆಳೆಗಳಿಗೆ ಸೂಕ್ಷ್ಮ ಹನಿ ನೀರಾವರಿ ಘಟಕಗಳನ್ನು ಅಳವಡಿಸಿಕೊಳ್ಳಲಿಚ್ಛಿಸುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯು ರೈತರಿಗೆ ನೀರಿನ ಸಮರ್ಪಕ ಬಳಕೆಯೊಂದಿಗೆ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆದು ಅವರ ಆರ್ಥಿಕ ಮಟ್ಟ ಸುಧಾರಿಸಲು ಸಹಕಾರಿಯಾಗಿದೆ. ಯೋಜನೆಯಡಿ ಹನಿ ನೀರಾವರಿ ಅಳವಡಿಕೆಗೆ ಪ್ರತೀ ಫಲಾನುಭವಿಗೆ ಗರಿ? ೫ ಹೆಕ್ಟೇರ್ ಪ್ರದೇಶ ಹಾಗೂ ತರಕಾರಿ ಮತ್ತು ವಾಣಿಜ್ಯ ಹೂ ಬೆಳೆಗೆ ಗರಿ? ೨ ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುವುದು. ಮೊದಲ ೨ ಹೆಕ್ಟೇರ್ ಪ್ರದೇಶದವರೆಗೆ ಪರಿಶಿ? ಜಾತಿ/ಪರಿಶಿ? ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಗೆ ಶೇ.೯೦ರ? ಹಾಗೂ ನಂತರದ ೩ ಹೆಕ್ಟೇರ್ ಪ್ರದೇಶದವರೆಗೆ ಎಲ್ಲಾ ವರ್ಗದ ರೈತರಿಗೆ ಶೇ. ೪೫ರ? ಸಹಾಯಧನ ನೀಡಲಾಗುವುದು.
ಪರಿಶಿ? ಜಾತಿ ಮತ್ತು ಪರಿಶಿ? ಪಂಗಡದ ರೈತರಿಗೆ ಮಾತ್ರ ಈ ಹಿಂದೆ ಅಳವಡಿಸಿಕೊಂಡಿದ್ದ ಸೂಕ್ಷ್ಮ ನೀರಾವರಿ ಪದ್ದತಿ ಹಾಳಾಗಿದ್ದಲ್ಲಿ / ಘಟಕ ಕಾರ್ಯನಿರ್ವಹಿಸದೇ ಇದ್ದಲ್ಲಿ ೭ ವ?ಗಳ ನಂತರ ಅದೇ ಜಮೀನಿಗೆ ಮತ್ತೊಮ್ಮೆ ಸೂಕ್ಷ್ಮ ನೀರಾವರಿ ಪದ್ದತಿ ಅಳವಡಿಸಿಕೊಂಡಲ್ಲಿ ಈ ಸಹಾಯಧನ ಸೌಲಭ್ಯ ನೀಡಲಾಗುವುದು.
ವಿಕಲಚೇತನರು/ ಪರಿಶಿ? ಜಾತಿ/ಪರಿಶಿ? ಪಂಗಡ/ ಮಹಿಳೆ/ಅಲ್ಪ ಸಂಖ್ಯಾತ ಫಲಾನುಭವಿಗಳಿಗೆ ಆದ್ಯತೆ ಮೇರೆಗೆ ಸಹಾಯಧನ ಸೌಲಭ್ಯ ಕಲ್ಪಿಸಲಾಗುವುದು. ತೋಟಗಾರಿಕಾ ಇಲಾಖೆಯಿಂದ ಅನುಮೋದನೆಗೊಂಡಿರುವ ಕಂಪನಿಗಳಿಂದ ಮಾತ್ರ ಹನಿ ನೀರಾವರಿ ಘಟಕಗಳನ್ನು ಅಳವಡಿಸಿಕೊಳ್ಳತಕ್ಕದ್ದು. ಆಸಕ್ತ ರೈತ ಫಲಾನುಭವಿಗಳು ಹತ್ತಿರದ ಗ್ರಾಮ ಪಂಚಾಯಿತಿ/ ತಾಲ್ಲೂಕು ತೋಟಗಾರಿಕೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಗ್ರಾಮ ಪಂಚಾಯಿತಿ ಅಥವಾ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ.ವಾ.ಸಂ.ಯನ್ನು ಸಂಪರ್ಕಿಸಬಹುದಾಗಿದೆ. ಆಸಕ್ತ ರೈತರು ತುಮಕೂರು- ೯೬೮೬೫೦೩೫೦೦, ೮೯೭೦೮೭೦೯೧೮; ಗುಬ್ಬಿ- ೯೫೩೫೭೮೧೯೬೩, ೭೨೫೯೨೪೩೩೨೯; ಶಿರಾ-೯೮೪೪೦೪೨೩೫೬ ; ಕುಣಿಗಲ್-೯೩೪೨೯೫೯೬೯೦ / ೯೯೮೦೦೭೩೯೦೯; ತಿಪಟೂರು-೯೮೪೫೦೧೪೨೯೩ / ೯೯೬೪೭೯೧೯೧೦; ಚಿಕ್ಕನಾಯಕನಹಳ್ಳಿ-೯೬೮೬೦೫೬೭೦೫ / ೯೫೩೮೨೭೨೯೬೪ನ್ನು ಸಂಪರ್ಕಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ತೋಟಗಾರಿಕೆ ಉಪನಿರ್ದೇಶಕ ಶಾರದಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ