LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:  
2026-27
ನೆ ಸಾಲಿಗೆ ಕೃಷೋನ್ನತಿ-ಕೃಷಿ ವಿಸ್ತರಣೆ (ಆತ್ಮ) ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಕೃಷಿ ಇಲಾಖೆಯಲ್ಲಿ ಹೊಸದಾಗಿ 6 ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಳಿಗೆ ನೇರ ಗುತ್ತಿಗೆ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.


ಮೊಳಕಾಲ್ಮೂರು ತಾಲ್ಲೂಕು ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಒಂದರಂತೆ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬಬ್ಬೂರು ಫಾರಂಗೆ ಒಂದು ಹುದ್ದೆ ಸೇರಿದಂತೆ ಒಟ್ಟು 6 “ಸಹಾಯಕ ತಾಂತ್ರಿಕ ವ್ಯವಸ್ಥಾಪಕರಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.


       
ಕೃಷಿ/ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕೃಷಿ/ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಕನಿಷ್ಠ 1 ವರ್ಷದ ಕ್ಷೇತ್ರ ಮಟ್ಟದ ಅನುಭವ ಹೊಂದಿರಬೇಕು. ಅರ್ಜಿದಾರರು 10.06.2026ಕ್ಕೆ 45 ವರ್ಷದೊಳಗಿರಬೇಕು. ವೇತನ ಮಾಹೆಯಾನ ರೂ. 25,000/- ನೀಡಲಾಗುವುದು.


ಆಸಕ್ತ ಅಭ್ಯರ್ಥಿಗಳು ಆತ್ಮ ವಿಭಾಗ, ಜಂಟಿ ಕೃಷಿ ನಿರ್ದೇಶಕರ ಕಛೇರಿ, ಚಿತ್ರದುರ್ಗ ಇಲ್ಲಿ ಅರ್ಜಿಯನ್ನು ಪಡೆದು, ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಪೂರ್ಣ ಮಾಹಿತಿಯೊಂದಿಗೆ ದಿನಾಂಕ:30.06.2026 ಸಂಜೆ 5ರ ಒಳಗಾಗಿ ಮುದ್ದಾಂ / ನೊಂದಣೆ ಅಂಚೆ ಮೂಲಕ ಜಂಟಿ ಕೃಷಿ ನಿರ್ದೇಶಕರು, ಆತ್ಮ ವಿಭಾಗ ಚಿತ್ರದುರ್ಗ ಇವರಿಗೆ ಅರ್ಜಿ ಸಲ್ಲಿಸಲು ಸೂಚಿಸಿದ್ದು, ತಡವಾಗಿ ಬಂದ ಅರ್ಜಿಗಳನ್ನು ಸ್ವಿಕರಿಸಲಾಗುವುದಿಲ್ಲ. ಅರ್ಜಿಯೊಂದಿಗೆ ವಿದ್ಯಾರ್ಹತೆ ಸಂಬಂಧಿಸಿದಂತೆ ಎಲ್ಲಾ ವರ್ಷದ ಅಂಕಪಟ್ಟಿಗಳು, ಅನುಭವ ಪ್ರಮಾಣ ಪತ್ರಗಳು, ಕಂಪ್ಯೂಟರ್ ಜ್ಞಾನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಲಗತ್ತಿಸುವುದು ಕಡ್ಡಾಯವಾಗಿರುತ್ತದೆ ಮತ್ತು ಎಲ್ಲಾ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿಗಳನ್ನು ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗಾಗಿ ಆತ್ಮ ವಿಭಾಗ, ಜಂಟಿ ಕೃಷಿ ನಿರ್ದೇಶಕರ ಕಛೇರಿ, ಚಿತ್ರದುರ್ಗ ಇಲ್ಲಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾತ್ರೆ ಮರುಳೋ ಜನ ಮರುಳೋ ಯಾವುದಯ್ಯ ಹುರಳು?ಐಶ್ವರ್ಯ ಕರಗುತ್ತದೆ, ಆದರ್ಶ ಉಳಿಯುತ್ತದೆಭೋವಿ ಸಮುದಾಯದ ಪ್ರಮುಖ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಇಮ್ಮಡಿ ಸ್ವಾಮೀಜಿ ಮನವಿಚಿತ್ರದುರ್ಗದಲ್ಲಿ ಜುಲೈ 29ಕ್ಕೆ ಗುರುಪೂರ್ಣಿಮೆ ಪ್ರಯುಕ್ತ 'ಗುರುವಂದನೆ'ಜೋಗಿ ಸಮುದಾಯ ಭವನ ನಿರ್ಮಾಣಕ್ಕೆ ₹2 ಕೋಟಿ ಅನುದಾನ ಹಾಗೂ ಹಕ್ಕುಪತ್ರ ವಿತರಣೆಗೆ ಮನವಿ2028ರ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ರಾಜಕೀಯ ಸಂನ್ಯಾಸದ ಸುಳಿವು ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯವಿದ್ಯಾರ್ಥಿ ಹೋರಾಟದ ನೆಪದಲ್ಲಿ ಬೆಂಕಿ ಹಚ್ಚಲು ಯತ್ನಿಸಿದ 'ಮುಲ್ಲಾ'ನ ಕೃತ್ಯ ಖಂಡಿಸಿದ್ದೇನೆಯೇ ಹೊರತು ಮುಸ್ಲಿಂ ಸಮುದಾಯವನ್ನಲ್ಲ: ಸಿ.ಟಿ. ರವಿ ಸ್ಪಷ್ಟನೆ ಕಾರ್ಯಕರ್ತರೊಂದಿಗೆ 'ಮನ್ ಕೀ ಬಾತ್' ವೀಕ್ಷಿಸಿದ ಬಿ.ವೈ. ವಿಜಯೇಂದ್ರ ದೋಷರಹಿತ ಮತದಾರರ ಪಟ್ಟಿಯೇ ಸದೃಢ ಪ್ರಜಾಪ್ರಭುತ್ವದ ಅಡಿಪಾಯ: ಆರ್. ಅಶೋಕ್ ಮನೆ ಮನೆ ಅಭಿಯಾನಕೇಂದ್ರ ಸಚಿವರು ರಾಜೀನಾಮೆ ನೀಡಿದ್ದಾರೆ; ದುರಂತಗಳಿಗೆ ಯಾರು ಹೊಣೆ? - ಆರ್. ಅಶೋಕ್ ಪ್ರಶ್ನೆ